ಮನೆ ಮನೆಯಲ್ಲಿ ಮಳೆ ಕೊಯ್ಲು ಚುರುಕು


Team Udayavani, Jul 24, 2019, 5:44 AM IST

male-koilu

ಉಡುಪಿ: ಉದಯವಾಣಿ ಪತ್ರಿಕೆ ನಡೆಸುತ್ತಿರುವ ಜಲಸಾಕ್ಷರ ಅಭಿಯಾನದಿಂದ ಪ್ರೇರಣೆಗೊಂಡು ಜಿಲ್ಲೆಯಾದ್ಯಂತ ಮಳೆಕೊಯ್ಲುಗೆ ಹಲವು ಮಂದಿ ಮನಸ್ಸು ಮಾಡುತ್ತಿದ್ದಾರೆ. ಕೆಲವು ಮಂದಿ ಈಗಾಗಲೇ ಈ ಕೆಲಸ ಪೂರ್ಣಗೊಳಿಸಿದ್ದು, ಇನ್ನು ಕೆಲವರು ಇದನ್ನು ಕಾರ್ಯಗತಗೊಳಿಸಲು ಪಣ ತೊಡುತ್ತಿದ್ದಾರೆ. ಇದಕ್ಕೆ ಯುವಕರ ತಂಡವೊಂದು ಮಾಡಿದ ಕಾರ್ಯವೈಖರಿ ಹೀಗಿದೆ…

ಪ್ರಗತಿ ನಗರದಿಂದ ಕರ್ವಾಲೊ ಕಡೆ ನೀರಿನ ಝರಿಗಳು ಹರಿಯುತ್ತಿದ್ದವು. ಮಳೆ ನೀರು ಇದರೊಂದಿಗೆ ಸೇರಿ ನದಿಗೆ ಸೇರುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯ ಶ್ರೀಕಾಂತ್‌ ನಾಯಕ್‌, ರೋಹಿತ್‌ ಪ್ರಭು, ರಕ್ಷಿತ್‌ ಪ್ರಭು, ಕುಲ್ದೀಪ್‌ ನಾಯಕ್‌, ಸಂಜು ಪ್ರಗತಿನಗರ, ಮುತ್ತ ಪ್ರಗತಿನಗರ, ಕೃಷ್ಣ ಪ್ರಗತಿನಗರ ಅವರು ಹರಿಯುವ ನೀರನ್ನು ಕೆಂಪುಕಲ್ಲು, ಮಣ್ಣು ಹಾಕಿ ತಡೆದು ಪಕ್ಕದಲ್ಲಿದ್ದ ಗ್ರಾ.ಪಂ.ನ ಸುಮಾರು 1.5 ಎಕರೆಯಷ್ಟು ಖಾಲಿ ಜಾಗಕ್ಕೆ ಆ ನೀರನ್ನು ಹರಿಯಬಿಟ್ಟರು. ಪರಿಣಾಮ ಈಗ ಮುಕ್ಕಾಲು ಅಂಶದಷ್ಟು ನೀರು ಶೇಖರಣೆಯಾಗಿದೆ. ಈ ಕೆಲಸಕ್ಕೆ ಕೇವಲ 2.5 ತಾಸು ಸಮಯ ವ್ಯಯವಾಗಿದೆ ಎನ್ನುತ್ತಾರೆ ತಂಡದ ಸದಸ್ಯರು. ಈ ಭಾಗದ 200-300 ಮೀಟರ್‌ ವ್ಯಾಪ್ತಿಯಲ್ಲಿ ಸುಮಾರು 125 ಮನೆಗಳಿದ್ದು, ಬೇಸಗೆಯಲ್ಲಿ ನೀರಿನ ಒರತೆ ಮತ್ತಷ್ಟು ಹೆಚ್ಚಾಗಲಿದೆ ಎಂಬುದು ಇವರ ಆಶಯ. ಈ ಭಾಗದಲ್ಲಿ ಕಳೆದ ಬೇಸಗೆಯಲ್ಲಿ ತುಂಬಾ ನೀರಿನ ಸಮಸ್ಯೆ ಇತ್ತು.

ಬೇಕಿದೆ ಮತ್ತಷ್ಟು ಜಾಗೃತಿ

ಇಂತಹ ಕೆಲಸಕಾರ್ಯಗಳನ್ನು ಮಾಡುವ ಯುವಕರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಸಂಘ-ಸಂಸ್ಥೆ, ಪಂಚಾಯತ್‌, ಜಿಲ್ಲಾಡಳಿದ ವತಿಯಿಂದ ಆಗಬೇಕಿದೆ. ಮಾರ್ಗದರ್ಶನವೂ ಅಗತ್ಯವಿದೆ. ಆಯಾ ಪ್ರದೇಶದ ಯುವಕ ಮಂಡಲಗಳು ಇಂತಹ ಕಾರ್ಯಗಳಲ್ಲಿ ಕೈ ಜೋಡಿಸಿದಲ್ಲಿ ಹರಿಯುವ ನೀರು ನಿಲ್ಲಲು ಸಾಧ್ಯ.

