ರೈಲ್ವೇ ಮೇಲ್ಸೇತುವೆ ನಿರ್ವಹಣೆ ಗೊಂದಲ: ಕಾವಡಿ-ಮಧುವನ ರಸ್ತೆ ಕೆಸರುಮಯ


Team Udayavani, Jul 9, 2018, 6:00 AM IST

0807kota1e.jpg

ಕೋಟ: ನಿರ್ವಹಣೆ ಕೊರತೆಯಿಂದ ಪ್ರತಿ ವರ್ಷ ಕಾವಡಿ ಹಾಗೂ ಮಧುವನದ ರೈಲ್ವೇ ಮೇಲ್ಸೇತುವೆ ರಸ್ತೆ  ಕೆಸರು ಗದ್ದೆಯಂತಾಗುತ್ತದೆ. ಇದರ ದುರಸ್ತಿಗೆ ಯಾರೂ ಕ್ರಮಕೈಗೊಳ್ಳುತ್ತಿಲ್ಲ. ಜತೆಗೆ ಯಾರು ನಿರ್ವಹಣೆ ಮಾಡಬೇಕು ಎಂಬುದರ ಬಗ್ಗೆಯೇ ಗೊಂದಲವಿದೆ. 
 
ಕಾವಡಿ ಸೇತುವೆ ಕೆಸರುಗದ್ದೆ  
ಕಾವಡಿ ರೈಲ್ವೇ ಸೇತುವೆ ಸಂಪೂರ್ಣವಾಗಿ ನೀರು ನಿಂತು ಹೊಂಡಗಳು ಸೃಷ್ಟಿಯಾಗಿ ಕೆಸರು ಗದ್ದೆಯಂತಾಗಿದೆ. ಇಲ್ಲಿ ಪಾದಚಾರಿಗಳಿಗೆ ನಡೆದಾಡಲು ಕಷ್ಟ ಸಾಧ್ಯ ಪರಿಸ್ಥಿತಿ ಇದೆ. ಸೇತುವೆಯಲ್ಲಿ ಎರಡು ವಾಹನಗಳು ಎದುರಾದರೆ  ಒಂದು ವಾಹನ ಸೇತುವೆ ದಾಟುವ ತನಕ ಮತ್ತೂಂದು ವಾಹನ ಕಾದು ನಿಲ್ಲಬೇಕು. ಸೇತುವೆ ಆರಂಭದಲ್ಲೇ ಟೆಲಿಪೋನ್‌ ದುರಸ್ತಿಗಾಗಿ ರಸ್ತೆ ಆಗೆದಿದ್ದು ಇದೀಗ ದೊಡ್ಡ ಕಂದಕ ಸೃಷ್ಟಿಯಾಗಿದೆ.

ಈ ರಸ್ತೆ ಕಾರ್ಕಡ ಸಾಲಿಗ್ರಾಮದ ಮೂಲಕ ರಾಷ್ಟ್ರೀಯ  ಹೆದ್ದಾರಿಯನ್ನು ಹಾಗೂ ಯಡ್ತಾಡಿಯಲ್ಲಿ ಜಿಲ್ಲಾ ಮುಖ್ಯರಸ್ತೆಯನ್ನು  ಸಂಪರ್ಕಿಸುತ್ತದೆ. ಹೀಗಾಗಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಇಲ್ಲಿ ಪ್ರತಿ ನಿತ್ಯ ಸಂಚರಿಸುತ್ತಾರೆ. 
 
ಮಧುವನದಲ್ಲೂ ಇದೇ ಸಮಸ್ಯೆ  
ಕೋಟ-ಗೋಳಿಯಂಗಡಿ ಜಿಲ್ಲಾ ಮುಖ್ಯರಸ್ತೆಯಲ್ಲಿ ಬರುವ ಮಧುವನ ರೈಲ್ವೇ ಮೇಲ್ಸೇತುವೆಯಲ್ಲೂ ಇದೇ ರೀತಿ ಸಮಸ್ಯೆ ಇದೆ. ಇಲ್ಲಿ ಕೂಡ ಪ್ರತಿ ವರ್ಷ ವಾಹನ ಸವಾರರು, ಪಾದಚಾರಿಗಳು ಸಂಕಷ್ಟಪಡುತ್ತಾರೆ. ಕಳೆದ ವರ್ಷ  ರಸ್ತೆ ದುರಸ್ತಿ  ಸಂದರ್ಭ  ಡಾಂಬರೀಕರಣ ಕೈಗೊಂಡರೂ ಈ ಬಾರಿ ಮತ್ತೆ ಹೊಂಡ ಸೃಷ್ಟಿಯಾಗಿದೆ.

