143 ಕುಟುಂಬಗಳಿಗೆ ನೆಮ್ಮದಿಯ ಬದುಕು: ರಘುಪತಿ ಭಟ್‌

ಮಲ್ಪೆ: ಕೊಳ-ಪಡುಕರೆ ಪ್ರದೇಶದ ಮೀನುಗಾರರಿಗೆ ಹಕ್ಕುಪತ್ರ ವಿತರಣೆ

Team Udayavani, Feb 22, 2023, 7:05 AM IST

143 ಕುಟುಂಬಗಳಿಗೆ ನೆಮ್ಮದಿಯ ಬದುಕು: ರಘುಪತಿ ಭಟ್‌

ಮಲ್ಪೆ: ಕೊಳ-ಪಡುಕರೆ ಪ್ರದೇಶದಲ್ಲಿ ಇದುವರೆಗೆ ಸರಕಾರಿ ಜಾಗದಲ್ಲಿ ಇದ್ದ 143 ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಮೂಲಕ ಅವರು ಸ್ವಂತ ಜಾಗದಲ್ಲಿ ನೆಲೆಸಿ ನೆಮ್ಮದಿಯ ಬದುಕು ಸಾಗಿಸುವಂತಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಅವರು ಮಂಗಳವಾರ ಮಲ್ಪೆ ಕೊಳ ಹಾಗೂ ಪಡುಕರೆ ಭಾಗದ 143 ಮೀನುಗಾರ ಕುಟುಂಬಗಳ ಮನೆಗಳಿಗೆ ತೆರಳಿ ಹಕ್ಕುಪತ್ರ ನೀಡಿ ಮಾತನಾಡಿದರು.

ಆರ್‌ಟಿಸಿಯಲ್ಲಿ ಸಮುದ್ರ ಎಂದಿದ್ದ ಜಾಗವನ್ನು 2008ರಲ್ಲಿ ಶಾಸಕನಾಗಿದ್ದಾಗ ಕೊಳ ಮತ್ತು ಪಡುಕರೆಯ 57 ಎಕ್ರೆ ಜಾಗಕ್ಕೆ ಸವೇ ನಂಬರ್‌ ಸೇರ್ಪಡೆ ಮಾಡಿ, ಕಂದಾಯ ಪ್ರಿನ್ಸಿಪಲ್‌ ಸೆಕ್ರೆಟರಿ ಜಾಮದಾರ್‌, ಕಂದಾಯ ಸಚಿವ ಜಗದೀಶ್‌ ಶೆಟ್ಟರ್‌ ಅವರ ಸಹಕಾರದಲ್ಲಿ ಅಧಿಸೂಚನೆ ಹೊರಡಿಸಿ 358 ಕುಟುಂಬಗಳಿಗೆ ಪ್ರಾರಂಭಿಕ ಹಂತದಲ್ಲಿ ಹಕ್ಕುಪತ್ರ ನೀಡಲಾಗಿತ್ತು. ಸಿಆರ್‌ಝಡ್‌ ನಿಯಮದ ಕೆಲವು ಸಮಸ್ಯೆಯಿಂದಾಗಿ 143 ಕುಟುಂಬ ಗಳಿಗೆ ಹಕ್ಕುಪತ್ರ ನೀಡುವಲ್ಲಿ ತೊಡಕಾಗಿತ್ತು. ಈ ಸಲ ಮತ್ತೂಮ್ಮೆ ಶಾಸಕನಾದ ಮೇಲೆ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಕೆಸಿಝಡ್‌ಎಂನಲ್ಲಿ ವಿಶೇಷ ಪ್ರಕರಣದಡಿ ಉಳಿದ ಕುಟುಂಬಕ್ಕೂ ನೀಡಲಾಗಿದೆ ಎಂದರು.

ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್‌, ನಗರಸಭಾ ಸದಸ್ಯರಾದ ಎಡ್ಲಿನ್‌ ಕರ್ಕಡ, ವಿಜಯ ಕುಂದರ್‌, ಸ್ಥಾಯೀ ಸಮಿತಿಯ ಅಧ್ಯಕ್ಷ ಶ್ರೀಶ ಕೊಡವೂರು, ಮಾಜಿ ಅಧ್ಯಕ್ಷ ಗಿರೀಶ್‌ ಅಂಚನ್‌, ತಾ.ಪಂ. ಮಾಜಿ ಅಧ್ಯಕ್ಷ ಶರತ್‌ ಕುಮಾರ್‌, ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಕಾರ್ಯದರ್ಶಿ ರತ್ನಾಕರ ಸಾಲ್ಯಾನ್‌, ಮಾಜಿ ಅಧ್ಯಕ್ಷ ಸತೀಶ್‌ ಕುಂದರ್‌, ಶಿವಪಂಚಾಕ್ಷರಿ ಭಜನ ಮಂದಿರದ ಅಧ್ಯಕ್ಷ ವಿಕ್ರಮ್‌ ಟಿ. ಶ್ರೀಯಾನ್‌, ಬಾಲಕರ ಶ್ರೀ ರಾಮ ಭಜನ ಮಂದಿರದ ಅಧ್ಯಕ್ಷ ಕರುಣಾಕರ ಸಾಲ್ಯಾನ್‌, ಹನುಮಾನ್‌ ವಿಠೊಬ ಭಜನ ಮಂದಿರದ ಅಧ್ಯಕ್ಷ ದಯಾನಂದ ಕಾಂಚನ್‌, ಪಾಂಡುರಂಗ ಮಲ್ಪೆ, ಮಂಜು ಕೊಳ, ಮಿಥುನ್‌ ಕುಂದರ್‌, ತಾರಾನಾಥ ಕುಂದರ್‌, ರವಿ ಸಾಲ್ಯಾನ್‌, ಲಕ್ಷ್ಮಣ ಕರ್ಕೇರ, ವಿಕ್ರಮ ಸಾಲ್ಯಾನ್‌, ಕಿರಣ್‌ ಕುಂದರ್‌, ದಮಯಂತಿ ಆನಂದ್‌ ಪಾಲ್ಗೊಂಡಿದ್ದರು.

ಭೂಪರಿವರ್ತನೆಯಾದ ಹಕ್ಕುಪತ್ರ
ದಾಖಲೆಯಲ್ಲಿ ಸಮುದ್ರ ಎಂದು ಇದ್ದ 57 ಎಕ್ರೆ ಭೂಪ್ರದೇಶಕ್ಕೆ ಸರ್ವೇ ನಂಬರ್‌ ನೀಡಿ ಭೂಪ್ರದೇಶವೆಂದು ಗುರುತಿಸಿ ನೀಡಲಾಗಿದೆ. ಮುಖ್ಯವಾಗಿ ಸಿಆರ್‌ಝಡ್‌ನ‌ಲ್ಲಿ ಭೂ ಪರಿವರ್ತನೆ ಮಾಡಲು ಆಗುವುದಿಲ್ಲ. ಆದರೆ ಇದನ್ನು ವಿಶೇಷ ಪ್ರಕರಣದಡಿ ಭೂಪರಿವರ್ತನೆಗೊಳಿಸಿಯೇ ಹಕ್ಕುಪತ್ರವನ್ನು ನೀಡಲಾಗಿದೆ ಎಂದು ಶಾಸಕ ರಘುಪತಿ ಭಟ್‌ ಹೇಳಿದರು.

ಸಮುದ್ರವನ್ನು ನಂಬಿ ಜೀವಿಸುವವರು ನಾವು. ಇದುವರೆಗೆ ಸಮುದ್ರತೀರದಲ್ಲಿ ಸರಕಾರಿ ಜಾಗದಲ್ಲಿದ್ದು ಕೊಂಡು ಮನೆ ಮಾಡಿ ಬದುಕು ಸಾಗಿಸುತ್ತಿದ್ದೆವು. ನಮಗೆ ಬ್ಯಾಂಕುಗಳಲ್ಲಿ ಯಾವುದೇ ಸಾಲ ಸಿಗುತ್ತಿರಲಿಲ್ಲ. ಇದೀಗ ಸರಕಾರದ ಹಕ್ಕುಪತ್ರ ಸಿಕ್ಕಿದೆ. ಸ್ವಂತ ಜಾಗ ಸಿಕ್ಕಿದೆ ಎಂಬ ನೆಮ್ಮದಿ ಇದೆ. ಮಾನವೀಯ ನೆಲೆಯಲ್ಲಿ ಶಾಸಕ ರಘುಪತಿ ಭಟ್‌ ಮನೆಗೆ ಬಂದು ಹಕ್ಕುಪತ್ರ ಕೊಟ್ಟಿದ್ದಾರೆ.
– ಗೋಪಾಲ ಕೊಳ, ಫಲಾನುಭವಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.