ಎಂ.ಜಿ.ಎಂ. ಪುಸ್ತಕೋತ್ಸವ : ಓದಿನ ಅಭಿರುಚಿಯನ್ನು ಹೆಚ್ಚಿಸಲು ಹಲವು ಹೊಸ ಪ್ರಯೋಗ


Team Udayavani, Mar 6, 2021, 1:02 PM IST

Untitled-1

ಉಡುಪಿ : ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯುತ್ತಿರುವ ಎರಡು ದಿನದ ಪುಸ್ತಕೋತ್ಸವಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಎಂ.ಜಿ.ಎಂ. ಕಾಲೇಜು ವಿದ್ಯಾರ್ಥಿಗಳಲ್ಲಿ ಉತ್ಸಾಹವನ್ನು ಹೆಚ್ಚಿಸಲು ಹಮ್ಮಿಕೊಂಡಿರುವ ಪುಸ್ತಕೋತ್ಸವ  ನಿರೀಕ್ಷೆಗೂ ಮೀರಿ ಓದುಗರ ಮನತಟ್ಟಿದೆ. ನಿನ್ನೆ ಆರಂಭವಾದ ಪುಸ್ತಕೋತ್ಸವ ವಿದ್ಯಾರ್ಥಿಗಳಲ್ಲಿ ಹೊಸ ಬಗೆಯ ಓದಿನ ಅಭಿರುಚಿಯನ್ನು ಹಚ್ಚಿದೆ. ಪುಸ್ತಕೋತ್ಸವದ ಮೊದಲ ದಿನ ಹರಿದು ಬಂದ ಪ್ರತಿಕ್ರಿಯೆ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿ. ಮೊದಲ ದಿನ ಎಲ್ಲಾ ಪುಸ್ತಕ ಮಳಿಗೆ ಸೇರಿ ಒಟ್ಟು 1,42,000 ದಷ್ಟು ಮೊತ್ತದ ಪುಸ್ತಕಗಳು ಮಾರಾಟಗೊಂಡವು.

ಪುಸ್ತಕೋತ್ಸವದಲ್ಲಿ ಸುಮಾರು 15 ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳಿದ್ದವು. ಇದರಲ್ಲಿ ಕಥೆ,ಕಾದಂಬರಿ, ಸ್ಪರ್ಧಾತ್ಮಕ ಪರೀಕ್ಷಾ ಸಂಬಂಧಿತ ಪುಸ್ತಕಗಳು ಭರ್ಜರಿ ಮಾರಾಟವಾಗಿದೆ. ಕನ್ನಡ, ಇಂಗ್ಲೀಷ್, ತುಳು, ಕೊಂಕಣಿ ಭಾಷೆಯ ವೈವಿಧ್ಯಮಯ ಕೃತಿಗಳು ವಿದ್ಯಾರ್ಥಿಗಳ ಗಮನ ಸೆಳೆಯಿತು.

ತುಳು ಸಂಸ್ಕೃತಿ,ಸಂಪ್ರದಾಯಗಳನ್ನು ಸಾರುವ ಸಂಶೋಧನ ಆಧಾರಿತ ಕೃತಿಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡು ಓದುತ್ತಿರುವುದನ್ನು ನೋಡುವುದು ಖುಷಿ ತಂದಿದೆ. ತುಳು ನಿಘಂಟು, ‘ಅಣಿ ಅರದಲ ಸಿರಿ ಸಿಂಗಾರ’ ಇಂಥ ಕೃತಿಗಳನ್ನು ವಿದ್ಯಾರ್ಥಿಗಳು ಕೊಂಡು ಓದುವುದು ಸಂತಸದ ವಿಷಯ ಎನ್ನುತ್ತಾರೆ ಪುಸ್ತಕ ಮಳಿಗೆಯ ಮಾರಾಟಗಾರ ವೆಂಕಟೇಶ್.

ಪುಸ್ತಕೋತ್ಸವದಲ್ಲಿ ಪೂರ್ಣಚಂದ್ರ ತೇಜಸ್ವಿ, ಎಸ್.ಎಲ್ .ಭೈರಪ್ಪ,ಜೋಗಿ,ಎರ್,ಮಣಿಕಾಂತ್ ಅವರ ಕೃತಿಗಳಿಗೆ ಹೆಚ್ಚು ಬೇಡಿಕೆ ಬಂದಿದೆ ಎನ್ನುತ್ತಾರೆ ನವಕರ್ನಾಟಕ ಪುಸ್ತಕ ಮಳಿಗೆಯ ಸುರೇಶ್.

