ಜಿಲ್ಲಾಧಿಕಾರಿ ಕಚೇರಿ ಎದುರು ಸರಕಾರಿ ಹುದ್ದೆ ಆಗ್ರಹಿಸಿ ಧರಣಿ
Team Udayavani, Dec 11, 2018, 2:45 AM IST
ಉಡುಪಿ: ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ವಡ್ಡರ್ಸೆ ಗ್ರಾಮದ ದೇವೇಂದ್ರ ಸುವರ್ಣ ಸೋಮವಾರ ಸಾಂಕೇತಿಕ ಧರಣಿ ನಡೆಸಿದ್ದಾರೆ. ದೇವೇಂದ್ರ ಸುವರ್ಣ ಅವರು ಅಪಘಾತದಲ್ಲಿ ಶಾಶ್ವತ ಅಂಗವಿಕಲರಾಗಿದ್ದಾರೆ. ಅವರ ಸಹೋದರ (ತಮ್ಮ) ಶಶಿಧರ ಸುವರ್ಣ ಮೆಸ್ಕಾಂನಲ್ಲಿ ಕರ್ತವ್ಯ ನಿರತರಾಗಿರುವಾಗಲೇ ಮೃತಪಟ್ಟಿದ್ದರು. ಅವರ ಇಡೀ ಕುಟುಂಬವು ಅವರ ತಮ್ಮನನ್ನೇ ಅವಲಂಬಿತವಾಗಿತ್ತು. ಈ ಕಾರಣ ಮಾನವೀಯ ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ತನಗೆ ಸರಕಾರಿ ಹುದ್ದೆ ನೀಡುವಂತೆ 4 ವರ್ಷಗಳಿಂದ ಪ್ರಯತ್ನಿಸಿದರೂ ಫಲಕಾರಿಯಾಗದ ನೆಲೆಯಲ್ಲಿ ದೇವೇಂದ್ರ ಸುವರ್ಣರು ಧರಣಿ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ 5 ಬಾರಿ ಭಾಗವಹಿಸಿದ್ದಲ್ಲದೆ, ಮುಖ್ಯಮಂತ್ರಿಗಳ ಮನೆಗೆ ಖುದ್ದಾಗಿ 10 ಬಾರಿ ಭೇಟಿ ನೀಡಿ ಸಮಸ್ಯೆಯನ್ನು ತೋಡಿಕೊಂಡಿದ್ದೇನೆ. ಇದುವರೆಗೂ ಅಂಗವಿಕಲನಾದ ನನಗೆ ಮಾನವೀಯತೆ ತೋರದೆ 20 ಬಾರಿ ಬೆಂಗಳೂರಿಗೆ ನನ್ನನ್ನು ತಿರುಗಿಸಿ ಅವಮಾನಿಸಿದ್ದಲ್ಲದೆ, ನನ್ನ ಆರ್ಥಿಕ ಪರಿಸ್ಥಿತಿ ಕುಂಠಿತವಾಗುವಂತೆಯೂ ಮಾಡಿದ್ದಾರೆ. ಇದರಿಂದ ಸಾಕಷ್ಟು ಮಾನಸಿಕ ನೋವನ್ನು ಅನುಭವಿಸುತ್ತಿದ್ದೇನೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್