ಸಂತೋಷ್‌ನಗರದಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆ; ಆಕ್ರೋಶ

 ರುದ್ರಭೂಮಿಗೆ ಮೀಸಲಿಟ್ಟ ಜಾಗದಲ್ಲಿ ಬಾವಿ ನಿರ್ಮಾಣ

Team Udayavani, Feb 18, 2020, 5:44 AM IST

1702KDPP7

ಹೆಮ್ಮಾಡಿ: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಂತೊಷ್‌ನಗರದಲ್ಲಿ ಹಿಂದೂ ರುದ್ರಭೂಮಿಗೆ ಮೀಸಲಿಟ್ಟ ಜಾಗದಲ್ಲಿ ಜಿಲ್ಲಾ ಪಂಚಾಯತ್‌ನಿಂದ ಬಿಡುಗಡೆಯಾದ ಅನುದಾನದಲ್ಲಿ ಸಾರ್ವಜನಿಕ ಬಾವಿ ನಿರ್ಮಾಣಕ್ಕೆ ಮುಂದಾಗಿರುವುದು ಗ್ರಾಮಸ್ಥರ ಆಕ್ರೋಶ ಕಾರಣ ವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸ್ಥಳೀಯ ಗ್ರಾಮ ಸ್ಥರೆಲ್ಲ ಸೇರಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ.

ಹೆಮ್ಮಾಡಿ ಗ್ರಾ.ಪಂ.ನ ಎಲ್ಲ ಹಿಂದೂಗಳಿಗೆ ಹೆಣ ಸುಡಲು ಇರುವ ರುದ್ರಭೂಮಿ ಇದೊಂದೆ ಆಗಿದೆ. 10 ಸೆಂಟ್ಸ್‌ ಜಾಗದಲ್ಲಿರುವ ಈ ರುದ್ರಭೂಮಿಯ ದುರಸ್ತಿಗೆ ಪಂಚಾಯತ್‌ ಈವರೆಗೆ ಮುಂದಾಗಿಲ್ಲ. ಆದರೆ ಅದರ ಜಾಗದಲ್ಲಿ ಈಗ ಬಾವಿ ತೋಡಲು ಮುಂದಾಗಿದ್ದೀರ. ಸಾರ್ವಜನಿಕರ ನೀರಿಗಾಗಿ ಬಾವಿ ಬೇಕು ಎನ್ನುವುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಅದಕ್ಕೆ ಪಂಚಾಯತ್‌ ವ್ಯಾಪ್ತಿಯಲ್ಲಿ ಬೇರೆ ಬೇರೆ ಕಡೆ ಇರುವ ಜಾಗವನ್ನು ಬಳಸಿಕೊಳ್ಳಬಹುದು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡರು.

ಬೇರೆ ಜಾಗ ಇಲ್ಲವೇ?
ಇದು ಹೆಮ್ಮಾಡಿ ಪಂಚಾಯತ್‌ ವ್ಯಾಪ್ತಿಯಲ್ಲಿಯೇ ಇರುವ ಎತ್ತರದ ಪ್ರದೇಶ. ಇಲ್ಲಿ ನೀರು ಕೆಳಮಟ್ಟದಲ್ಲಿದೆ. ಇಲ್ಲಿ ಬಾವಿ ತೋಡಿದರೂ ನೀರಿನ ಲಭ್ಯತೆ ಬಗ್ಗೆ ಸ್ಪಷ್ಟತೆ ಇಲ್ಲ. ಆದರೂ ಇಲ್ಲಿ ತೋಡಲು ಮುಂದಾಗಿರುವುದು ಎಷ್ಟು ಸರಿ. ಪಂಚಾಯತ್‌ ಅಧೀನದ ಸರಕಾರಿ ಜಾಗ ಇದ್ದರೂ, ಅದನ್ನು ಕೆಲವರ ಒತ್ತುವರಿ ಮಾಡಿಕೊಂಡಿದ್ದಾರೆ. ಅದನ್ನು ತೆರವು ಮಾಡಿ, ಅಲ್ಲಿ ಬಾವಿ ತೊಡಲಿ ಎಂದು ಪ್ರತಿಭಟನಕಾರರರಾದ ಜನಾರ್ದನ ಪೂಜಾರಿ ಆಗ್ರಹಿಸಿದರು.

