ಶುದ್ಧ ಕುಡಿಯುವ ನೀರಿನ ಸವಾಲು: ಇರಲಿ ಕಣ್ಗಾವಲು


Team Udayavani, Apr 2, 2019, 6:30 AM IST

water

ಉಡುಪಿ: ಅಂತರ್ಜಲ ಬತ್ತುತ್ತಿರುವುದರಿಂದ ನೀರಿನ ಮೂಲಗಳು ಅಳಿಯುತ್ತಿವೆ. ಇದರ ಜತೆಗೆ ಅಳಿದುಳಿದ ನೀರಿನ ಮೂಲಗಳ ಶುದ್ಧತೆಯ ಪ್ರಶ್ನೆ ಎದುರಾಗಿದೆ. ಸಾರ್ವಜನಿಕ ಕುಡಿಯುವ ನೀರು ಪೂರೈಕೆ ಹಾಗೂ ಖಾಸಗಿ ಬಳಕೆಯ ನೀರಿನ ಮೂಲಗಳ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಬೇಕಾದ ಆವಶ್ಯಕತೆ ಇದೆ.

ಉಡುಪಿ ಜಿಲ್ಲೆಯಲ್ಲಿ ಫ್ಲೋರೈಡ್‌, ಆರ್ಸೆನಿಕ್‌ ಮೊದಲಾದ ರಾಸಾಯನಿಕಗಳಿಂದ ಸಮಸ್ಯೆ ಎದುರಾಗಿಲ್ಲ. ಅಂಥ ಆತಂಕ ದೂರ. ಆದರೆ ಕೆಲವು ಬ್ಯಾಕ್ಟೀರಿಯಾಗಳುಳ್ಳ (ಇಸೆcàರೀಚಿಯಾ ಕೂಲ್‌ ಇಂಡಿಕೇಟರ್‌ ಬಾಕ್ಟೀರಿಯಾ) ಕಲುಷಿತ ನೀರು ಹಲವೆಡೆ ಗುರುತಿಸಲ್ಪಟ್ಟಿದೆ. ಇದು ನೀರಿನ ಮೂಲಗಳೆಲ್ಲವೂ ಯಾವಾಗಲೂ ಪರಿಶುದ್ಧವಾಗಿಲ್ಲ ಎಂಬುದನ್ನು ದೃಢಪಡಿಸಿವೆ.

6,000ಕ್ಕೂ ಅಧಿಕ ಮೂಲಗಳು ಅಯೋಗ್ಯ!
ಆರೋಗ್ಯ ಇಲಾಖೆಯ ಸರ್ವೇಕ್ಷಣಾ ವಿಭಾಗ ಜಿಲ್ಲೆಯಾದ್ಯಂತ ಕಳೆದೆರಡು ವರ್ಷಗಳಲ್ಲಿ 12,000ಕ್ಕೂ ಅಧಿಕ ಕುಡಿಯುವ ನೀರಿನ ಮೂಲಗಳಿಂದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ ಸುಮಾರು 6,532ಕ್ಕೂ ಅಧಿಕ ನೀರಿನ ಮೂಲಗಳು(ತೆರೆದ ಬಾವಿ/ಕೊಳವೆ ಬಾವಿ/ನಳ್ಳಿ ನೀರು) ವಿವಿಧ ರೀತಿಯ(ಹಾನಿಕರ) ಬ್ಯಾಕ್ಟೀರಿಯಾಗಳಿಂದ ಕೂಡಿದ್ದ ಹಿನ್ನೆಲೆಯಲ್ಲಿ ಕುಡಿಯಲು ಅಯೋಗ್ಯ ಎಂದು ಗುರುತಿಸಲ್ಪಟ್ಟಿದ್ದವು.

2018ರಲ್ಲಿ ಉಡುಪಿ ತಾಲೂಕಿನಲ್ಲಿ 5,975 ನೀರಿನ ಮೂಲಗಳಿಂದ ನೀರನ್ನು(ಮಾದರಿ) ಪರೀಕ್ಷೆಗೊಳಪಡಿಸಲಾಗಿದ್ದು ಅದರಲ್ಲಿ 2,695 ಮೂಲಗಳು ಕುಡಿಯುವ ಬಳಕೆಗೆ ಅಯೋಗ್ಯ ಎಂದು ಗುರುತಿಸಲಾಗಿತ್ತು. ಕುಂದಾಪುರ ತಾಲೂಕಿನಲ್ಲಿ ಸಂಗ್ರಹಿಸಲಾದ 3,876 ನೀರಿನ ಮೂಲಗಳ ನೀರಿನ ಮಾದರಿಯಲ್ಲಿ 1,608 ಮೂಲಗಳು ಅಯೋಗ್ಯವಾಗಿದ್ದವು. ಕಾರ್ಕಳ ತಾಲೂಕಿನಲ್ಲಿ 2,961 ಮೂಲಗಳ ಮಾದರಿ ಸಂಗ್ರಹಿಸಲಾಗಿತ್ತು. ಇದರಲ್ಲಿ 1,424 ಮೂಲಗಳು ಅಯೋಗ್ಯ ಎಂದು ಗುರುತಿಸಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 12,812 ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಅದರಲ್ಲಿ 5,727 ಮೂಲಗಳು ಅಯೋಗ್ಯ ಎಂದು ವರದಿ ಸಲ್ಲಿಸಲಾಗಿತ್ತು. ಈ ಪೈಕಿ ಬಹುತೇಕ ಮೂಲಗಳನ್ನು ಕ್ಲೋರಿನೇಷನ್‌ ಮಾಡಿ ಸ್ವತ್ಛಗೊಳಿಸಲಾಗಿದೆ. 2018ರಲ್ಲಿ 5,529 ಹಾಗೂ 2019ರ ಫೆಬ್ರವರಿವರೆಗೆ 792 ಮೂಲಗಳನ್ನು ಕ್ಲೋರಿನೇಷನ್‌ ಮಾಡಲಾಗಿದೆ ಎನ್ನುತ್ತದೆ ಇಲಾಖಾ ಮಾಹಿತಿ. ಈ ಮೂಲಗಳ ಬಗ್ಗೆ ಆತಂಕ ಬೇಡ.

