ಅ. 31ರ ವರೆಗೆ ಮಳೆ?


Team Udayavani, Oct 30, 2019, 4:07 AM IST

r-38

ಮಣಿಪಾಲ: “ಕ್ಯಾರ್‌’ ಚಂಡಮಾರುತದ ಪ್ರಭಾವ ಮರೆಯಾಗಿ ಕರಾವಳಿಗರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಂತೆಯೇ ಕೊಮೊರಿನ್‌ ಮತ್ತು ಹಿಂದೂ ಮಹಾಸಾಗರದ ಆಸುಪಾಸಿನ ಭಾಗದಲ್ಲಿ ರೂಪುಗೊಂಡಿರುವ ನಿಮ್ನ ಒತ್ತಡ ಮತ್ತೆ ಮಳೆಯನ್ನು ತರುವುದೇ ಎಂಬ ಕಳವಳಕ್ಕೆ ಕಾರಣವಾಗಿದೆ.

ಈ ನಿಮ್ನ ಒತ್ತಡವು ಅ. 30 ಮತ್ತು 31ರ ಹೊತ್ತಿಗೆ ಲಕ್ಷದ್ವೀಪ – ಮಾಲ್ಡೀವ್ಸ್‌ ಸಮೀಪದಲ್ಲಿ ವಾಯುಭಾರ ಕುಸಿತವಾಗಿ ಪರಿವರ್ತನೆ ಹೊಂದುವ ಸಾಧ್ಯತೆ ಇದ್ದು, ಕ್ಯಾರ್‌ ಸಂಚರಿಸುವ ದಾರಿಯಲ್ಲಿ ಸಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ವಾಯುಭಾರ ಕುಸಿತದ ಪ್ರಭಾವದಿಂದ ತಮಿಳುನಾಡು, ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕದಲ್ಲಿ ಅ. 31ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕಟಾವಿಗೆ ಅಡ್ಡಿ?
“ಕ್ಯಾರ್‌’ ಚಂಡಮಾರುತದ ಪ್ರಭಾವದಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಿದ್ದು, ಬಹುತೇಕ ಕಡೆ ಗದ್ದೆಗಳಲ್ಲಿ ಬೆಳೆದು ನಿಂತ ಭತ್ತದ ಪೈರು ಧರಾಶಾಯಿಯಾಗಿದೆ. ಕರಾವಳಿಯಲ್ಲಿ ಸೋಮವಾರದಿಂದ ಬಿಸಿಲಿನಿಂದ ಕೂಡಿದ ಕಟಾವಿಗೆ ಪೂರಕ ವಾತಾವರಣ ಇದೆ. ಆದರೆ ಮತ್ತೆ ಮಳೆ ಸುರಿದರೆ ಕಟಾವಿಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಪೈರು ಗಾಳಿ ಮಳೆಗೆ ನೆಲ ಹಿಡಿದರೆ ಯಾಂತ್ರೀಕೃತ ಕಟಾವು ನಡೆಸುವುದು ಕಷ್ಟಸಾಧ್ಯ. ಈಗಾಗಲೇ ಭಾರೀ ಮಳೆಯಿಂದಾಗಿ ಕಟಾವಾಗಿ ಗದ್ದೆಗಳಲ್ಲಿದ್ದ ಪೈರು, ಕಟಾವಿಗೆ ಸಿದ್ಧವಾಗಿರುವ ಬೆಳೆ ಒದ್ದೆಯಾಗಿ ಮೊಳಕೆಯೊಡೆಯುವ ಸ್ಥಿತಿಯಲ್ಲಿದ್ದು, ರೈತರು ನಷ್ಟದ ಭಯದಲ್ಲಿದ್ದಾರೆ.

ದೂರಕ್ಕೆ ಚಲಿಸಿದ “ಕ್ಯಾರ್‌’
ಇದೇವೇಳೆ ಅರಬ್ಬೀ ಸಮುದ್ರದ ವಾಯವ್ಯ ಭಾಗದಲ್ಲಿ ರೂಪುಗೊಂಡು ಕರಾವಳಿಯಲ್ಲೂ ಭಾರೀ ಗಾಳಿ ಮಳೆಯನ್ನು ಉಂಟು ಮಾಡಿದ್ದ “ಕ್ಯಾರ್‌’ ಚಂಡಮಾರುತವು ಭಾರತೀಯ ಕರಾವಳಿಯಿಂದ ಮತ್ತಷ್ಟು ದೂರಕ್ಕೆ ಚಲಿಸಿದ್ದು, ಮಂಗಳವಾರ ಒಮಾನ್‌ ಕರಾವಳಿಯ ಸನಿಹ ತಲುಪಿದೆ. ಇನ್ನು ಅದು ಮುಂದಕ್ಕೆ ಚಲಿಸಿ ಮುಂದಿನ ಮೂರು ದಿನಗಳಲ್ಲಿ ಒಮಾನ್‌-ಯೆಮೆನ್‌ ಕರಾವಳಿಯ ಆಡೆನ್‌ ಕೊಲ್ಲಿಯತ್ತ ಚಲಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆ ಬಳಿಕ ಅದು ನಿಧಾನವಾಗಿ ದುರ್ಬಲಗೊಳ್ಳಲಿದೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.