ಇನ್ನು ಪ್ರತಿಭಟನಾ ಸ್ಥಳಕ್ಕೆ ಜಿ.ಪಂ. ಸದಸ್ಯ ಶೋಭಾ ಜಿ. ಪುತ್ರನ್‌ ಭೇಟಿ ನೀಡಿದ್ದು, ಇದು ರುದ್ರಭೂಮಿಗೆ ಮೀಸಲಿಟ್ಟ ಜಾಗವೆಂದು ಗೊತ್ತಿರಲಿಲ್ಲ. ಪಂಚಾಯತ್‌ನವರೇ ನಿರ್ಣಯ ಮಾಡಿ ತೋರಿಸಿದ ಜಾಗ. ಹಾಗಾಗಿ ಇಲ್ಲಿ ಬಾವಿ ತೆಗೆಯಲಾಗುತ್ತಿದೆ ಎಂದವರು ಸ್ಪಷ್ಟಪಡಿಸಿದರು.

ಬೇರೆಲ್ಲೋ ಸರಕಾರಿ ಜಾಗ ಇಲ್ಲದಿರು ವುದರಿಂದ ಹಾಗೂ ಕೆಲವು ಕಡೆಗಳಲ್ಲಿ ಜಾಗ ಇದ್ದರೂ ಅಲ್ಲಿ ನೀರಿನ ಪ್ರಮಾಣ ಅಷ್ಟೇನು ಇಲ್ಲದಿರುವ ಕಾರಣ ಪಂಚಾಯತ್‌ನಿಂದ ಇಲ್ಲಿ ಬಾವಿ ತೋಡಲು ನಿರ್ಧರಿಸಲಾಯಿತು ಎನ್ನುವುದಾಗಿ ಹೆಮ್ಮಾಡಿ ಗ್ರಾ.ಪಂ. ಪಿಡಿಒ ಮಂಜು ಬಿಲ್ಲವ ಪ್ರತಿಭಟನಾಕಾರರಿಗೆ ತಿಳಿಸಿದರು. ಸ್ಥಳೀಯ ಗ್ರಾ.ಪಂ. ಸದಸ್ಯೆ ಆಶಾ ಪಡುಮನೆ ಭೇಟಿ ನೀಡಿದರು.

ಈ ಪ್ರತಿಭಟನೆಯಲ್ಲಿ ರಾಘವೇಂದ್ರ ಕುಲಾಲ್‌, ರತ್ನಾಕರ ಪೂಜಾರಿ, ಪ್ರಶಾಂತ್‌ ಪಡುಮನೆ, ಆನಂದ ಪೂಜಾರಿ ಪಡುಮನೆ, ಉಮೇಶ್‌ ಮೊಗವೀರ, ಸಂತೋಷ್‌ ಮತ್ತಿತರರು ಪಾಲ್ಗೊಂಡಿದ್ದರು.

ಕಾಮಗಾರಿ ಸ್ಥಗಿತ
ಕಳೆದ 2-3 ದಿನಗಳಿಂದ ಇಲ್ಲಿ ಜಿ.ಪಂ. ಅನುದಾನದಲ್ಲಿ ಮಂಜೂರಾದ 8 ಲಕ್ಷ ರೂ. ವೆಚ್ಚದಲ್ಲಿ ಬಾವಿ ತೋಡುವ ಕಾಮಗಾರಿ ನಡೆಯುತ್ತಿತ್ತು. ಆದರೆ ಗ್ರಾಮಸ್ಥರಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ ಈಗ ಬಾವಿ ತೋಡುವ ಕಾರ್ಯವನ್ನು ಸ್ಥಳೀಯ ಪಂಚಾಯತ್‌ ಸ್ಥಗಿತಗೊಳಿಸಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.