ರಾಮಜನ್ಮಭೂಮಿ, ಗಂಗಾ ಶುದ್ಧೀಕರಣ – ಪ್ರಧಾನಿಯಿಂದ ಉತ್ತಮ ಪ್ರತಿಸ್ಪಂದನೆ: ಶ್ರೀ
ಪೇಜಾವರ ಶ್ರೀ - ಪ್ರಧಾನಿ ಮೋದಿ ಭೇಟಿ
Team Udayavani, Jul 17, 2019, 5:10 AM IST
ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಮಂಗಳವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನಿವಾಸದಲ್ಲಿ ನಡೆಯಿತು. ಶ್ರೀಗಳನ್ನು ಪ್ರಧಾನಿ ಮೋದಿ ಸ್ವತಃ ಕೈಹಿಡಿದು ನಿವಾಸದೊಳಕ್ಕೆ ಕರೆದೊಯ್ದು ಪ್ರಮುಖ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.
ಅರ್ಧ ತಾಸು ಚರ್ಚೆ
ಅಪರಾಹ್ನ 4.30ರಿಂದ ಸುಮಾರು 5 ಗಂಟೆಯವರೆಗೆ ಮಾತುಕತೆ ನಡೆಯಿತು.
“ಪ್ರಧಾನಿ ನಮ್ಮನ್ನು ತುಂಬಾ ಸಂತೋಷದಿಂದ ಸ್ವಾಗತಿಸಿದರು. ಐದು ವರ್ಷಗಳಲ್ಲಿ ಅವರು ಮಾಡಿದ ಸಾಧನೆ, ಅದಕ್ಕೆ ಜನತೆ ನೀಡಿದ ಅದ್ಭುತ ಬೆಂಬಲಕ್ಕೆ ಸಂತಸ ವ್ಯಕ್ತಪಡಿಸಿದರು. ದೇಶದ ಅಭಿವೃದ್ಧಿಗಾಗಿ ನಮ್ಮ ಪ್ರಾರ್ಥನೆ
ಯನ್ನು ಕೂಡ ಅವರಿಗೆ ತಿಳಿಸಿದೆ’ ಎಂದು ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.
“ರಾಮಜನ್ಮಭೂಮಿ ಮತ್ತು ಗಂಗಾ ಶುದ್ಧೀಕರಣ ಬಗ್ಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ಅವರು ಸ್ವಾಗತಿಸಿ ಪ್ರತಿಕ್ರಿಯಿಸಿ ದರು. ಬೆಂಗಳೂರಿಗೆ ಆಗಮಿಸಿದ ಅನಂತರ ಹೆಚ್ಚಿನ ಮಾಹಿತಿ ನೀಡುತ್ತೇನೆ’ ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ಕೈ ಹಿಡಿದು ಕರೆದೊಯ್ದ ಪ್ರಧಾನಿ
ಪೇಜಾವರ ಶ್ರೀಗಳು ಊರುಗೋಲನ್ನು ಪ್ರಧಾನಿ ನಿವಾಸದ ಹೊರಗೆ ಬಿಟ್ಟಿದ್ದರು. ಅಲ್ಲಿ ಅವರನ್ನು ಸ್ವಾಗತಿಸಿದ ಪ್ರಧಾನಿ ಮೋದಿ ಕೈ ಹಿಡಿದು ಕರೆದೊಯ್ದರು. ಪ್ರಭಾವಳಿ ಸಹಿತವಾದ ಶ್ರೀಕೃಷ್ಣನ ವಿಗ್ರಹವನ್ನು ಶ್ರೀಗಳು ಪ್ರಧಾನಿಗೆ ನೀಡಿ ಆಶೀರ್ವದಿಸಿದರು ಎಂದು ಶ್ರೀಗಳ ಆಪ್ತ ಸಹಾಯಕರು ತಿಳಿಸಿದ್ದಾರೆ.
ಗುರುಪೂರ್ಣಿಮೆ
ಹಲವು ವರ್ಷಗಳಿಂದ ಪೇಜಾವರ ಶ್ರೀಗಳ ಶಿಷ್ಯೆ ಉಮಾಭಾರತಿ ಹೊಸದಿಲ್ಲಿಯ ಅವರ ನಿವಾಸದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಪೇಜಾವರ ಶ್ರೀಗಳು ಆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸಚಿವರು, ಲೋಕಸಭೆ ಸ್ಪೀಕರ್ ಸಹಿತ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು. ಪೇಜಾವರ ಶ್ರೀಗಳ ಪರ್ಯಾಯ ಅವಧಿಯಲ್ಲಿ ಉಮಾ ಭಾರತಿಯವರೇ ಗುರುಪೂರ್ಣಿಮೆಯಂದು ಉಡುಪಿಗೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