ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 


Team Udayavani, Dec 5, 2021, 6:33 AM IST

ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 

ಉಡುಪಿ: ಒಮಿಕ್ರಾನ್‌ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜು, ಹಾಸ್ಟೆಲ್‌ಗ‌ಳಲ್ಲಿ ವಿದ್ಯಾರ್ಥಿ ಗಳಿಗೆ, ಶಿಕ್ಷಕರಿಗೆ ಕೊರೊನಾ ರ್‍ಯಾಂಡಮ್‌ ಪರೀಕ್ಷೆ ನಡೆಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ನಿತ್ಯ 5 ಸಾವಿರ ಜನರಿಗೆ ಕೊರೊನಾ ಪರೀಕ್ಷೆ ನಡೆಸುವ ಗುರಿ ಹೊಂದಿದ್ದೇವೆ. ಪ್ರೌಢ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು -ಬೋಧಕ ಸಿಬಂದಿ, ಹೊಟೇಲ್‌, ರೆಸ್ಟೋರೆಂಟ್‌, ಮಾಲ್‌, ಅಂಗಡಿ ಮುಂಗಟ್ಟುಗಳ ಮಾಲಕರು-ಸಿಬಂದಿ, ಕ್ಯಾಟರಿಂಗ್‌ ಸಿಬಂದಿ, ಮನೆ ಮನೆಗೆ ಆಹಾರ ಪದಾರ್ಥ ವಿತರಿಸುವವರು, ಕಾರ್ಖಾನೆ, ಕಚೇರಿಗಳು, ಪಬ್‌, ಬಾರ್‌, ಸಿನೆಮಾ ಮಂದಿರ, ಮಲ್ಟಿಪ್ಲೆಕ್ಸ್‌ ಗಳ ಸಿಬಂದಿಗೆ ಮುಂದಿನ ಒಂದು ವಾರದಲ್ಲಿ ರ್‍ಯಾಂಡಮ್‌ ಪರೀಕ್ಷೆ ಮಾಡಲಿದ್ದೇವೆ. ಸಾರ್ವಜನಿಕರು ಗುಂಪು ಸೇರಿದಾಗಲೂ ರ್‍ಯಾಂಡಮ್‌ ಪರೀಕ್ಷೆ ನಡೆಸುತ್ತೇವೆ ಎಂದರು.

ಜಿಲ್ಲೆಗೆ ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರದಿಂದ ಬಂದ 266 ಮಂದಿಯಲ್ಲಿ 12 ಮಂದಿಗೆ, ಕೇರಳದಿಂದ ಬಂದ 69 ಮಂದಿಯಲ್ಲಿ 9 ಮಂದಿಗೆ ಕೊರೊನಾ ದೃಢಪಟ್ಟಿದೆ. ವಿದೇಶದಿಂದ 91 ಮಂದಿ ಜಿಲ್ಲೆಗೆ ಬಂದಿದ್ದು, ಅವರಲ್ಲಿ ಮೂವರು ಹೈರಿಸ್ಕ್ ದೇಶದಿಂದ ಬಂದವರು. ಎಲ್ಲರ ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ. ಆದರೂ ಒಂದು ವಾರ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಿದ್ದು, ಅನಂತರ ಮತ್ತೂಮ್ಮೆ ಪರೀಕ್ಷೆ ಮಾಡಿಸಿಕೊಳ್ಳಲು ನಿರ್ದೇಶಿಸಿದ್ದೇವೆ ಎಂದರು.

ಪಾಸಿಟಿವಿಟಿ ದರ:

ಜಿಲ್ಲೆಯಲ್ಲಿ ಸದ್ಯ ಶೇ 0.4ರಷ್ಟು ಪಾಸಿಟಿವಿಟಿ ದರವಿದೆ. ಉಡುಪಿ ತಾಲೂಕಿನಲ್ಲಿ ಶೇ 0.6, ಕುಂದಾಪುರದಲ್ಲಿ ಶೇ 0.4 ಹಾಗೂ ಕಾರ್ಕಳದಲ್ಲಿ ಶೇ 0.1ರಷ್ಟಿದೆ. ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಸೇವೆ ಸಲ್ಲಿಸಿರುವ ಸಮಿತಿಗಳನ್ನು ಪುನಃ ಕ್ರಿಯಾಶೀಲಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ. ಜಿಲ್ಲೆಯಲ್ಲಿನ ಆಕ್ಸಿಜನ್‌ ಸಹಿತ ಹಾಸಿಗೆ ಲಭ್ಯತೆಯ ಮಾಹಿತಿ ಪಡೆಯುತ್ತಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಬರುವ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಿದ್ದೇವೆ ಎಂದರು.

ಕಾರ್ಯಕ್ರಮ ಮುಂದಕ್ಕೆ :

ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆ, ಹಬ್ಬ-ಸಮಾರಂಭಗಳನ್ನು 2022ರ ಜನವರಿಗೆ 15ರವರೆಗೆ ಮುಂದೂಡಲು ಸೂಚನೆ ನೀಡಿದ್ದೇವೆ. ರಾಜಕೀಯ ಸಮಾವೇಶ, ಮದುವೆ ಸಹಿತವಾಗಿ ಎಲ್ಲ ಸಭೆ, ಸಮಾರಂಭ, ಸಮ್ಮೇಳನಗಳಲ್ಲಿ 500 ಜನರಿಗೆ ಮಿತಿ ನೀಡಲಾಗಿದೆ. ಇಲ್ಲಿ ಕೊರೊನಾ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದು ಕಾರ್ಯಕ್ರಮ ಸಂಘಟಕರು ಅಥವಾ ವ್ಯವಸ್ಥಾಪಕರ ಜವಾಬ್ದಾರಿ. ಈ ಬಗ್ಗೆ ವಿಚಕ್ಷಣದಳದಿಂದ ನಿಗಾ ವಹಿಸಲಾಗುತ್ತದೆ. ಕೊರೊನಾ ಲಸಿಕೆಯ ಎರಡನೇ ಡೋಸ್‌ ಪಡೆದವರಿಗೆ ಮಾತ್ರ ಮಾಲ್‌ ಹಾಗೂ ಚಿತ್ರಮಂದಿರಗಳಿಗೆ ಪ್ರವೇಶ ನೀಡಲಾಗುತ್ತದೆ. ಈ ಬಗ್ಗೆ ಅಲ್ಲಿನ ಸಿಬಂದಿ ಹಾಗೂ ವ್ಯವಸ್ಥಾಪಕರಿಗೆ ಸ್ಪಷ್ಟ ಸೂಚನೆ ನೀಡಲಾಗುತ್ತದೆ ಎಂದು ವಿವರ ನೀಡಿದರು.

ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಎಸ್‌ಪಿ ವಿಷ್ಣುವರ್ಧನ್‌, ಎಡಿಸಿ ಬಾಲಕೃಷ್ಣಪ್ಪ ಪತ್ರಿಕಾಗೋಷ್ಠಿ ಯಲ್ಲಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.