ರಾಜ್ಯದ 103 ತಾ| ನೆರೆ ಸಂತ್ರಸ್ತರಿಗೆ ಬಸವ, ಆಶ್ರಯ!

ರಾಜೀವ್‌ ಗಾಂಧಿ ವಸತಿ ನಿಗಮದಡಿಯಲ್ಲಿ ಮನೆ ; ದಾಖಲೆ ಒದಗಿಸುವುದೇ ಸಮಸ್ಯೆ

Team Udayavani, Aug 29, 2019, 5:04 AM IST

HOSE

ಕುಂದಾಪುರ: ರಾಜ್ಯದ 103 ತಾಲೂಕುಗಳಲ್ಲಿ ನೆರೆಯಿಂದ ಮನೆ ಕಳೆದುಕೊಂಡವರಿಗೆ ಗೃಹನಿರ್ಮಾಣಕ್ಕೆ 5 ಲಕ್ಷ ರೂ. ನೀಡುವುದಾಗಿ ಹೇಳಿದ ಸರಕಾರ ಆ ಮನೆಗಳನ್ನು ರಾಜೀವ್‌ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಬರುವ ಬಸವ, ಆಶ್ರಯದಂತಹ ಯೋಜನೆಗಳ ವ್ಯಾಪ್ತಿಗೆ ಸೇರಿಸಲು ಸೂಚಿಸಿದೆ. ಫ‌ಲಾನುಭವಿಗೆ ಮನೆ ಕಟ್ಟಿಕೊಳ್ಳಲು ಅಸಾಧ್ಯವಾದರೆ ಕಂದಾಯ ಇಲಾಖೆಯ ಅನುಷ್ಠಾನ ಸಂಸ್ಥೆಗಳ ಮೂಲಕ ನಿರ್ಮಿಸಿಕೊಡಲು ನಿರ್ದೇಶಿಸಲಾಗಿದೆ.

50 ಸಾವಿರ ರೂ. ಬಾಡಿಗೆ
ಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ., 10 ತಿಂಗಳ ಅವಧಿಗೆ ಸೀಮಿತವಾಗಿ ಒಟ್ಟು 50 ಸಾವಿರ ರೂ. ತಾತ್ಕಾಲಿಕ ವಸತಿಗಾಗಿ ಮನೆ ಬಾಡಿಗೆ ನೀಡಲಾಗುತ್ತದೆ. 10 ತಿಂಗಳ ಮೊದಲೇ ಮನೆ ರಚನೆಯಾದರೂ ಬಾಡಿಗೆ ಮೊತ್ತ ಏಕಗಂಟಿನಲ್ಲಿ ದೊರೆಯಲಿದೆ.

ತಗಡಿನ ಶೆಡ್‌ ಹಾಕಿ ತಾತ್ಕಾಲಿಕ ವಸತಿ ಮಾಡಿಕೊಂಡರೂ 50 ಸಾವಿರ ರೂ. ದೊರೆಯಲಿದೆ. ಮನೆಯ ಪಂಚಾಂಗವಷ್ಟೇ ಗಟ್ಟಿಯಿದ್ದು, ಇತರ ಮೂಲರಚನೆಗೆ ಧಕ್ಕೆಯಾಗಿ ಶೇ. 75ರಷ್ಟು ಹಾನಿಯಾದರೆ 1 ಲಕ್ಷ ರೂ., ಶೇ. 25ಕ್ಕಿಂತ ಕಡಿಮೆ ಹಾನಿಗೆ 25 ಸಾವಿರ ರೂ. ಪರಿಹಾರ ನೀಡಲಾಗುತ್ತದೆ. ರಾಜೀವ್‌ ಗಾಂಧಿ ನಿಗಮ ನಿಯಮದಂತೆ ಕಾಮಗಾರಿ ಭಾಗಶಃ ಆದ ಬಳಿಕ ಅನುದಾನ ನೀಡಲಾಗುತ್ತದೆ. ಆದರೆ ನೆರೆ ಸಂತ್ರಸ್ತರಿಗೆ ಮಾತ್ರ ಪರಿಹಾರದ ಮೊದಲ ಕಂತನ್ನು ಮುಂಗಡವಾಗಿ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.

ಸಾಫ್ಟ್ವೇರ್‌ ರಚನೆ
ನೆರೆ ಸಂತ್ರಸ್ತರಿಗೆ ತುರ್ತಾಗಿ ವಸತಿ ಮಂಜೂರುಗೊಳಿಸಲು ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳನ್ನು ಪ್ರವಾಹಪೀಡಿತ ಎಂದು ಘೋಷಿಸಲಾಗಿದ್ದು, ಈ ಸಾಫ್ಟ್ವೇರ್‌ನಲ್ಲಿ ಜಿಲ್ಲಾಧಿಕಾರಿಗಳು ಗುರುತಿಸಿದ ನಿರ್ವಸಿತರ ಪಟ್ಟಿಯನ್ನು ನಮೂದಿಸಬೇಕಿದೆ.

