ಮಳೆ ಹಾನಿ ನಷ್ಟ ಪರಿಶೀಲನೆ: ಕರಾವಳಿಗೆ ಕೇಂದ್ರ ತಂಡ


Team Udayavani, Sep 13, 2018, 12:55 PM IST

13-sepctember-17.jpg

ಉಡುಪಿ: ಕೇಂದ್ರ ಸರಕಾರದ ಹಿರಿಯ ಅಧಿಕಾರಿಗಳ ತಂಡವು ಬುಧವಾರ ಜಿಲ್ಲೆಗೆ ಆಗಮಿಸಿ ಅತಿವೃಷ್ಟಿ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿತು. ಕಾರ್ಕಳ, ಕಾಪು ತಾಲೂಕುಗಳಲ್ಲಿ ಹಾನಿಗೀಡಾದ ರಸ್ತೆ, ಬೆಳೆಹಾನಿ ಕುರಿತು ಮಾಹಿತಿ ಸಂಗ್ರಹಿಸಿತು.

ಕಾರ್ಕಳ ತಾಲೂಕಿನ ಕುಕ್ಕುಂದೂರು ಜಯಂತಿನಗರ ಶಾಲೆ, ಕಾರ್ಕಳ- ಉಡುಪಿ ರಸ್ತೆ, ಕೊಳೆರೋಗದಿಂದ ಹಾನಿಗೀಡಾದ ಮೀಯಾರು ಗ್ರಾಮದ ಅಡಿಕೆ ತೋಟ, ಹೊಸ್ಮಾರು ಈದು ಸೇತುವೆ, ರಸ್ತೆ, ನೂರಾಲ್‌ಬೆಟ್ಟು ಕಂಪೆಟ್ಟುವಿನ ಸೇತುವೆ, ಕೊಚ್ಚಿ ಹೋದ ಸಂಪರ್ಕ ರಸ್ತೆ, ಹಾನಿಗೊಳಗಾದ ಕಾಲು ಸಂಕ ವೀಕ್ಷಿಸಿದರು. ಅಡಿಕೆ ಬೆಳೆಗಾರರ ಜತೆ ಮಾತುಕತೆ ನಡೆಸಿದರು.

ಶಿರ್ವ ಸಮೀಪದ ಕಳತ್ತೂರು ಗುರ್ಮೆಗೆ ಭೇಟಿ ನೀಡಿ ಸೇತುವೆ ಸಂಪರ್ಕ ರಸ್ತೆಯನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾರ್ಕಳ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದರು. ಉಪ ವಿಭಾಗಾಧಿಕಾರಿ ಭೂಬಾಲನ್‌, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕೆ ಉಪ ನಿರ್ದೇಶಕಿ ಭುವನೇಶ್ವರಿ, ಲೋಕೋಪ ಯೋಗಿ ಮತ್ತು ಪಂ.ರಾಜ್‌ ಎಂಜಿನಿಯರಿಂಗ್‌ ಇಲಾಖೆ ಅಧಿಕಾರಿಗಳು, ಕಾರ್ಕಳ ತಹಶೀಲ್ದಾರ್‌ ಮುಹಮ್ಮದ್‌ ಇಸಾಕ್‌, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಬೋಟ್‌ಗಳಿಗೂ ಹಾನಿ
ಪ್ರಸಕ್ತ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದಿಂದ ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 150 ಕೋಟಿ ರೂ.ಗಳಿಗೂ ಅಧಿಕ ಹಾನಿ ಅಂದಾಜಿಸಲಾಗಿದೆ. ರಸ್ತೆ ಸೇರಿದಂತೆ ಮೂಲಸೌಕರ್ಯ, ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರದಲ್ಲಿ ಅಧಿಕ ಹಾನಿ ಉಂಟಾಗಿದೆ. ಮೀನುಗಾರರ ಬೋಟುಗಳು ಸಾಕಷ್ಟು ಸಂಖ್ಯೆಯಲ್ಲಿ ನಷ್ಟ ಅನುಭವಿಸಿವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಉಡುಪಿ ಜಿಲ್ಲೆಯಲ್ಲಿ 1,058 ಮನೆಗಳು ಹಾನಿಗೀಡಾಗಿ ಸುಮಾರು 10.06 ಕೋ.ರೂ. ನಷ್ಟ ಉಂಟಾಗಿದೆ ಎಂದು ತಿಳಿಸಿದರು. ಕೇಂದ್ರ ತಂಡದ ಅಧಿಕಾರಿಗಳು ಮೀನುಗಾರರ ಬೋಟುಗಳಿಗೆ ಕೇರಳದಲ್ಲಿ ಯಾವ ರೀತಿ ಪರಿಹಾರ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಪಡೆಯುವಂತೆ ಸೂಚಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.