ಪಿಯು ಅತಿಥಿ ಉಪನ್ಯಾಸಕರಿಗಿಲ್ಲ ಗೌರವಧನ ಹೆಚ್ಚಳ ಭಾಗ್ಯ: ಇವರ ಮಾಸಿಕ ಸಂಭಾವನೆ ಈಗಲೂ 9 ಸಾವಿರ!


Team Udayavani, Jun 23, 2022, 7:30 AM IST

thumb guest lecture 3

ಉಡುಪಿ: ಸರಕಾರಿ ಶಾಲೆ ಮತ್ತು ಪದವಿ ಕಾಲೇಜುಗಳ ಅತಿಥಿ ಶಿಕ್ಷಕ, ಉಪನ್ಯಾಕರ ಮಾಸಿಕ ಗೌರವಧನವನ್ನು ಪರಿಷ್ಕರಿಸಲಾಗಿದೆ. ಆದರೆ ಸರಕಾರಿ ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರು ಮಾತ್ರ ಕನಿಷ್ಠ ವೇತನಕ್ಕಿಂತಲೂ ಕಡಿಮೆ ಗೌರವಧನ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ 1,250ಕ್ಕೂ ಅಧಿಕ ಸರಕಾರಿ ಪದವಿಪೂರ್ವ ಕಾಲೇಜುಗಳಿದ್ದು, 3,267 ಅತಿಥಿ ಉಪನ್ಯಾಸಕರಿದ್ದಾರೆ. ಅವರಿಗೆ ಮಾಸಿಕ 9 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ 9 ಸಾವಿರ ರೂ. ಯಾವುದಕ್ಕೂ ಸಾಲದು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದ್ದರೂ ಸರಕಾರ ಪರಿಷ್ಕರಣೆ ಮಾಡುತ್ತಿಲ್ಲ.

ಕಾಲೇಜಿನ ಕಾರ್ಯಭಾರಕ್ಕೆ ಅನುಗುಣವಾಗಿ ಇವರು ಸೇವೆ ಸಲ್ಲಿಸಬೇಕಾಗುತ್ತದೆ. ಅತಿಥಿ ಉಪನ್ಯಾಸಕರಿಗೆ ಬೇರೆ ಉದ್ಯೋಗ ಮಾಡುವುದು ಕಷ್ಟ. ಬೆಳಗ್ಗೆ ಅಥವಾ ಮಧ್ಯಾಹ್ನ ಎರಡೆರೆಡು ತರಗತಿ ಇದ್ದರೆ ಬೇರೆ ಉದ್ಯೋಗಕ್ಕೆ ಸಮಯ ಹೊಂದಿಸಿಕೊಳ್ಳಲು ಸಾಧ್ಯವಿಲ್ಲ. ಪೂರ್ಣ ಇದರಲ್ಲೇ ಇದ್ದರೆ ಜೀವನ ನಡೆಸುವುದು ಕಷ್ಟ.

ಯಾರ್ಯಾರಿಗೆ ಗೌರವ ಧನ
ಎಷ್ಟಿತ್ತು? ಈಗ ಎಷ್ಟಾಗಿದೆ?
ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಮಾಸಿಕ 15 ಸಾವಿರ ರೂ.ನೀಡುತ್ತಿದ್ದರು. ಕಳೆದ ವರ್ಷ ರಾಜ್ಯ ಸರಕಾರದ ಇವರ ಗೌರವಧವನ್ನು ಪರಿಷ್ಕರಿಸಿದೆ. ಅದರಂತೆ ಐದು ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಅತಿಥಿ ಉಪನ್ಯಾಸಕರಾಗಿದ್ದು ಯುಜಿಸಿಯ ವಿದ್ಯಾರ್ಹತೆ (ನೆಟ್‌, ಪಿಎಚ್‌.ಡಿ ಇತ್ಯಾದಿ) ಹೊಂದಿದ್ದರೆ 32 ಸಾವಿರ ರೂ., ಐದು ವರ್ಷಕ್ಕಿಂತಲೂ ಹೆಚ್ಚುಕಾಲ ಅತಿಥಿ ಉಪನ್ಯಾಸಕರಾಗಿದ್ದು ಯುಜಿಸಿ ವಿದ್ಯಾರ್ಹತೆ ಹೊಂದಿಲ್ಲದಿದ್ದರೆ 28 ಸಾವಿರ ರೂ. ಹಾಗೂ 5 ವರ್ಷಕ್ಕಿಂತ ಕಡಿಮೆ ಅನುಭವ, ಯುಜಿಸಿ ವಿದ್ಯಾರ್ಹತೆ ಇಲ್ಲದೇ ಇದ್ದರೆ 26 ಸಾವಿರ ರೂ. ನೀಡಲಾಗುತ್ತದೆ.

ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿದ್ದವರಿಗೆ 7,500 ರೂ. ನೀಡುತ್ತಿದ್ದರು. ಈಗ 10 ಸಾವಿರ ರೂ.ಗೆ ಏರಿಸಲಾಗಿದೆ. ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ 8 ಸಾವಿರ ರೂ. ನೀಡುತ್ತಿದ್ದು, ಈಗ 10,500 ರೂ.ಗೆ ಏರಿಸಲಾಗಿದೆ. ಆದರೆ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕರಿಗೆ ಅನೇಕ ವರ್ಷಗಳಿಂದ 9 ಸಾವಿರ ರೂ. ಮಾತ್ರ ನೀಡುತ್ತಿದ್ದು, ಪರಿಷ್ಕರಣೆಯೇ ಆಗಿಲ್ಲ.

ಬೇಡಿಕೆ ಏನು?
ಪದವಿ ಹಾಗೂ ಶಾಲೆಯ ಅತಿಥಿ ಉಪನ್ಯಾಸಕ, ಶಿಕ್ಷಕರಿಗೆ ಈಗಾಗಲೇ ಗೌರವ ಧನ ಪರಿಷ್ಕರಣೆ ಮಾಡಲಾಗಿದೆ. ಆದರೆ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಕಳೆದ ಐದಾರು ವರ್ಷದಿಂದ ಒಮ್ಮೆಯೂ ವೇತನ ಪರಿಷ್ಕರಣೆ ಮಾಡಿಲ್ಲ. ಶೈಕ್ಷಣಿಕ ಕಾರ್ಯಭಾರದ ಆಧಾರದಲ್ಲಿ ತರಗತಿಗಳನ್ನು ನಡೆಸುವ ನಮಗೆ ಸರಕಾರದ ಕನಿಷ್ಠ ವೇತನ ನೀತಿಯಂತೆಯೂ ವೇತನ ಸಿಗುತ್ತಿಲ್ಲ. ಹೀಗಾಗಿ ಕನಿಷ್ಠ ತಿಂಗಳಿಗೆ 20 ಸಾವಿರ ರೂ. ಗೌರವಧನ ನೀಡಬೇಕು ಎಂಬ ಬೇಡಿಕೆಯನ್ನು ಅತಿಥಿ ಉಪನ್ಯಾಸಕರು ಸರಕಾರದ ಮುಂದಿಟ್ಟಿದ್ದಾರೆ.

ಚರ್ಚೆ ನಡೆಯುತ್ತಿದೆ
ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಸಂಬಂಧ ಸರಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಈವರೆಗೆ ಯಾವುದೇ ನಿರ್ಧಾರ ಆಗಿಲ್ಲ. ಈಗಾಗಲೇ ಪದವಿ ಹಾಗೂ ಶಾಲೆಯ ಅತಿಥಿ ಶಿಕ್ಷಕ, ಉಪನ್ಯಾಸಕರ ಗೌರವಧನ ಪರಿಷ್ಕರಿಸಿರುವುದರಿಂದ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕರ ಗೌರವಧನವನ್ನು ಪರಿಷ್ಕರಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಬೇಕು ಎಂದು ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಅನೇಕ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ತರಗತಿ ನಡೆಸುವುದೇ ಕಷ್ಟ. ಕನಿಷ್ಠ 20 ಸಾವಿರ ರೂ. ಗೌರವಧನ ನೀಡಲು ತತ್‌ಕ್ಷಣವೇ ಆದೇಶ ಹೊರಡಿಸುವಂತೆ ಎರಡು ದಿನದೊಳಗೆ ಸರಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಿದ್ದೇವೆ.
– ಎ.ಎಚ್‌. ನಿಂಗೇಗೌಡ, ಅಧ್ಯಕ್ಷ,
ಸರಕಾರಿ ಪಿಯು ಕಾಲೇಜು ಉಪನ್ಯಾಸಕರ ಸಂಘ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.