ಮತ್ತೆ ಅಬ್ಬರಿಸಿದ ಮಳೆರಾಯ: ಕರಾವಳಿಯಲ್ಲಿ ಉತ್ತಮ ಮಳೆ
Team Udayavani, Aug 13, 2019, 9:50 AM IST
ಮಣಿಪಾಲ: ಕರಾವಳಿಯಲ್ಲಿ ವಾರದಿಂದ ಸುರಿದ ಧಾರಕಾರ ಮಳೆ ಎರಡು ದಿನ ಬ್ರೇಕ್ ನೀಡಿದ ನಂತರ ಈಗ ಮತ್ತೆ ಆರಂಭವಾಗಿದೆ.
ಉಡುಪಿ ಜಿಲ್ಲೆಯ ಕಾಪು, ಉಡುಪಿ, ಮಣಿಪಾಲ, ಕುಂದಾಪುರ, ಶಿರ್ವ, ಕಾರ್ಕಳ, ಕೊಲ್ಲೂರು ಭಾಗದಲ್ಲಿ ಸೋಮವಾರ ರಾತ್ರಿಯಿಂದಲೂ ಮಳೆ ಸುರಿಯುತ್ತಿದ್ದು, ಮಂಗಳವಾರವೂ ಮುಂದುವರಿದಿದೆ.
ಭಾರೀ ಮಳೆಯಿಂದಾಗಿ ಪಲಿಮಾರು ತಗ್ಗು ಪ್ರದೇಶಗಳಲ್ಲಿ ನೆರೆ ನೀರು ಏರಿ ನಿಂತಿದೆ. ಮೂಡು ಪಲಿಮಾರು, ಹೊಯಿಗೆ ಹಾಗೂ ಅವರಾಲು ಅಣೆಕಟ್ಟು ಪ್ರದೇಶದ ಸುಮಾರು ಹದಿನೈದು ಮನೆ ಮಂದಿಗೆ ಇದರಿಂದ ತೊಂದರೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ವೇಣೂರು, ಬಂಟ್ವಾಳ, ಸುಬ್ರಹ್ಮಣ್ಯ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಬೆಳ್ತಂಗಡಿ, ಮೂಡಬಿದಿರೆ ಪ್ರದೇಶದಲ್ಲೂ ಮಳೆ ಸುರಿಯುತ್ತಿದ್ದು, ಆದರೆ ತೀವ್ರತೆ ಕಡಿಮೆಯಾಗಿದೆ.
ನಿರಂತರ ಮಳೆಯಿಂದಾಗಿ ಕಳೆದ ಬುಧವಾರದಿಂದ ಐದು ದಿನಗಳ ಕಾಲ ದಕ್ಷಿನ ಕನ್ನೆ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಮಳೆ, ನೆರೆಯ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ ಮಂಗಳವಾರ ರಜೆ ಇಲ್ಲ ಎಂದು ಉಭಯ ಜಿಲ್ಲಾಡಳಿತಗಳು ಘೋಷಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