ಆದರೆ ನೀರಿನ ಮೂಲಗಳಲ್ಲಿ ಸಂದೇಹ ಬಂದರೆ ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರ, ಸ್ಥಳೀಯಾಡಳಿತ ಸಂಸ್ಥೆಗಳಿಗೆ ತಿಳಿಸಬೇಕು. ಮಾದರಿಯನ್ನು ಇಲಾಖೆಗೆ ಕಳುಹಿಸಿಕೊಡಬೇಕು ಎನ್ನುತ್ತಾರೆ ಅಧಿಕಾರಿಗಳು.

ಕುದಿಸಿದ ನೀರು ನೀಡಲು ಸೂಚನೆ
ಎಲ್ಲ ಹೊಟೇಲ್‌ಗ‌ಳಲ್ಲಿ ಕೂಡ ಗ್ರಾಹಕರು ಕೇಳಿದರೆ ಕಡ್ಡಾಯವಾಗಿ ಕುದಿಸಿ ಆರಿಸಿದ ನೀರನ್ನೇ ನೀಡಲು ಸೂಚನೆ ನೀಡಲಾಗಿದೆ. ಆದೇಶ ಮೀರುವ ಹೊಟೇಲ್‌ಗ‌ಳ ವಿರುದ್ಧ ದಂಡ/ ಇತರ ಕ್ರಮ ಕೈಗೊಳ್ಳಲು ಅವಕಾಶವಿದೆ. ಆದರೆ ಸಾಮಾನ್ಯವಾಗಿ ಈ ಭಾಗದಲ್ಲಿ ಹೊಟೇಲ್‌ಗ‌ಳಲ್ಲಿ ತಣ್ಣೀರನ್ನೇ ಕುಡಿಯುವವರು ಹೆಚ್ಚು. ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಸುರಕ್ಷಿತ. ಗ್ರಾ.ಪಂ. ಅಥವಾ ಇತರ ಸ್ಥಳೀಯಾಡಳಿತಗಳು ಪೂರೈಕೆ ಮಾಡುವ ನೀರಿನ ಶುದ್ಧತೆ/ ಗುಣಮಟ್ಟ ಪರೀಕ್ಷಿಸುವುದು, ಶುದ್ಧತೆ ಕಾಪಾಡುವುದು ಆಯಾ ಸ್ಥಳೀಯಾಡಳಿತ ಸಂಸ್ಥೆಗಳ ಜವಾಬ್ದಾರಿ.
-ಡಾ| ವಾಸುದೇವ ರಾವ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ

ಕಲುಷಿತ ನೀರಿನಿಂದ ಬರುವ ಕಾಲರಾ 2016ರಲ್ಲಿ ಉಡುಪಿಯ ಮಲ್ಪೆಯಲ್ಲಿ ಪತ್ತೆಯಾಗಿತ್ತು.
ಒಂದು ತಿಂಗಳ ಹಿಂದೆ ಅತಿಸಾರ ಭೇದಿ ಬೈಂದೂರಿನಲ್ಲಿ ಪತ್ತೆಯಾಗಿದೆ.
ಕಲುಷಿತ ನೀರಿನಿಂದ ತಯಾರಿಸಿದ ಐಸ್‌ಕ್ಯಾಂಡಿ ತಿಂದು 70ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡ ಪ್ರಕರಣ ಇತ್ತೀಚೆಗೆ ಜಿಲ್ಲೆಯ ವಿವಿಧೆಡೆ ನಡೆದಿದೆ.

ಜಿಲ್ಲೆಯಲ್ಲಿ 59 ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯಾಚರಿಸುತ್ತಿವೆ.

ಪ್ರತಿ ಗ್ರಾ.ಪಂ.ಗಳು ಕೂಡ ವರ್ಷಕ್ಕೆ 2 ಬಾರಿ ತಮ್ಮ ಕುಡಿಯುವ ನೀರಿನ ಮೂಲಗಳ ಮಾದರಿಯನ್ನು ಗ್ರಾಮೀಣ ನೀರು ಸರಬರಾಜು ಪೂರೈಕೆ ಇಲಾಖೆಗೆ ಕಳುಹಿಸಲೇಬೇಕು.

ಚೆನ್ನಾಗಿ ಕುದಿಸಿ ಆರಿಸಿದ ನೀರನ್ನು ಬಳಸುವುದು/ ಆರ್‌ಒ ವಾಟರ್‌ ಪ್ಯೂರಿಫ‌ಯರ್‌ಗಳನ್ನು ಬಳಸುವುದು/ಹಾಲೋಜಿನ್‌ ಮಾತ್ರೆಯನ್ನು ಕುಡಿಯುವ ನೀರಿಗೆ ಹಾಕಿ ಬಳಸುವುದು (1 ಲೀ.ಗೆ 1 ಮಾತ್ರೆ) ಸುರಕ್ಷಿತ ಎನ್ನುವುದು ತಜ್ಞರ ಸಲಹೆ.

ಟಾಪ್ ನ್ಯೂಸ್

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.