ಬೀಚ್ ಅಭಿವೃದ್ಧಿ ಕಾಮಗಾರಿ ಶೀಘ್ರ ಕಾರ್ಯರೂಪಕ್ಕೆ ತನ್ನಿ: ಪ್ರಮೋದ್
Team Udayavani, Jan 29, 2018, 11:06 AM IST
ಉಡುಪಿ: ಮಲ್ಪೆ ಬೀಚ್ ಅಭಿವೃದ್ಧಿ ಕುರಿತು ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳನ್ನು ಹಾಗೂ ಕಾಮಗಾರಿಗಳನ್ನು ಶೀಘ್ರದಲ್ಲಿ ಕಾರ್ಯರೂಪಕ್ಕೆ ತರುವಂತೆ ಸಚಿವ ಪ್ರಮೋದ್ ಮಧ್ವರಾಜ್ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ ಬೀಚ್ನ ಪಾರ್ಕಿಂಗ್ ಪ್ರದೇಶದಲ್ಲಿ ಶೌಚಾಲಯ ನಿರ್ಮಿಸುವಂತೆ ಕೆಆರ್ಐಡಿಎಲ್ ಅಧಿಕಾರಿಗಳಿಗೆ ಸೂಚಿಸಿದರು. ಫೆಬ್ರವರಿ ಒಳಗೆ ಕಾಮಗಾರಿ ಪೂರ್ಣಗೊಳಿಸುವಂತೆ, ಮಲ್ಪೆಯ ಬಲರಾಮ ಸರ್ಕಲ್ ಬಳಿ ಬಸ್ ನಿಲ್ದಾಣ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಿ ಬೀಚ್ ಅಭಿವೃದ್ಧಿ ಕುರಿತಂತೆ ನಗರಸಭಾ ಸದಸ್ಯ ಪ್ರಶಾಂತ್ ಅಮೀನ್ ನೀಡಿರುವ ಪಟ್ಟಿಯಲ್ಲಿನ ಕಾಮಗಾರಿಗಳನ್ನು ಶೀಘ್ರ ಕಾರ್ಯರೂಪಕ್ಕೆ ತರುವಂತೆ ಪೌರಾಯುಕ್ತ ಮಂಜುನಾಥಯ್ಯ ಅವರಿಗೆ ಸೂಚಿಸಿದರು.
ಬೀಚ್ನಲ್ಲಿರುವ ವೇದಿಕೆ ಬಳಿ 2 ಗ್ರೀನ್ ರೂಂ ನಿರ್ಮಿಸುವಂತೆ ಹಾಗೂ ಅಲ್ಲಿರುವ ಶೌಚಾಲಯದ ಬಳಿ ಬಯೋ ಡೈಜೆಸ್ಟ್ ನಿರ್ಮಿಸುವಂತೆ, ಸೈಂಟ್ ಮೇರಿಸ್ ದ್ವೀಪದಲ್ಲಿರುವ ಆಹಾರ ಮಳಿಗೆಗಳಲ್ಲಿ ದರಪಟ್ಟಿ ಪ್ರದರ್ಶಿಸುವಂತೆ, ಪ್ರವಾಸಿಗರಿಗೆ ಆಹಾರದ ಕೊರತೆಯಾಗದಂತೆ ಹಾಗೂ ಬೀಚ್ ಮತ್ತು ದ್ವೀಪದ ನೈಸರ್ಗಿಕ ಸೌಂದರ್ಯ ಹಾಳಾಗದಂತೆ ಎಚ್ಚರ ವಹಿಸುವಂತೆ ಮತ್ತು ಪ್ರವಾಸಿಗರಿಗೆ ಪೂರಕ ವಾತಾವರಣ ನಿರ್ಮಿಸುವಂತೆ ತಿಳಿಸಿದರು.
ಬೀಚ್ನಲ್ಲಿರುವ ಎಲ್ಲ ಅಂಗಡಿಗಳಿಗೆ ಪ್ರತ್ಯೇಕ ನಂಬರ್ ನೀಡುವಂತೆ ಸೂಚಿಸಿದ ಸಚಿವರು, ಬೀಚ್ ಅಭಿವೃದ್ಧಿ ಸಮಿತಿ ಕಚೇರಿ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತರಿಗೆ ತಿಳಿಸಿದರು. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