ಸವಾಲಿನ ಕೆಲಸ
ಮನೆ ಪೂರ್ಣ ಪ್ರಮಾಣದಲ್ಲಿ ನಾಶವಾಗಿದ್ದರೆ ಯೋಜನೆಯಡಿ ನಿರ್ಮಿಸಿಕೊಳ್ಳಲು ಅಂತಹ ಮನೆಗಳ ಸದಸ್ಯರ ಆಧಾರ್‌, ಪಡಿತರ ಚೀಟಿ, ಬ್ಯಾಂಕ್‌ ಖಾತೆ ಮಾಹಿತಿ ಇತ್ಯಾದಿ ಒದಗಿಸಬೇಕಾಗುತ್ತದೆ. ಕೆಲವೆಡೆ ನೆರೆಹಾನಿ ತೆರವು ಕಾರ್ಯಾಚರಣೆಯೇ ಪೂರ್ಣಗೊಂಡಿಲ್ಲ. ಹೀಗಿರುವಾಗ ನಾಶವಾದ ಫ‌ಲಾನುಭವಿಗಳ ದಾಖಲೆಗಳಿಗೆ ಏನು ಪರ್ಯಾಯ ಎನ್ನುವ ಕುರಿತು ಜಿಲ್ಲಾಡಳಿತ ಗಮನ ಕೊಡಬೇಕಿದೆ.

ಜಾಗ ಬದಲಿಸುವಂತಿಲ್ಲ
ಹಾನಿಗೊಳಗಾದ ಜಾಗದಲ್ಲಿಯೇ ಮನೆ ನಿರ್ಮಿಸಲು ಅಭ್ಯಂತರವಿಲ್ಲವೆಂದು ಜಿಲ್ಲಾಧಿಕಾರಿ ದೃಢೀಕರಣ ನೀಡಬೇಕು. ಹೊಸ ಜಾಗದಲ್ಲಿ ಮನೆ ನಿರ್ಮಾಣ ಮಾಡಬೇಕಾದರೆ ಕಂದಾಯ ಇಲಾಖೆ ಸ್ಥಳಾಂತರಿಸಬೇಕಾದ ಹಳ್ಳಿಗಳ ಪಟ್ಟಿಯನ್ನು ಅನುಮೋದಿಸಿದ ಅನಂತರವಷ್ಟೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಆ ಬಳಿಕ ಜಿಲ್ಲಾಧಿಕಾರಿ ಕೂಡ ಪಟ್ಟಿ ಬದಲಾಯಿಸುವಂತಿಲ್ಲ. ಮನೆ ನಿರ್ಮಾಣಕ್ಕೆ ಫ‌ಲಾನುಭವಿಗೇ ಆದ್ಯತೆ ನೀಡಬೇಕು. ಫ‌ಲಾನುಭವಿ ಅಸಾಧ್ಯವೆಂದು ಬರೆದುಕೊಟ್ಟರೆ, ಅದನ್ನು ಜಿಲ್ಲಾಧಿಕಾರಿ ದೃಢೀಕರಿಸಿದ ಬಳಿಕ ಕಂದಾಯ ಇಲಾಖೆಯು ಕಟ್ಟಿಸಿಕೊಡಬಹುದು.

ಬಸವ, ಆಶ್ರಯ, ಪ್ರಧಾನಿ ಆವಾಸ್‌
ಫ‌ಲಾನುಭವಿಗಳ ಪೈಕಿ ಅರ್ಹ ಕುಟುಂಬಗಳನ್ನು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಆದ್ಯತೆ ನೀಡಿ ಸೂಕ್ತ ವಸತಿ ಯೋಜನೆಗಳ ಮಾನದಂಡಗಳಂತೆ ಅರ್ಹತೆಯನ್ನು ಪರಿಶೀಲಿಸಿ ಸಂಯೋಜಿಸಬೇಕು. ವಸತಿ ಯೋಜನೆಗೆ ಮೀಸಲಿಟ್ಟ ಗುರಿಯನ್ನು ಇದರ ಜತೆ ವಿಲೀನ ಮಾಡುವಂತೆ ಸೂಚಿಸಲಾಗಿದೆ. ಪರಿಣಾಮವಾಗಿ ಈ ಬಾರಿ ಬಸವ, ಆಶ್ರಯ, ಪ್ರಧಾನಮಂತ್ರಿ ಆವಾಸ್‌ ಮನೆಗಳು ನೆರೆ ಫ‌ಲಾನುಭವಿಗಳ ಖಾತೆಗೆ ಗರಿಷ್ಠ ಜಮೆಯಾಗಲಿದ್ದು, ಇತರ ಅರ್ಜಿದಾರರಿಗೆ ಕಡಿಮೆ ಸಿಗಲಿವೆ.

ದಾಖಲೆ ನೀಡಲು ಕ್ರಮ
ನೆರೆಹಾನಿಯಲ್ಲಿ ದಾಖಲೆಗಳನ್ನು ಕಳೆದುಕೊಂಡವರಿಗೆ ಕಂದಾಯ ಇಲಾಖೆ ವತಿಯಿಂದ ಮಹಜರು ಮಾಡಿ ದಾಖಲೆಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು. ಆಧಾರ್‌, ಪಡಿತರ, ಬ್ಯಾಂಕ್‌ ಖಾತೆ ವಿವರ ಸೇರಿದಂತೆ ಎಲ್ಲ ದಾಖಲೆಗಳನ್ನೂ ಮಾಡಿಕೊಡಲಾಗುವುದು. ಯಾವುದೇ ಆತಂಕ ಅನಗತ್ಯ.
– ಶಶಿಕಾಂತ ಸೆಂಥಿಲ್‌
ದ.ಕ. ಜಿಲ್ಲಾಧಿಕಾರಿ

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.