ನಗರದಲ್ಲಿ ಪಾರ್ಕಿಂಗ್‌ ಸಮಸ್ಯೆಗೆ ಶೀಘ್ರ ಪರಿಹಾರ


Team Udayavani, Mar 24, 2018, 7:00 AM IST

2303kdme9ph.jpg

ಕುಂದಾಪುರ: ನಗರದಲ್ಲಿನ ಟ್ರಾಫಿಕ್‌ ಸಮಸ್ಯೆ, ಪಾರ್ಕಿಂಗ್‌ ಸಮಸ್ಯೆ ಬಗ್ಗೆ ಶುಕ್ರವಾರ ನಡೆದ ಕುಂದಾಪುರ ಪುರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಯಿತು. 

ಅಧ್ಯಕ್ಷೆ ವಸಂತಿ ಮೋಹನ ಸಾರಂಗ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಪಾರ್ಕಿಂಗ್‌ ಸಮಸ್ಯೆ ನಿಭಾಯಿಸಲು ಶಾಸಿŒ ಸರ್ಕಲ್‌ನಿಂದ ಶೆಣೈ ಸರ್ಕಲ್‌ ವರೆಗೆ ರಸ್ತೆಯ ಎರಡೂ ಕಡೆ ಇಂಟರ್‌ಲಾಕ್‌ ಅಳವಡಿಸಲಾಗುವುದು. ಆಗ ವಾಹನ ನಿಲ್ಲಿಸಲು ಜಾಗ ಲಭ್ಯ ವಾಗಲಿದ್ದು, ಪಾರ್ಕಿಂಗ್‌ ಸಮಸ್ಯೆ ಪರಿಹಾರವಾಗಲಿದೆ ಎಂದು ಪುರಸಭಾ ಉಪಾಧ್ಯಕ್ಷ ರಾಜೇಶ್‌ ಕಾವೇರಿ ಭರವಸೆ ನೀಡಿದರು.
 
ಸಿಬಂದಿ ಇಲ್ಲ
ಸಂಚಾರಿ ಠಾಣೆಗೆ 31 ಸಿಬಂದಿಗಳ ಮಂಜೂರಾತಿ ಇದ್ದರೂ 2 ಎಸ್‌ಐ, 4 ಎಎಸ್‌ಐ ಸೇರಿ ಒಟ್ಟು 16 ಮಂದಿ ಮಾತ್ರ ಇದ್ದಾರೆ, ಪ್ರಮುಖವಾಗಿ ಬಸೂÅರು ಸರ್ಕಲ್‌, ತಲ್ಲೂರು ಸರ್ಕಲ್‌, ಶಾಸಿŒ ಪಾರ್ಕ್‌, ಪಾರಿಜಾತ ಜಂಕ್ಷನ್‌ ಬಳಿ ಸಿಬಂದಿ ಇದ್ದಾರೆ. ಆದರೆ ಸಿಬಂದಿ ಕೊರತೆ ಇದೆ ಎಂದು ಸಂಚಾರಿ ಠಾಣೆಯ ಉಪನಿರೀಕ್ಷಕ ಲೋಲಾಕ್ಷ ಹೇಳಿದರು. ಅಲ್ಲದೆ ಕೆಎಸ್‌ಆರ್‌ಟಿಸಿ ಬಸ್‌ ನಗರಕ್ಕೆ ಬರದೆ ಹೊರಗಿನಿಂದಲೇ ಸಾಗಿದಾಗ ಅರ್ಧದಷ್ಟು ಸಮಸ್ಯೆ ಪರಿಹಾರ ದೊರೆಯುತ್ತದೆ ಎಂದರು. ಆದರೆ ಎಲ್ಲೆಂದರಲ್ಲಿ ನಿಲ್ಲಿಸುವ ಖಾಸಗಿ ಬಸ್‌ಗಳಿಗೆ ಮೊದಲು ಕಡಿವಾಣ ಹಾಕುವಂತೆ ಸದಸ್ಯ ಉದಯ್‌ ಮೆಂಡನ್‌ ಹೇಳಿದರು. ಜತೆಗೆ ಶೇ.90ರಷ್ಟು ಖಾಸಗಿ ವಾಹನ ಅಸಮರ್ಪಕ ಪಾರ್ಕಿಂಗ್‌ ಮಾಡುತ್ತಾರೆಂದು ಸದಸ್ಯ ಮೋಹನದಾಸ ಶೆಣೈ ಹೇಳಿದರು.

