ಮಳೆಯಬ್ಬರ: ಸಂಚಾರ ದುಸ್ತರ, ಕೊಳಚೆ ನೀರಿನ “ಪ್ರವಾಹ’


Team Udayavani, Jun 10, 2018, 6:00 AM IST

090618astro05.jpg

ಉಡುಪಿ: ಶನಿವಾರ ಉಡುಪಿ ನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ಸಂಚಾರ ದುಸ್ತರವಾಯಿತು. ಒಳರಸ್ತೆಗಳು ಮಾತ್ರವಲ್ಲದೆ ಮುಖ್ಯ ರಸ್ತೆಗಳಲ್ಲಿ ನೀರು ಹರಿದು ಸಣ್ಣ ವಾಹನಗಳ ಸಂಚಾರಕ್ಕೆ ತೊಡಕಾಯಿತು. ಪಾದಚಾರಿಗಳು ಎಲ್ಲಿ ಹೊಂಡ ಇದೆಯೋ ಎಂಬ ಆತಂಕದಿಂದ ಹೆಜ್ಜೆ ಹಾಕುವಂತಾಯಿತು.

ಮೂಡನಿಡಂಬೂರು, ನಿಟ್ಟೂರು, ಗುಂಡಿಬೈಲು ಮತ್ತು ಮಠದಬೆಟ್ಟಿನ ತಗ್ಗು ಪ್ರದೇಶಗಳು ಶನಿವಾರವೂ ಜಲಾವೃತವಾದವು. ಉಡುಪಿ ನಗರದ ಜೋಡುಕಟ್ಟೆಯಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ಮಳೆನೀರು ರಸ್ತೆಯಲ್ಲಿಯೇ ಹರಿಯಿತು. ಹಳೆಯ ತಾಲೂಕು ಕಚೇರಿ ಆವರಣದಲ್ಲಿ ನೀರು ನಿಂತು ಇಲ್ಲಿ ಇತ್ತೀಚೆಗೆ ನಿರ್ಮಾಣವಾದ ಇಂದಿರಾ ಕ್ಯಾಂಟೀನ್‌ಗೆ ತೆರಳುವವರು ಪರದಾಡುವಂತಾಯಿತು. 

ಹೆದ್ದಾರಿ ಗುಂಡಿ
ಕರಾವಳಿ ಬೈಪಾಸ್‌ ಶಾರದಾ ಹೊಟೇಲ್‌ ಬಲ ಬದಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗಳು ಬಿದ್ದಿವೆ. ಇತ್ತ ಕರಾವಳಿ ಜಂಕ್ಷನ್‌ನಲ್ಲಿ ಉಡುಪಿ ನಗರದಿಂದ ಹೆದ್ದಾರಿ ಸಂಪರ್ಕಿಸುವಲ್ಲಿಯೂ ಹೊಂಡಗಳು ಬೀಳಲಾರಂಭಿಸಿವೆ. ಮುಖ್ಯವಾಗಿ ಇಲ್ಲಿ ಮಳೆನೀರು ಚರಂಡಿಯಲ್ಲಿ ಮೊನ್ನೆಯ ಮಳೆಗೆ ಬ್ಲಾಕ್‌ ಆದಾಗ ಅದನ್ನು ಸರಿಪಡಿಸಲು ತೋಡಿದ ಗುಂಡಿ ಅಪಾಯ ಆಹ್ವಾನಿಸುತ್ತಿದೆ.

ಅಂಬಾಗಿಲಿನಲ್ಲಿ ಕೊಳಚೆ ನೀರಿನ ಪ್ರವಾಹ
ಅಂಬಾಗಿಲು ಮೀನುಮಾರುಕಟ್ಟೆ ಪರಿಸರದಲ್ಲಿ ಅಂಬಾ ಹೊಟೇಲ್‌ ಎದುರು ಕಳೆದೊಂದು ತಿಂಗಳಿನಿಂದ ಒಳಚರಂಡಿಯ ಮ್ಯಾನ್‌ಹೋಲ್‌ನಲ್ಲಿ ಕೊಳಚೆ ನೀರು ಹೊರಗೆ ಚಿಮ್ಮುತ್ತಿದೆ. ಪೆರಂಪಳ್ಳಿವರೆಗೂ ಇದರ ನೀರು ಹರಿಯುತ್ತಿದೆ. ನಗರಸಭೆ ಸಿಬಂದಿ ಹಲವು ಬಾರಿ ಇದನ್ನು ದುರಸ್ತಿ ಮಾಡಿದರೂ ಪ್ರಯೋಜನವಾಗಿಲ್ಲ. ಶನಿವಾರ ಮಳೆಗೆ ಕೊಳಚೆ ನೀರು ಪ್ರವಾಹ ರೀತಿ ಹರಿಯಿತು. 

ನರ್ಮ್ ಬಸ್‌ ನಿಲ್ದಾಣ ಕೆಸರುಮಯ
ನರ್ಮ್ ಬಸ್‌ಗಳು ನಿಲುಗಡೆಯಾಗುವ ಉಡುಪಿ ಸಿಟಿ ಬಸ್‌ನಿಲ್ದಾಣ ಸಮೀಪದ ಸ್ಥಳ ಬೇಸಗೆಗೆ ಧೂಳಿನಿಂದ ಆವೃತವಾಗಿತ್ತು. ಈಗ ಮಳೆಗೆ ಕೆಸರುಮಯವಾಗಿದೆ. ಶನಿವಾರ ಬಸ್‌ಗಳನ್ನು ಹತ್ತಲು, ಬಸ್‌ನಿಂದ ಇಳಿದು ಬರಲು ಪ್ರಯಾಣಿಕರು ಪ್ರಯಾಸಪಟ್ಟರು.  

ಬನ್ನಂಜೆ ಒಳರಸ್ತೆಯಲ್ಲಿ ಮರ ಬಿದ್ದುದನ್ನು ಅಗ್ನಿಶಾಮಕ ಸಿಬಂದಿ ತೆರವುಗೊಳಿಸಿದರು. ಅಂಬಲಪಾಡಿ ಸೇರಿದಂತೆ ವಿವಿಧೆಡೆ ಶುಕ್ರವಾರ ರಾತ್ರಿ ಮತ್ತು ಶನಿವಾರ ವಿದ್ಯುತ್‌ ವ್ಯತ್ಯಯ ಉಂಟಾಯಿತು. ಮಣಿಪಾಲ ಎಂಐಟಿ ಬಳಿ ಹಾಗೂ ಹೆರ್ಗ ಅಚ್ಯುತನಗರ ಪರಿಸರದಲ್ಲಿ ವಿದ್ಯುತ್‌ ಲೈನ್‌ಗಳು ಸ್ಪಾರ್ಕ್‌ ಆಗಿ ವಿದ್ಯುತ್‌ ಸಂಪರ್ಕ ಕಡಿತವಾಯಿತು. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.