ಪೂರ್ಣಾಂಕ ಸಾಧಕನ ಕೆಲಸಕ್ಕೆ ಇನ್ನು ಅಲ್ಪ ವಿರಾಮ !

ಮನೆಯಲ್ಲಿ ಬಡತನ; ಮಲ್ಪೆಯ ಸರಕಾರಿ ಶಾಲೆಯಲ್ಲಿ ಕಲಿಕೆ

Team Udayavani, Jun 6, 2022, 7:35 AM IST

ಪೂರ್ಣಾಂಕ ಸಾಧಕನ ಕೆಲಸಕ್ಕೆ ಇನ್ನು ಅಲ್ಪ ವಿರಾಮ !

ಮಲ್ಪೆ : ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣಾಂಕ ಗಳಿಸಿದ ಸಾಧನೆ ಪುನೀತ್‌ ನಾಯ್ಕನ ಜೀವನ ವಿಧಾನದಲ್ಲಿ ಯಾವುದೇ ಬದಲಾವಣೆ ತಂದಿಲ್ಲ. ಫ‌ಲಿತಾಂಶದ ಮರುದಿನದಿಂದ ಈವರೆಗೂ ಯಾವುದೇ ಹಮ್ಮು ಬಿಮ್ಮು ಇಲ್ಲದೆ ಮಲ್ಪೆಯಲ್ಲಿ ಮೀನು ಹೊರುವ ಕಾಯಕ ಮುಂದುವರಿಸಿರುವ ಆತ ಇನ್ನು ಪ್ರಥಮ ಪಿಯುಸಿ ತರಗತಿಗೆ ಹಾಜರಾಗಲಿದ್ದಾನೆ.

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನಿನ ಬುಟ್ಟಿಗಳನ್ನು ಹೊತ್ತು ಕೂಲಿ ಮಾಡಿ ಬದುಕು ನಡೆಸುತ್ತಿದ್ದ ಕೊಪ್ಪಳ ಜಿಲ್ಲೆಯ ಯಲಬುರ್ಗಿ ತಾಲೂಕಿನ ವಲಸೆ ಕಾರ್ಮಿಕರ ಮಗ, ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಎಸೆಸೆಲ್ಸಿ ವಿದ್ಯಾರ್ಥಿ ಪುನೀತ್‌ ನಾಯ್ಕ 625ರಲ್ಲಿ 625 ಅಂಕ ಪಡೆದು ರಾಜ್ಯವೇ ತನ್ನತ್ತ ತಿರುಗಿ ನೋಡುವಂತ ಸಾಧನೆ ಮಾಡಿದ್ದಾನೆ. ಆದರೆ ಈತ ತಾನು ಟಾಪರ್‌ ಆಗಿದ್ದರೂ ಯಾವುದೇ ಹಮ್ಮು ಬಿಮ್ಮು ಇಲ್ಲದೆ ಮರುದಿನ ಎಂದಿನಂತೆ ಮೀನು ಹೊರುವ ಕೆಲಸಕ್ಕೆ ಹಾಜರಾಗಿದ್ದಾನೆ. ಮಲ್ಪೆ ಬಂದರಿನಲ್ಲಿ ಜೂ. 5, ರವಿವಾರದ ವರೆಗೆ ಮೀನು ಖಾಲಿ ಮಾಡಲು ಅವಕಾಶ ಇದ್ದುದರಿಂದ ಅಲ್ಲಿಯತನಕವೂ ಈತ ಕೆಲಸ ಮಾಡಿದ್ದಾನೆ. ಇನ್ನು ಸ್ವಲ್ಪಸಮಯ ಮೀನುಗಾರಿಕೆಗೆ ನಿಷೇಧ ಇರುವುದರಿಂದ ಪುನೀತನ ಕೆಲಸಕ್ಕೂ ಅಲ್ಪ ವಿರಾಮ.

ಕಲ್ಲಪ್ಪ ಮತ್ತು ಲಲಿತಾ ದಂಪತಿ 10 ವರ್ಷದ ಹಿಂದೆ ಜೀವನೋಪಾಯಕ್ಕಾಗಿ ಉಡುಪಿಗೆ ಬಂದಿದ್ದರು. ಆ ಬಳಿಕ ಕಲ್ಲಪ್ಪ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ತ್ಯಜಿಸಿಹೋದ ಕಾರಣ ಮಕ್ಕಳನ್ನು ಸಾಕುವ ಜವಾಬ್ದಾರಿಯನ್ನು ಹೊತ್ತ ಲಲಿತಾ ಕಲ್ಮಾಡಿಯಲ್ಲಿ ಬಾಡಿಗೆ ಮನೆಯೊಂದನ್ನು ಪಡೆದು ಮುಂಜಾನೆ 4 ಗಂಟೆಗೆ ಬಂದರಿಗೆ ಹೋಗಿ ಮೀನು ಹೊತ್ತು ಬದುಕಿನ ನೊಗ ಹಿಡಿದರು. ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ, ಇಬ್ಬರು ಗಂಡು ಮಕ್ಕಳಾದ ಕಿರಣ್‌, ಪುನೀತ್‌ಗೆ ಶಿಕ್ಷಣ ಕೊಡಿಸಿದರು.

