ಗೋಶಾಲೆ ಶೀಘ್ರ ನಿರ್ಮಿಸಿ: ಉಡುಪಿ ಡಿಸಿ ಸೂಚನೆ


Team Udayavani, Jun 18, 2022, 1:44 AM IST

ಗೋಶಾಲೆ ಶೀಘ್ರ ನಿರ್ಮಿಸಿ: ಉಡುಪಿ ಡಿಸಿ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಗೋಶಾಲೆಯನ್ನು ಇತರರ ಸಹಭಾಗಿತ್ವದಲ್ಲಿ ರಾಜ್ಯಕ್ಕೆ ಮಾದರಿ
ಯಾಗುವ ರೀತಿಯಲ್ಲಿ ಶೀಘ್ರದಲ್ಲಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಲ್ಲಿ ಶುಕ್ರವಾರ ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಬಜೆಟ್‌ನಲ್ಲಿ ಗೋಶಾಲೆಯನ್ನು ಪ್ರಾರಂಭಿಸಲು ಸರಕಾರಿ ಘೋಷಿಸಿ, ಸಾಕಷ್ಟು ಅನುದಾನ ನೀಡಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಅಗತ್ಯವಿರುವ ಭೂಮಿಯನ್ನು ಸಹ ನೀಡಿದೆ.

ಗೋಶಾಲೆಯು ಆಧುನಿಕ ಶೈಲಿ, ರೀತಿಯ ಅಗತ್ಯ ಮೂಲಸೌಕರ್ಯಗಳನ್ನು ಲಭ್ಯವಾಗುವ ಹಾಗೆ ನೀಲಿನಕ್ಷೆಯನ್ನು ತಯಾ ರಿಸಿ ಶೀಘ್ರದಲ್ಲಿಯೇ ಕೆಲಸ ಪ್ರಾರಂಭಿಸ ಬೇಕೆಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಮೀನು ಕಾದಿರಿಸಲಾಗಿದೆ
ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದ ಸರ್ವೇ ನಂ. 79/2ರಲ್ಲಿ 13.24 ಎಕ್ರೆ ಜಮೀನನ್ನು ಹಾಗೂ ಕುಂದಾಪುರದ ಗೋಳಿಹೊಳೆ ಗ್ರಾಮದ ಸರ್ವೆ ನಂ. 279ರಲ್ಲಿ 9.85 ಎಕ್ರೆ ಜಮೀನನ್ನು ಸರಕಾರಿ ಗೋಶಾಲೆ ನಿರ್ಮಿಸಲು ಕಾದಿರಿಸಲಾಗಿದೆ. ಗೋಶಾಲೆಗೆ ತಡೆ ಬೇಲಿ, ಕೆರೆ ನಿರ್ಮಾಣದ ಕಾಮಗಾರಿಗಳನ್ನು ಕೈಗೊಳ್ಳ ಬೇಕೆಂದು ತಿಳಿಸಿದರು.

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜತೆಗೆ ಅದರ ಸಮ ರ್ಪಕ ಅನುಷ್ಠಾನಗೊಳಿಸಬೇಕು.

ಜಿಲ್ಲೆಯಲ್ಲಿ ಈಗಾಗಲೇ 12 ಗೋಶಾಲೆಯನ್ನು ಖಾಸಗಿ ಸಂಸ್ಥೆ ಗಳು ನಡೆಸುತ್ತಿದ್ದು 2,660ಕ್ಕೂ ಹೆಚ್ಚು ಗೋವು ಗಳು ಆಶ್ರಯ ಪಡೆದಿವೆ. ಜಾನುವಾರುಗಳನ್ನು ರಕ್ಷಣೆ ಮಾಡುವ ರೀತಿಯಲ್ಲಿಯೇ ಇತರ ಪ್ರಾಣಿ ಗಳನ್ನು ರಕ್ಷಿಸಲು ಗೋಶಾಲೆ ಮಾದರಿಯ ಲ್ಲಿಯೇ ಪ್ರಾಣಿ ರಕ್ಷಣೆ ಶೆಲ್ಟರ್‌ಗಳನ್ನು ಪ್ರಾರಂಭಿಸಲು ಪ್ರಾಣಿ ಪ್ರಿಯರು ಹಾಗೂ ಅಧಿಕಾರಿಗಳು ಚಿಂತಿಸಬೇಕು ಎಂದರು.

ಸರಕಾರದಿಂದ ಜಿಲ್ಲಾ ಪ್ರಾಣಿ ದಯಾ ಸಂಘಕ್ಕೆ ಪ್ರಾಣಿಗಳ ಕಲ್ಯಾಣಕ್ಕೆ ಬಿಡುಗಡೆಯಾಗಿರುವ ಅನು ದಾನವನ್ನು ಬಳಕೆ ಮಾಡಿಕೊಳ್ಳು ವುರೊಂದಿಗೆ ಅವುಗಳ ರಕ್ಷಣೆಗೆ ಇರುವ ಕಾಯ್ದೆ ಮತ್ತು ನಿಯಮಗಳ ಬಗ್ಗೆ ಜಾಗೃತಿ ಅಭಿಯಾನಗಳನ್ನು ಪರಿಣಾಕಾರಿಯಾಗಿ ಅನುಷ್ಠಾನ ಗೊಳಿಸುವಂತೆ ಸೂಚಿಸಿದರು.

ಸ್ವಾವಲಂಬಿ ಗೋಶಾಲೆ
ಜಿ.ಪಂ. ಸಿಇಒ ಪ್ರಸನ್ನ ಎಚ್‌. ಮಾತನಾಡಿ, ಹೆಬ್ರಿಯ ಕೆರೆಬೆಟ್ಟುವಿನ ಗೋಶಾಲೆಗೆ ನೀರಿನ ಸೌಲಭ್ಯ ಕಲ್ಪಿಸಲು ಕೊಳವೆ ಬಾವಿಯನ್ನು ಕೊರೆಸಿದರೂ ನೀರು ದೊರೆತಿಲ್ಲ. ಇಲ್ಲಿಗೆ ಅಗತ್ಯವಿರುವ ನೀರನ್ನು ಜಲ ಜೀವನ್‌ ಮಿಷನ್‌ ಯೋಜನೆಯಡಿ ಕಲ್ಪಿಸಲಾಗುವುದು. ಗೋಶಾಲೆಗಳ ನಿರ್ವಹಣೆಗೆ ಸರಕಾರವನ್ನು ಎದುರು ನೋಡದೇ ಅಲ್ಲಿಯೇ ಬರುವ ಉತ್ಪನ್ನಗಳಿಂದ ನಿರ್ವಹಣೆ ಮಾಡುವ ಬಗ್ಗೆ ಯೋಜನೆಗಳನ್ನು ರೂಪಿಸಿ, ಗೋಶಾಲೆಗಳು ಸ್ವಾವಲಂಬಿ ಯಾಗಬೇಕು ಎಂದರು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.