ವಿದ್ಯುತ್ ಶುಲ್ಕದಲ್ಲಿ ಗೊಂದಲ: ಮೆಸ್ಕಾಂ ಅಧಿಕಾರಿಗಳೊಂದಿಗೆ ಶಾಸಕರ ಚರ್ಚೆ
Team Udayavani, May 16, 2020, 3:32 PM IST
ಉಡುಪಿ: ಶಾಸಕ ಕೆ. ರಘುಪತಿ ಭಟ್ ತಮ್ಮ ಕಚೇರಿಯಲ್ಲಿ ಉಡುಪಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಮಾ.23 ರಿಂದ ಮೇ 1ರ ವರೆಗಿನ ವಿದ್ಯುತ್ ಬಳಕೆಯ ನಿಗದಿತ ಶುಲ್ಕದಲ್ಲಿ ಬಳಕೆದಾರರಲ್ಲಿ ಇರುವ ಗೊಂದಲದ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿಗಳು ಡಿಸೆಂಬರ್, ಜನವರಿ, ಫೆಬ್ರವರಿ ತಿಂಗಳ ಸರಾಸರಿ ಬಳಕೆಯ ಆಧಾರದ ಮೇಲೆ ಮೇ ತಿಂಗಳಲ್ಲಿ ವಿದ್ಯುತ್ ಬಿಲ್ಲನ್ನು ತಂತ್ರಾಂಶದ ಮೂಲಕ ನೀಡಿದೆ. ಗ್ರಾ.ಪಂ. ಮತ್ತು ನಗರ ಸ್ಥಳೀಯ ಸಂಸ್ಥೆಗಳ ವರ್ಗೀಕರಣದ ಆಧಾರದ ಮೇಲೆ ತಿಂಗಳ ಅನುಸೂಚಿಯ ದರದ ಮೇಲೆ ಶುಲ್ಕವನ್ನು ವಿಧಿಸಿರುವುದಾಗಿ ತಿಳಿಸಿದ್ದಾರೆ.
ನಿಗದಿತ ಅವಧಿಯಲ್ಲಿ ವಿದ್ಯುತ್ ಶುಲ್ಕವನ್ನು ಪಾವತಿಸದೆ ಇರುವವರಿಗೆ ಶೇ. ಒಂದರಷ್ಟು ಬಡ್ಡಿ ದರವನ್ನು ವಿಧಿಸಲಾಗಿದ್ದು, ನಿಗದಿತ ಅವಧಿಯಲ್ಲಿ ಶುಲ್ಕ ಪಾವತಿಸಿದವರಿಗೆ ಹೆಚ್ಚುವರಿಯಾಗಿ ಬಡ್ಡಿಯನ್ನು ವಿಧಿಸುವುದಿಲ್ಲ. ವಿದ್ಯುತ್ನ್ನು ಕಡಿಮೆ ಬಳಕೆ ಮಾಡಿ ಸರಾಸರಿ ಬಳಕೆಯ ಆಧಾರದ ಮೇಲೆ ಹೆಚ್ಚಿನ ವಿದ್ಯುತ್ ಬಳಕೆ ಶುಲ್ಕವನ್ನು ವಿಧಿಸಿದ್ದಲ್ಲಿ ಮುಂದಿನ ತಿಂಗಳು ಮರು ಹೊಂದಾಣಿಕೆ ಮಾಡುವಂತೆ ತಂತ್ರಾಂಶವನ್ನು ರೂಪಿಸಿ ಸರಿಪಡಿಸುವಂತೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರು ವಿದ್ಯುತ್ ಬಳಕೆಯ ಶುಲ್ಕದ ಬಗ್ಗೆ ಬಳಕೆದಾರರಿಗೆ ಇರುವ ಗೊಂದಲವನ್ನು ಮನದಟ್ಟು ಮಾಡುವಂತೆ ಮೆಸ್ಕಾಂ ಅಧಿಕಾರಿಗಳಲ್ಲಿ ಹಾಗೂ ಲೆಕ್ಕ ಸಹಾಯಕರಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಮೆಸ್ಕಾಂನ ಅಧೀಕ್ಷಕ ಇಂಜಿನಿಯರ್ನರಸಿಂಹ ಪಂಡಿತ್, ಕಾರ್ಯನಿರ್ವಾಹಕ ಅಭಿಯಂತ ದಿನೇಶ್ ಉಪಾಧ್ಯ, ಮೆಸ್ಕಾಂನ ಹಿರಿಯ ಲೆಕ್ಕಾಧಿಕಾರಿ ಮತ್ತು ಸಹಾಯಕ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