ಕಾನೂನು ಪುಸ್ತಕ
95 ಸಾವಿರ ರೂ. ಕಾನೂನು ಪುಸ್ತಕ ಖರೀದಿ ಬಗ್ಗೆ ಘಟನೋತ್ತರ ಮಂಜೂರಾತಿ ಕೇಳಿದಾಗ ಅನುದಾನಕ್ಕೆ ಹಣವಿಲ್ಲ ಎನ್ನುತ್ತೀರಿ, ದುಬಾರಿ ಪುಸ್ತಕವೇಕೆ ಎಂದು ಸದಸ್ಯೆ ಪುಷ್ಪಾ ಶೆಟ್ಟಿ ಆಕ್ಷೇಪಿಸಿದರು. ಆದರೆ ಇದು ಆಡಳಿತಾತ್ಮಕ ದೃಷ್ಟಿ ಯಿಂದ ಖರೀದಿಸಿದ್ದು ಎಂದು ಸ್ಪಷ್ಟೀಕರಿಸಲಾಯಿತು. 
 
ಒಳಚರಂಡಿ ಸಮಸ್ಯೆ
7.5 ಕೋ.ರೂ. ಮಂಜೂರಾಗಿ ದ್ದರೂ ಯುಜಿಡಿ ಕಾಮಗಾರಿ ಅಸಮರ್ಪಕವಾಗಿದೆ. ಕಳೆದ 4 ತಿಂಗಳಿನಿಂದ ಕಾಮಗಾರಿಗೆ ಸಂಬಂಧಿಸಿದವರು ಸಭೆಗೆ ಬಂದಿಲ್ಲ. ಭೂಸ್ವಾಧೀನ ಆಗಿಲ್ಲ. ಅವಧಿ ಮುಗಿದರೂ ಕಾಮಗಾರಿ ಆಗಿಲ್ಲ ಎಂದು ಸದಸ್ಯರು ಹೇಳಿ
ದರು. ಪೂರಕವಾಗಿ ಅನುದಾನ ಇಲ್ಲದೇ ಕಾಮಗಾರಿಗೆ ಟೆಂಡರ್‌, ಶಿಲಾನ್ಯಾಸದ ಬಗ್ಗೆ ಸದಸ್ಯ ಚಂದ್ರಶೇಖರ ಖಾರ್ವಿ
ಟೀಕಿಸಿದರು. ಆದರೆ ಇದಕ್ಕೆ ಉದಯ ಮೆಂಡನ್‌ ಆಕ್ಷೇಪಿಸಿ ದರು. ಅನುದಾನ ಇಲ್ಲದಿದ್ದರೆ ಇಂದಿರಾ ಕ್ಯಾಂಟೀನ್‌ ನಿಲ್ಲಿಸಿ  ಎಂದು ಸದಸ್ಯರೊಬ್ಬರು ಹೇಳಿದ್ದು ಕೂಡ ಮಾತಿನ ಚಕಮಕಿಗೆ ಕಾರಣವಾಯಿತು. ಸ್ಥಾಯೀ ಸಮಿತಿ ಅಧ್ಯಕ್ಷ ವಿಟuಲ ಕೆ. ಕುಂದರ್‌, ಕಂದಾಯ ಅಧಿಕಾರಿ ಅಂಜನಿ ಗೌಡ ಉಪಸ್ಥಿತರಿದ್ದರು.

ಸಿಬಂದಿ ನೇಮಿಸಿ 
ಶಾಲಾ ಕಾಲೇಜು ಸಮಯದಲ್ಲಿ ಟ್ರಾಫಿಕ್‌ ಹೆಚ್ಚಿರುತ್ತದೆ. ಆಗ ಸಿಬಂದಿ ಹಾಕಿ ನಿಯಂತ್ರಿಸಬೇಕು. ವೇಗದ ಚಾಲನೆ ನಿಲ್ಲಿಸಬೇಕು. ಹಳೆ ಬಸ್‌ ನಿಲ್ದಾಣದ ನಡುವೆ ಇರುವ ಮೂರು ತಂಗುದಾಣಗಳಲ್ಲಿ ಎರಡನ್ನು ತೆಗೆಯಬೇಕು. ರಸ್ತೆ ಬದಿ ಗೂಡಂಗಡಿಯಿಂದ ಸಮಸ್ಯೆಯಾಗುತ್ತಿದೆ ಎಂದು ಸದಸ್ಯ ಚಂದ್ರಶೇಖರ ಖಾರ್ವಿ ಹೇಳಿದರು. ಆದರೆ ನಿಲ್ದಾಣ ತೆರವಿಗೆ ಜನರ ವಿರೋಧವಿದೆ ಎಂದು ಮೋಹನದಾಸ ಶೆಣೈ ಹೇಳಿದರು. 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.