ಮಳೆ ಹಾನಿ: ಶೀಘ್ರ ಪರಿಹಾರ ವಿತರಣೆ 


Team Udayavani, Jul 5, 2018, 6:00 AM IST

040718astro09.jpg

ಉಡುಪಿ: ಮಳೆ ಹಾನಿಯಿಂದ ನಷ್ಟ ಆದವರಿಗೆ ಮೊದಲ ಹಂತದ‌ ಪರಿಹಾರಧನ ವಿತರಿಸಲಾಗಿದೆ. ಎರಡನೇ ಹಂತದ ಪರಿಹಾರಧನ ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಉಡುಪಿ ತಹಶೀಲ್ದಾರ್‌ ಪ್ರದೀಪ್‌ ಕುರುಡೇಕರ್‌ ತಿಳಿಸಿದ್ದಾರೆ.

ಜು.4ರಂದು ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಅವರ ಅಧ್ಯಕ್ಷತೆಯಲ್ಲಿ ಜರಗಿದ ಉಡುಪಿ ತಾ.ಪಂ. ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

“ಮಳೆಯಿಂದ ಹೆಚ್ಚು ಹಾನಿ ಆದವರಿಗೂ 5,200 ರೂ.ಗಳನ್ನು ಮಾತ್ರ ನೀಡಲಾಗಿದೆ’ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ತಹಶೀಲ್ದಾರ್‌ ಅವರು “ಈಗ ನೀಡಿರುವುದು ತುರ್ತು ಪರಿಹಾರ ಹಣ. ಈ ಹಿಂದೆ ಈ ರೀತಿ ಪರಿಹಾರ ನೀಡುವ ಯೋಜನೆ ಇರಲಿಲ್ಲ. ಈ ಬಾರಿ ಹೆಚ್ಚಿನ ಪ್ರಮಾಣದ ಹಾನಿ ಸಂಭವಿಸಿರುವುದರಿಂದ ಮೊದಲ ಹಂತದ ಪರಿಹಾರ ಹಣ ವಿತರಿಸಲಾಗಿದೆ. ಪಿಡಬ್ಲ್ಯುಡಿ ಇಲಾಖೆಯ ವರದಿ ಬಂದಿದ್ದು ಎರಡನೇ ಹಂತದ ಪರಿಹಾರ ಹಣವನ್ನು ಶೀಘ್ರ ವಿತರಿಸಲಾಗುವುದು’ ಎಂದು ತಿಳಿಸಿದರು.
 
108 ಆರೋಗ್ಯ ಕವಚ ಅವ್ಯವಸ್ಥೆ 
ಸದಸ್ಯೆ ಡಾ| ಸುನೀತಾ ಶೆಟ್ಟಿ ಅವರು ಆರೋಗ್ಯ ಕವಚ 108ರ ಅವ್ಯವಸ್ಥೆ ಕುರಿತು ಸಭೆಯ ಗಮನ ಸೆಳೆದರು.

ಆ್ಯಂಬುಲೆನ್ಸ್‌ಗಳು ತುರ್ತು ಸಂದರ್ಭ ಸರಕಾರಿ ಆಸ್ಪತ್ರೆಗೆ ತೆರಳಿ ಸೂಚನೆ ಬಂದ ಬಳಿಕ ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿವೆ. ಇದರಿಂದ ಚಿಕಿತ್ಸೆ ದೊರೆಯಲು ವಿಳಂಬವಾಗುತ್ತಿದೆ. ತುರ್ತು ಸಂದರ್ಭದಲ್ಲೂ ಹೀಗೆ ಸುತ್ತುವುದು ಸರಿಯಲ್ಲ ಎಂದರು. 

ಸದಸ್ಯ ಮೈಕಲ್‌ ದನಿಗೂಡಿಸಿ “ಕೆಲವೊಮ್ಮೆ ಗ್ರಾಮೀಣ ಭಾಗದಲ್ಲಿ ಆ್ಯಂಬ್ಯುಲೆನ್ಸ್‌   ಲಭ್ಯವಿರುವುದಿಲ್ಲ. ಕೇಳಿದರೆ ಇಎಂಟಿ ಇಲ್ಲ ಎಂಬ ಉತ್ತರ ಬರುತ್ತದೆ’ ಎಂದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕಾಡೂರು ಅಂಗನವಾಡಿ ಸಮಸ್ಯೆ 
ಕಾಡೂರಿನ ಅಂಗನವಾಡಿಯನ್ನು ಮಾನ್ಯ ಶಾಲೆಗೆ ಸ್ಥಳಾಂತರಿಸಿರುವ ಕುರಿತು ಸ್ಥಳೀಯ ತಾ.ಪಂ. ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. “ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ’ ಎಂದು ಅಧ್ಯಕ್ಷೆ ಭರವಸೆ ನೀಡಿದರು. 