ಪುಸ್ತಕಮಳಿಗೆಯೊಟ್ಟಿಗೆ ಖಾದಿ ಬಟ್ಟೆ ಹಾಗೂ ಕೈಮಗ್ಗ ಸಾಮಾಗ್ರಿಗಳ ಮಾರಾಟ ಮಳಿಗೆ ವಿಶೇಷವಾಗಿ ಗಮನ ಸೆಳೆಯಿತು. ಪುಸ್ತಕೋತ್ಸವದಲ್ಲಿ ಜಿಲ್ಲೆಯ ವಿವಿಧ ಭಾಗದ ಪುಸ್ತಕಮಳಿಗೆಗಳು ಓದುಗರ ವಿಶಾಲ ಆಯ್ಕೆಗೆ ಆಹ್ವಾನ ನೀಡುತ್ತಿತ್ತು. ನವ ಕರ್ನಾಟಕ, ಸುರಭಿ ಬುಕ್ ಸೆಂಟರ್, ಭಾರತ್ ಬುಕ್ ಮಾರ್ಕ್ಸ್, ಸ್ಕೂಲ್ ಬುಕ್ ಕಂಪೆನಿ, ಬಿಬ್ಲಿಯೋಸ್ ಬುಕ್ ಸುರತ್ಕಲ್, ಜಿ,ವಿನ್ ಬುಕ್ ಮಾರ್ಕ್ಸ್ ಹೀಗೆ ವಿವಿಧ ಪುಸ್ತಕಮಳಿಗೆಗಳು ಇದ್ದವು.

ಪುಸ್ತಕದಾನವೆಂಬ ವಿನೂತನ ಪ್ರಯೋಗ : ಪುಸ್ತಕೋತ್ಸವದಲ್ಲಿ ಹಳೆಯ ಪುಸ್ತಕಗಳನ್ನು ದಾನವಾಗಿ ನೀಡುವ ವಿಶೇಷ ಕೌಂಟರ್ ಗಮನ ಸೆಳೆಯಿತು. ಇದರಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಹಿರಿಯ ಬರಹಗಾರರು ತಮ್ಮಲ್ಲಿದ್ದ ಹಳೆಯ ಪುಸ್ತಕ ಹಾಗೂ ಕೊಂಡು ತಂದ ಹೊಸ ಪುಸ್ತಕಗಳನ್ನು ದಾನವಾಗಿ ನೀಡಿದ್ದಾರೆ. ದಾನವಾಗಿ ಬಂದ ಪುಸ್ತಕಗಳನ್ನು ಸರ್ಕಾರಿ ಶಾಲೆಗೆ ನೀಡುವುದು ಈ ಯೋಜನೆಯ ಉದ್ದೇಶ.

ತರಗತಿಯಲ್ಲಿ ಕುಳಿತು ಪಾಠ ಕೇಳುವುದರ ಜೊತೆಗೆ ನಾವು ನಮ್ಮ ಕಾಲೇಜಿನ ಉಪನ್ಯಾಸಕರು ರಚಿಸಿದ ಪುಸ್ತಕ ಮಾರಾಟ ಮಾಡುವುದು ಒಂದು ಉತ್ತಮ ಅನುಭವ. ಇಲ್ಲಿ ಬಂದಿರುವ ಪುಸ್ತಕಗಳೆಲ್ಲವೊ ನಮಗೆ ಒಳ್ಳೆಯ ಜ್ಞಾನ ನೀಡುವಂಥದ್ದು. – ನವ್ಯಶ್ರೀ ಶೆಟ್ಟಿ, ವಿದ್ಯಾರ್ಥಿನಿ

 ಈಗಿನ ಮಕ್ಕಳಲ್ಲಿ ಓದುವ ಕೊರತೆ ಇದೆ. ನಮ್ಮ ವಿದ್ಯಾರ್ಥಿಗಳಲ್ಲಿ ಓದಿನ ಪರಿಚಯವಾಗಬೇಕು. ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿಯಲ್ಲಿ ಪುಸ್ತಕಗಳನ್ನು ಮಾರಾಟ ಮಾಡಬೇಕು ಎನ್ನುವ ಯೋಜನೆಯನ್ನು ಈ ಹಿಂದೆ ಸಹದ್ಯೊಗಿಗಳೊಂದಿಗೆ ಚರ್ಚಿಸಿದ್ದಿವಿ. ಅದರಂತೆ ಈ ಪುಸ್ತಕೋತ್ಸವದ ಕಾರ್ಯಕ್ರಮದ ಉದ್ದೇಶವನ್ನು, ಕಾರ್ಯಕ್ರಮದ ಮೊದಲೇ ಪ್ರತಿ ತರಗತಿಗೆ ಹೋಗಿ ಪುಸ್ತಕದ ಮಹತ್ವವನ್ನು ಸಾರಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪ್ರಚಾರ ಎಲ್ಲೆಡೆ ತಲುಪಿತ್ತು. ಆ ಕಾರಣವಾಗಿಯೇ ಇಂದಿನ ಈ ಪುಸ್ತಕೋತ್ಸವ ಕಾರ್ಯಕ್ರಮಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. –ಕಿಶೋರ್ ಚಂದನ್,  ಗ್ರಂಥಪಾಲಕ

 

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.