ಕೊರೊನಾದಿಂದ ತತ್ತರಿಸಿದ ಬದುಕು
3 ವರ್ಷಗಳ ಹಿಂದೆ ಕೊರೊನಾದಿಂದ ಬದುಕು ತತ್ತರಿಸಿದ ಸಂದರ್ಭದಲ್ಲಿ ಕಿರಣ್‌ ಮತ್ತು ಪುನೀತ್‌ ತಾಯಿಗೆ ಹೆಗಲು ಕೊಟ್ಟು ದುಡಿದರು. ಅಂದಿನಿಂದ ಇವತ್ತಿನವರೆಗೂ ಪುನೀತ್‌ ಬೆಳಗ್ಗೆ 4 ಗಂಟೆಗೆ ಎದ್ದು 9ರ ವರೆಗೆ ಬಂದರಿನಲ್ಲಿ ಮೀನು ಹೊತ್ತು ಸಿಕ್ಕ ಹಣವನ್ನು ತಾಯಿಗೆ ನೀಡಿ ಬಳಿಕ ಶಾಲೆಗೆ ಹೋಗುತ್ತಿದ್ದ. ತಾನು ಕಲಿಯುವ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದರೂ ಪುನೀತ್‌ ಮಾತ್ರ ಯಾವುದೇ ಟ್ಯೂಶನ್‌ ಪಡೆಯದೇ ಸಾಧನೆ ಮಾಡಿದ್ದಾನೆ. ಪ್ರಸ್ತುತ ಪುನೀತ್‌ ಕಡಿಯಾಳಿಯ ಜ್ಞಾನಸುಧಾ ಪಿ.ಯು.ಕಾಲೇಜಿಗೆ ಸೇರಿದ್ದಾನೆ. ಮುಂದಿನ ಶಿಕ್ಷಣದ ಬಗ್ಗೆ ಯಾವುದೇ ರೀತಿಯ ನೆರವನ್ನು ನೀಡಲು ಸಿದ್ದನಿದ್ದೇನೆ ಎಂದು ಬೆಳಗಾವಿ ಜಿಲ್ಲೆಯ ಕುಡಜಿ ಶಾಸಕ ರಾಜೀವ ಎಂಬವರು ಫೋನ್‌ ಮಾಡಿ ತಿಳಿಸಿದ್ದಾರೆ ಎನ್ನುತ್ತಾನೆ ಪುನೀತ್‌.

ಮನೆಗೆ ತೆರಳಿ ಅಭಿನಂದನೆ
ಕೆಲಸಕ್ಕೆ ಹೋದರೂ ಶಾಲೆಗೆ ಎಂದೂ ಗೈರಾಗು ತ್ತಿರಲಿಲ್ಲ. ಶಾಲೆ ಬಿಟ್ಟ ಅನಂತರ ರಾತ್ರಿಯ ವರೆಗೆ ಮನೆಯಲ್ಲಿ ಓದು. ಮುಂದೆ ಜಿಲ್ಲಾಧಿ ಕಾರಿ ಯಾಗಬೇಕೆಂಬ ಇರಾದೆ ಇದೆ ಎನ್ನುತ್ತಾರೆ ಪುನೀತ್‌ ನಾಯ್ಕ. ಅವರ ಸಾಧನೆಯನ್ನು ಕಂಡು ಜಿಲ್ಲಾಡಳಿತ ಸೇರಿದಂತೆ ಹಲವಾರು ಮಂದಿ ಸಮ್ಮಾನ ಮಾಡಿದ್ದಾರೆ. ಶಾಸಕ ಕೆ. ರಘುಪತಿ ಭಟ್‌, ಶಾಲಾ ಹಿರಿಯ ಶಿಕ್ಷಕಿ ಸಂಧ್ಯಾ ಹಾಗೂ ಶಿಕ್ಷಕ ವರ್ಗ, ಕೆಎಫ್‌ಡಿಸಿ ಸಮ್ಮಾನಿಸಿದೆ.

ಮನೆಯಲ್ಲಿ ಬಡತನ. ಹಾಗಾಗಿ ಬೆಳಗ್ಗೆ 4 ಗಂಟೆಗೆ ಎದ್ದು ಕೆಲಸಕ್ಕೆ ಹೋಗಿ ತಾಯಿಗೆ ಸಹಾಯ ಮಾಡುತ್ತೇನೆ. ಶಾಲೆಯಲ್ಲಿ ಯಾವುದೇ ಸಂಶಯಗಳಿದ್ದರೆ ಶಿಕ್ಷಕರಲ್ಲಿ ಕೇಳಿಕೊಂಡು ಸಮಸ್ಯೆ ಪರಿಹರಿಸುತ್ತಿದ್ದೆ. ಪೂರ್ಣ ಅಂಕ ಸಿಗುವುದೆಂದು ನಿರೀಕ್ಷೆ ಇತ್ತು. ಎಲ್ಲರ ಪ್ರೋತ್ಸಾಹ, ಶ್ರದ್ಧೆಯಿಂದ ಓದಿದ್ದ ಕಾರಣ ಉನ್ನತ ಅಂಕ ಗಳಿಸಲು ಸಾಧ್ಯವಾಯಿತು.
-ಪುನೀತ್‌ ನಾಯ್ಕ

ಮಗ ಪೂರ್ಣ ಅಂಕ ಗಳಿಸಿರುವುದು ಖುಷಿ ತಂದಿದೆ. ಎಲ್ಲರೂ ಈಗ ದಾರಿಯಲ್ಲಿ ಕರೆದು ಮಾತನಾಡುವಾಗ ಪುನೀತ್‌ನ ತಾಯಿ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿ¤ದೆ. ಅವನ ಕಲಿಕೆಗೆ ಮುಂದೆಯೂ ತನ್ನಿಂದ ಸಾಧ್ಯವಾದಷ್ಟು ಪ್ರೋತ್ಸಾಹ ನೀಡುತ್ತೇನೆ.
-ಲಲಿತಾ, ಪುನೀತ್‌ ತಾಯಿ

-ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.