ತಾತ್ಕಾಲಿಕ ಹಕ್ಕುಪತ್ರದಿಂದ ಸಮಸ್ಯೆ 
ತಾತ್ಕಾಲಿಕ ಹಕ್ಕುಪತ್ರ ನೀಡಿರುವುದ ರಿಂದ ಹಕ್ಕುಪತ್ರ ಪಡೆದವರಿಗೆ ಸಾಲ ವಿಚಾರವಾಗಿ ಸಮಸ್ಯೆಗಳಾಗಿವೆ ಎಂದು ಸದಸ್ಯರೊಬ್ಬರು  ದೂರಿದರು. ಇನ್ನೋರ್ವ ಸದಸ್ಯರು ಮಾತನಾಡಿ “ಚುನಾವಣೆ ಬಂತೆಂದು ಗಡಿಬಿಡಿಯಲ್ಲಿ ಹಕ್ಕುಪತ್ರ ವಿತರಣೆ ಮಾಡಿದರೆ ಇದೇ ರೀತಿ ಸಮಸ್ಯೆಯಾಗುತ್ತದೆ’ ಎಂದು ಲೇವಡಿ ಮಾಡಿದರು. ಈ ವಿಚಾರವಾಗಿ ಕೆಲಕಾಲ ಇಬ್ಬರ ನಡುವೆ ಆರೋಪ ಪ್ರತ್ಯಾರೋಪ ನಡೆಯಿತು.  ಮಧ್ಯಪ್ರವೇಶಿಸಿದ ತಹಶೀಲ್ದಾರ್‌ ಶುಲ್ಕ ಪಾವತಿ ಮಾಡಬೇಕೆಂಬ ಉದ್ದೇಶದಿಂದ ಮಾತ್ರ ತಾತ್ಕಾಲಿಕ ಹಕ್ಕುಪತ್ರ ನೀಡಲಾಗಿದೆ. ಶುಲ್ಕ ಪಾವತಿಸಿದ ಕೂಡಲೇ ಹಕ್ಕುಪತ್ರ ವಿತರಿಸಲಾಗುತ್ತದೆ ಎಂದರು.

ಸಭೆ ಸಂದರ್ಭದಲ್ಲಿ ಪದೇ ಪದೆ ಮೈಕ್‌ ಕೈ ಕೊಡುತ್ತಿದ್ದುದ ರಿಂದ ಸದಸ್ಯರು  ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.12 ಗ್ರಾ.ಪಂ. ಅಧ್ಯಕ್ಷರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹೊಲಿಗೆ ತರಬೇತಿ ಪಡೆದ ಹಿಂದುಳಿದ, ಅಲ್ಪಸಂಖ್ಯಾಕ ಸಮುದಾಯದ 15 ಮಂದಿ ಫ‌ಲಾನುಭವಿಗಳಿಗೆ ಹೊಲಿಗೆಯಂತ್ರ ವಿತರಿಸಲಾಯಿತು.

ಸಭೆಯಲ್ಲಿ ತಾ.ಪಂ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಇ.ಓ ಮೋಹನ್‌ ರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷ ಭುಜಂಗ ಶೆಟ್ಟಿ , ಬ್ರಹ್ಮಾವರ ಪ್ರೊಬೆಷನರಿ ತಹಶೀಲ್ದಾರ್‌ ಅನಿಲ್‌ ಕುಮಾರ್‌ ಉಪಸ್ಥಿತರಿದ್ದರು.

9/11 ಸಮಸ್ಯೆ 
ಕಾಪು ಪುರಸಭೆ ವ್ಯಾಪ್ತಿಯಲ್ಲಿ 9/11 ಸಮಸ್ಯೆ ಇರುವ ಕುರಿತು ಸದಸ್ಯರೊಬ್ಬರು ಸಭೆಯ ಗಮನ ಸೆಳೆದರು. ಈ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್‌ “9/11 ಸಮಸ್ಯೆ ನಗರ ಪ್ರದೇಶಗಳಲ್ಲಿ  ಇದೆ. ಇದನ್ನು ಸರಕಾರದ ಮಟ್ಟದಲ್ಲಿ ಬಗೆಹರಿಸಬೇಕಾಗಿದೆ’ ಎಂದರು. 

94ಸಿಗೆ ಅರ್ಜಿ ಆಹ್ವಾನ
94ಸಿಗೆ ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನಾಂಕವಾಗಿದೆ. ಭೂ ಪರಿವರ್ತನೆಗೆ ಕಳೆದ ಎರಡು ದಿನಗಳಿಂದ ಆನ್‌ಲೈನ್‌ ಮೂಲಕ ಲಾಗಿನ್‌ ಆಗಲು ಅವಕಾಶ ನೀಡಲಾಗುತ್ತಿದೆ. ಇದಕ್ಕೆ ಎಂಜಿನಿಯರ್‌ ನಕ್ಷೆಯ ಆವಶ್ಯಕತೆ ಇದೆ ಎಂದು ತಹಶೀಲ್ದಾರ್‌ ತಿಳಿಸಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.