ಕುಂದಾಪುರ, ಕಾರ್ಕಳ ತಾಲೂಕಿನ ಹಲವೆಡೆ ತಂಪೆರೆದ ಮಳೆರಾಯ
Team Udayavani, Apr 5, 2019, 6:30 AM IST
ಕುಂದಾಪುರ/ ಕಾರ್ಕಳ/ ಅಜೆಕಾರು: ಕುಂದಾಪುರದ ವಿವಿಧೆಡೆ ಬುಧವಾರ ರಾತ್ರಿ ತುಂತುರು ಮಳೆ ಮತ್ತು ಗುರುವಾರ ಸಂಜೆ ವೇಳೆಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಬೆಳ್ವೆ, ಸಿದ್ದಾಪುರ, ಅಮಾಸೆಬೈಲು ಸಹಿತ ಕೆಲವೆಡೆ ಗಳಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಇನ್ನು ಬುಧವಾರ ರಾತ್ರಿ ಆನಗಳ್ಳಿ, ಬಸೂÅರು, ಬಳ್ಕೂರು, ಕೋಣಿ, ತಲ್ಲೂರು, ಗುಜ್ಜಾಡಿ, ತ್ರಾಸಿ ಸಹಿತ ಹಲವೆಡೆಗಳಲ್ಲಿ ತುಂತುರು ಮಳೆಯಾಗಿದೆ.
ಅಜೆಕಾರು ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆ ಎ.4ರಂದು ಸುರಿದಿದೆ.
ಅಜೆಕಾರು
ಅಜೆಕಾರು, ಎಣ್ಣೆಹೊಳೆ, ಹಿರ್ಗಾನ, ಮುನಿಯಾಲು, ಕಡ್ತಲ, ಕುಕ್ಕುಜೆ, ದೊಂಡೇರಂಗಡಿ, ಅಂಡಾರು, ಮುಟ್ಲುಪಾಡಿ, ಕಾಡುಹೊಳೆ, ಶಿರ್ಲಾಲು, ಹೆರ್ಮುಂಡೆ, ಕೆರ್ವಾಶೆ ಪ್ರದೇಶಗಳಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಭಾರೀ ಮಳೆ ಸುರಿದಿದೆ.
ವಿಪರೀತ ಬೀಸಿದ ಗಾಳಿಯಿಂದಾಗಿ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದ್ದರೆ ತಗಡಿನ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಸಂಜೆ ಸಮಯ ಗಾಳಿ ಮಳೆ ಬಂದಿರುವುದರಿಂದ ವಿದ್ಯಾರ್ಥಿಗಳು ಕೊಡೆ ಇಲ್ಲದೆ ಪರದಾಡುವಂತಾಗಿತ್ತು.
ಕಾರ್ಕಳ
ಕಾರ್ಕಳ, ಹೆಬ್ರಿಯ ಕೆಲ ಪ್ರದೇಶಗಲಲ್ಲಿಯೂ ಗುಎಉಗು ಸಹಿತ ಮಳೆಯಾಗಿದೆ. ಕಾರ್ಕಳ ಬಸ್ ನಿಲ್ದಾಣದ ಬಳಿ ಮೊದಲ ಮಳೆಗೆ ರಸ್ತೆಯಲ್ಲಿಯೇ ನೀರು ಹರಿದಿದೆ.
ನೇಮಕ್ಕೆ ಅಡ್ಡಿ
ಶಿರ್ಲಾಲು ಗ್ರಾಮದ ಸೂಡಿ ನಿಡ್ಡೆದ ಕಟ್ಟೆ ಹನಿಮುಗ್ಗೇರ್ಕಳ ದೈವಸ್ಥಾನದ ವಾರ್ಷಿಕ ನೇಮ ಸಂದರ್ಭ ಭಾರೀ ಗಾಳಿ ಮಳೆ ಸುರಿದು ನೇಮಕ್ಕೆ ಸ್ವಲ್ಪ ಕಾಲ ಅಡ್ಡಿಯುಂಟಾಯಿತು. ಶಿರ್ಲಾಲು ಸುತ್ತಮುತ್ತ ಪ್ರದೇಶಗಳಲ್ಲಿ ಕಳೆದ 2-3 ದಿನಗಳಿಂದ ಸಂಜೆ ವೇಳೆಯಲ್ಲಿ ಮಳೆ ಸುರಿಯುತ್ತಿದ್ದು ಎ.4ರಂದು ಮದ್ಯಾಹ್ನ ಮುಗ್ಗೇರ್ಕಳ ದೈವಸ್ಥಾನದ ಹಲೇರ ಪಂಜುರ್ಲಿ ದೈವದ ನೇಮದ ಸಂದರ್ಭ ಭಾರೀ ಗಾಳಿ ಸಹಿತ ಸಿಡಿಲು ಮಳೆ ಸುರಿದಿದೆ. ಇದರಿಂದಾಗಿ ಧಾರ್ಮಿಕ ಕಾರ್ಯಗಳಿಗೆ ಕೆಲ ಸಮಯ ಅಡಚಣೆಯುಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?