ಕಡಿಯಾಳಿ: ಮಳೆ ನೀರು ಕೊಯ್ಲು ಕಾರ್ಯಾಗಾರ
Team Udayavani, Sep 28, 2019, 5:17 AM IST
ಉಡುಪಿ: ಮಳೆ ನೀರು ಕೊಯ್ಲು ಪ್ರತಿಯೊಬ್ಬನ ಜವಾಬ್ದಾರಿ ಎಂದು ತಿಳಿದು ಅಳವಡಿಸಿಕೊಂಡರೆ ಮುಂದಿನ ದಿನಗಳಲ್ಲಿ ನಗರದ ನೀರಿನ ಸಮಸ್ಯೆ ಪರಿಹಾರವಾಗಬಲ್ಲದು ಎಂದು ಮಂಗಳೂರು ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ| ಜಗದೀಶ ಬಾಳಾ ಹೇಳಿದರು.
ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ, ಕೆನರಾ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿ ನೇತೃತ್ವದಲ್ಲಿ ಕಡಿಯಾಳಿ ಕಾತ್ಯಾಯನೀ ಮಂಟಪದಲ್ಲಿ ನಡೆದ ಮಳೆ ನೀರು ಕೊಯ್ಲು ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕೆನರಾ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಯು.ಮೋಹನ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವಸಂತ ಭಟ್, ಕಾರ್ಯದರ್ಶಿ ಸತೀಶ್ ಕುಲಾಲ್, ಕೋಶಾಧಿಕಾರಿ ಎಂ.ವಲ್ಲಭ್ ಭಟ್ ಉಪಸ್ಥಿತರಿದ್ದರು. ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಕಾರ್ಯ ನಿರ್ವಹಣಾಧಿಕಾರಿ ವಾದಿರಾಜ ಭಟ್ ಸ್ವಾಗತಿಸಿದರು. ನಗರಸಭೆ ಸದಸ್ಯ ಗಿರೀಶ್ ಎಂ. ಅಂಚನ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ನಿರೂಪಿಸಿದರು.