ಸೇತುವೆಗೆ ಅಪಾಯ  
ಇದೇ ರೀತಿ ಮುಂದುವರಿದರೆ  ಸೇತುವೆ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ಸೇತುವೆ ಶಿಥಿಲಗೊಂಡು  ಬಿರುಕು ಬಿಟ್ಟಲ್ಲಿ  ಕೊಂಕಣ ರೈಲ್ವೇ ಸಂಚಾರಕ್ಕೂ ಅಡ್ಡಿಯಾಗಲಿದೆ. ಸೇತುವೆಯಿಂದ ನೀರು ಹೊರಗಡೆ ಹೋಗಲು ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ.   

ನಿರ್ವಹಣೆ ಯಾರ ಹೊಣೆ?
ರಸ್ತೆ ಜಿ.ಪಂ., ಪಿ.ಡಬ್ಲೂ.ಡಿ.ಗೆ ಸೇರುತ್ತದೆ. ಸೇತುವೆ ರೈಲ್ವೇ ಇಲಾಖೆಯದ್ದು. ನಾವು ದುರಸ್ತಿಗೆ ಮುಂದಾದರೆ ರೈಲ್ವೇ ಇಲಾಖೆಯವರು ಆಕ್ಷೇಪಿಸುತ್ತಾರೆ ಎನ್ನುವುದು ಸ್ಥಳೀಯಾಡಳಿತದ ಉತ್ತರ.  ಪ್ರತಿ ವರ್ಷ ಸಾರ್ವಜನಿಕರ ದೂರು ಹಾಗೂ ಪತ್ರಿಕೆಗಳಲ್ಲಿ ಸಮಸ್ಯೆಯ ಕುರಿತು ವರದಿ ಪ್ರಕಟವಾದರೂ ರೈಲ್ವೇ ಇಲಾಖೆ ಈ ಕುರಿತು ಗಮನಹರಿಸಿಲ್ಲ. ಜಿ.ಪಂ.,  ಪಿ.ಡಬ್ಲೂ.ಡಿ.ಯವರೂ ಹೆಚ್ಚು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ.  ಹೀಗಾಗಿ ರೈಲ್ವೇ ಮೇಲ್ಸೇತುವೆಯ ನಿರ್ವಹಣೆ ಯಾರ ಹೊಣೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.

ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ
ಪ್ರತಿ ವರ್ಷ ಸೇತುವೆಯಲ್ಲಿ ನೀರು ನಿಂತು ಸಮಸ್ಯೆ ಎದುರಾಗುತ್ತಿದೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಈ ಕುರಿತು ಗಮನಹರಿಸಿ ದುರಸ್ತಿಗೆ ಕ್ರಮಕೈಗೊಳ್ಳಬೇಕು.
– ಸುಕುಮಾರ ಶೆಟ್ಟಿ ಕಾವಡಿ,ಸ್ಥಳೀಯ ನಿವಾಸಿ

ಡಿಸಿಗೆ ಮನವಿ
ಕಾವಡಿ ಹಾಗೂ ಮಧುವನ ರೈಲ್ವೇ ಮೇಲ್ಸೇತುವೆಯಲ್ಲಿ ಪ್ರತಿ ವರ್ಷ ಸಮಸ್ಯೆ ಎದುರಾಗುತ್ತದೆ. ಪಂಚಾಯತ್‌ ಅನುದಾನದಲ್ಲಿ ಇದನ್ನು ದುರಸ್ತಿಪಡಿಸಲು ಸಾಧ್ಯವಿಲ್ಲ ಹಾಗೂ ಇದರ ನಿರ್ವಹಣೆಯನ್ನು ಯಾರು ಮಾಡಬೇಕು ಎನ್ನುವ ಬಗ್ಗೆ ಗೊಂದಲವಿದೆ.  ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಲಿದ್ದೇವೆ.
– ಹೇಮಾ,
ಅಧ್ಯಕ್ಷರು ವಡ್ಡರ್ಸೆ ಗ್ರಾ.ಪಂ.

– ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.