ಅಂತರ್ಜಲ ವೃದ್ಧಿಸಲು ಹೀಗೆ ಮಾಡಿ

– ಇಂಗು ಕೊಳಗಳು

ಇವುಗಳು ಹೆಚ್ಚು ಆಳವಿಲ್ಲದ ತಗ್ಗುಗಳಾಗಿದ್ದು, ಪ್ರಾಕೃತಿಕವಾಗಿ ಹರಿದು ಹೋಗುವ ನೀರಿಗೆ ಎಲ್ಲಿ ಬೇಕಾದರೂ ನಿರ್ಮಿಸಬಹುದು. ಭೌಗೋಳಿಕವಾಗಿ ಸಮತಟ್ಟು ಅಥವಾ ಕಿರು ಇಳಿಜಾರು ಪ್ರದೇಶದಲ್ಲಿ ಇಂಗು ಕೊಳಗಳನ್ನು ನಿರ್ಮಿಸಬಹುದು.

– ಕೊಳವೆ ಬಾವಿಗಳ ಮರುಪೂರಣ

ಒಂದು ಕೊಳವೆ ಬಾವಿಗೆ ಜಲ ಮರುಪೂರಣ ಮಾಡುವ ಸಂದರ್ಭದಲ್ಲಿ, ಆ ಕೊಳವೆ ಬಾವಿ ಕೊರೆಯುವ ಸಂದರ್ಭದಲ್ಲಿ ಬಂದಿರುವ ಕಲ್ಲಿನ ಪದರಗಳ ವಿವರ, ಬೋರ್ವೆಲ್ ಕೊರೆಯುವ ಆಳ ಕೇಸಿಂಗ್‌ ಪೈಪಿನ ವಿವರ ಇತ್ಯಾದಿ ಗಮನದಲ್ಲಿಟ್ಟುಕೊಂಡು ಇಂಗು ಗುಂಡಿ ನಿರ್ಮಿಸಬೇಕಾಗುತ್ತದೆ.

– ತೊರೆ ಕಾಲುವೆ ಮೂಲಕ ಇಂಗು ಗುಂಡಿ ವಿಧಾನ

ನೀರು ಇಂಗುವಂತೆ ಮಾಡಲು ನೀರು ಶೇಖರಣಾ ಸ್ಥಳದ ವಿಸ್ತೀರ್ಣ ಹಾಗೂ ನೀರು ನಿಲ್ಲುವ ಕಾಲಮಿತಿ ಹೆಚ್ಚಾಗಿರಬೇಕಾಗುತ್ತದೆ. ಈ ವಿಧಾನವನ್ನು ಅಳವಡಿಸಿದ ಪ್ರದೇಶದ ಮೇಲು ಹರಿವಿನಲ್ಲಿ ನೀರು ಶೇಖರಣಾ ವ್ಯವಸ್ಥೆಯಿದ್ದಲ್ಲಿ ತೊರೆಗಳ ಮೂಲಕ ನೀರು ನಿರಂತರವಾಗಿ ಹರಿದು ಬರುತ್ತಿದ್ದು ಇಂಗುವಿಕೆಗೆ ಸಹಕಾರಿಯಾಗುತ್ತದೆ.

– ಉಸುಕಿನ ಚೀಲದ ತಡೆ

ಇವುಗಳು ಸುಭದ್ರ ತಡೆಗಳಂತಿರುತ್ತದೆ. ಇವುಗಳಲ್ಲಿ ಖಾಲಿ ಇರುವ ಸಿಮೆಂಟ್/ಗೊಬ್ಬರದ ಚೀಲಗಳಲ್ಲಿ ಮರಳನ್ನು ತುಂಬಿ ಇಳಿಜಾರಿಗೆ ಅಡ್ಡಲಾಗಿ ಇಡಲಾಗುತ್ತದೆ. ಇವುಗಳ ಉದ್ದೇಶ ಭೂಸವಕಳಿಯ ವೇಗವನ್ನು ತಡೆದು ನೀರು ಭೂಮಿಯಲ್ಲಿ ಇಂಗುವಂತೆ ಮಾಡುವುದು ಹಾಗೂ ಮಹಾಪೂರದಂತಹ ವಿಕೋಪವನ್ನು ತಡೆಯುವುದಾಗಿದೆ.

ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸಲು ಮುಂದಾಗಿದ್ದಾರೆ. ಜತೆಗೆ ತಮ್ಮ ಖುಷಿಯನ್ನು ಉಳಿದವರೊಂದಿಗೂ ಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ, ‘ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆಗಳಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.