ಹಾನಿಗೀಡಾದ ಮನೆಗಳಿಗೆ ಪರಿಹಾರ ಆಗ್ರಹಿಸಿ ಪ್ರತಿಭಟನೆ


Team Udayavani, Aug 7, 2017, 7:25 AM IST

hanigeedada-mane.jpg

ಕಾಪು: ಐಎಸ್‌ಪಿಆರ್‌ಎಲ್‌ ಕಚ್ಚಾ ತೈಲ ಸಂಗ್ರಹಾಗಾರಕ್ಕಾಗಿ ಪಾದೂರು – ತೋಕೂರು ವರೆಗಿನ ಪೈಪ್‌ಲೈನ್‌ ಕಾಮಗಾರಿ ಸಂದರ್ಭ ಭೂಗತ ಬಂಡೆ ಕಲ್ಲುಗಳನ್ನು ಒಡೆಯುವಾಗ ಹಾನಿಗೀಡಾಗಿರುವ ಪರಿಸರದ ಮನೆಗಳಿಗೆ ಶೀಘ್ರ ಪರಿಹಾರ ನೀಡುವಂತೆ ಆಗ್ರಹಿಸಿ ಪಾದೂರು – ಕಳತ್ತೂರು ಹಾಗೂ ಪರಿಸರದ ಗ್ರಾಮಸ್ಥರು ರವಿವಾರ ಬೆಳಗ್ಗೆ ಕಾಮಗಾರಿಗೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದರು.

ಕಾಪು ಪುರಸಭೆಯ ವಿಪಕ್ಷ ನಾಯಕ ಅರುಣ್‌ ಶೆಟ್ಟಿ ಪಾದೂರು, ಮಜೂರು ಗ್ರಾ.ಪಂ. ಅಧ್ಯಕ್ಷ ಸಂದೀಪ್‌ ರಾವ್‌, ಉಪಾಧ್ಯಕ್ಷೆ ಸಹನಾ ತಂತ್ರಿ, ಜಿ.ಪಂ. ಸದಸ್ಯೆ ಶಿಲ್ಪಾ ಸುವರ್ಣ, ಜನಜಾಗೃತಿ ಸಮಿತಿಯ ಪಯ್ನಾರು ಶಿವರಾಮ ಶೆಟ್ಟಿ, ವಿಜಯ ತಂತ್ರಿ, ಗಣೇಶ್‌ ಶೆಟ್ಟಿ, ಕವಿತಾ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಜನತೆಗೆ ಬದುಕುವ ಹಕ್ಕಿದೆ
ಕಾಪು ಶಾಸಕ ವಿನಯಕುಮಾರ್‌ ಸೊರಕೆ ಹಾಗೂ ಪಂಚಾಯತ್‌ ಪ್ರತಿನಿಧಿಗಳ ರಾಜ್ಯ ಒಕ್ಕೂಟದ ಉಪಾಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಭೇಟಿ ನೀಡಿದರು. ಶಾಸಕ ವಿನಯಕುಮಾರ್‌ ಸ್ಥಳೀಯ ಸಂತ್ರಸ್ತರಲ್ಲಿ ಧೈರ್ಯ ತುಂಬಿದ್ದು ಪೊಲೀಸರು ಪ್ರಕರಣ ದಾಖಲಿಸು ವುದಾದರೆ ನನ್ನ ವಿರುದ್ಧವೂ ದಾಖಲಿ ಸಲಿ. ಮೊದಲಿಗೆ ಐಎಸ್‌ಪಿಆರ್‌ಎಲ್‌ ಕಂಪೆನಿಯು ನಷ್ಟದ ಪರಿಹಾರ ಧನ ವಿತರಿಸಲಿ. ಎಲ್ಲರಿಗೂ ಬದುಕುವ ಹಕ್ಕಿದೆ ಎಂದಿದ್ದಾರೆ.

114 ಮನೆಗಳಿಗೆ ಹಾನಿ
ಜನಜಾಗೃತಿ ಸಮಿತಿಯ ಅಧ್ಯಕ್ಷ ಅರುಣ್‌ ಶೆಟ್ಟಿ ಪಾದೂರು ಈ ಸಂದರ್ಭದಲ್ಲಿ ಮಾತನಾಡುತ್ತಾ ಪಾದೂರು- ತೋಕೂರು ವರೆಗಿನ ಪೈಪ್‌ಲೈನ್‌ ಕಾಮಗಾರಿಯ ಸಂದರ್ಭ ಬಂಡೆ ಸ್ಫೋಟದಿಂದ ಕಳತ್ತೂರು ಮತ್ತು ಪಾದೂರು ಗ್ರಾಮದ 114 ಮನೆಗಳಿಗೆ ಹಾನಿಯಾಗಿದೆ. ಆದರೆ ನೈಜ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಈ ಬಗ್ಗೆ ಸ್ಥಳೀಯ ಶಾಸಕ ವಿನಯಕುಮಾರ್‌ ಸೊರಕೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿದ್ದೇವೆ. ಜಿಲ್ಲಾಧಿಕಾರಿಯವರಿಗೆ ಶಾಸಕರು ತಿಳಿಸಿದ್ದರೂ ಈ ತನಕ ಯಾವುದೇ ಪರಿಹಾರ ನೀಡಿಲ್ಲ. ಕಳೆದ ಒಂದು ತಿಂಗಳಿನಿಂದ ನಾವು ನಿರಂತರವಾಗಿ ಅಧಿಕಾರಿಗಳನ್ನು ಸಂಪರ್ಕಿಸುತ್ತಿದ್ದರೂ  ಯಾವುದೇ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ನಾವು ಜನಜಾಗೃತಿ ಸಮಿತಿ ರಚಿಸಿಕೊಂಡು ಪರಿಹಾರ ಧನ ಸಿಗುವ ತನಕ ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಕಂಪೆನಿಯಿಂದ ಮೋಸ
ಸಂತಸ್ತೆ ವೀಣಾ ತಂತ್ರಿ ಮಾತನಾಡಿ, ನಮಗೆ ಕಂಪೆನಿ ಮೋಸ ಮಾಡಿದೆ. ನಾವು ನಿಜವಾದ ಸಂತಸ್ತರಾಗಿದ್ದು ನಮ್ಮನ್ನು ಗುರುತಿಸಲಾಗಿಲ್ಲ. ನಮಗೂ ಶೀಘ್ರವಾಗಿ ಪರಿಹಾರ ಧನ ನೀಡು ವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.