ವೃದ್ಧೆಯ ಮೇಲೆ ಅತ್ಯಾಚಾರ:ಪ್ರಕರಣ ತಡವಾಗಿ ಬೆಳಕಿಗೆ
Team Udayavani, Jun 12, 2017, 4:44 PM IST
ಉಡುಪಿ: ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 70 ವರ್ಷದ ವೃದ್ಧೆಯ ಮೇಲೆ ಅಪರಿಚಿತ ಯುವಕನೊಬ್ಬ ಅತ್ಯಾಚಾರ ಮಾಡಿ ವೃದ್ಧೆಯಲ್ಲಿದ್ದ ನಗದು ಮತ್ತು ಚಿನ್ನಾಭರಣನ್ನು ಸಹ ದೋಚಿಕೊಂಡು ಹೋದ ಘಟನೆ ಉಡುಪಿ ನಗರ ಠಾಣೆ ವ್ಯಾಪ್ತಿಯಲ್ಲಿ ಜೂ. 5ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಗರದ ಹೊರವಲಯದಲ್ಲಿರುವ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ತ ವೃದ್ಧೆ ಆಶ್ರಯ ಪಡೆದಿದ್ದಾರೆ. ಪ್ರಕರಣದ ಕುರಿತು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉಡುಪಿ ಸರ್ಕಲ್ ಇನ್ಸ್ಪೆಕ್ಟರ್ ನವೀನ್ಚಂದ್ರ ಜೋಗಿ ತನಿಖೆ ನಡೆಸುತ್ತಿದ್ದಾರೆ. ಗಂಭೀರ ಪ್ರಕರಣವಾಗಿದ್ದರೂ, ಈ ಬಗ್ಗೆ ಮಾಧ್ಯಮಗಳಿಗೆ ಗೊತ್ತಾಗದಂತೆ ಪೊಲೀಸರೇ ನೋಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದಕ್ಕೆ ಪೂರಕವಾಗಿ ಪ್ರಕರಣದ ಕುರಿತು ತನಿಖಾಧಿಕಾರಿಗಳಲ್ಲಿ ಮಾಹಿತಿ ಕೇಳಿದಾಗ ಅತ್ಯಾಚಾರ ಪ್ರಕರಣವಾದ ಕಾರಣ ಮಾಧ್ಯಮಗಳಿಗೆ ಏನೂ ಹೇಳಲಾಗಲ್ಲ ಎಂದಿದ್ದಾರೆ.
ಸಂತ್ರಸ್ತೆಯ ಬಗ್ಗೆ ಬೇಡ, ಆರೋಪಿಯ ಕುರಿತಾಗಿ ಮಾಹಿತಿ ನೀಡಿ ಎಂದು ಹೇಳಿದರೂ, ಮಹಿಳಾ ಠಾಣೆಯಲ್ಲಿ ಕೇಳಿ ಎಂದು ತನ್ನ ಜವಾಬ್ದಾರಿಯಿಂದ ತನಿಖಾಧಿಕಾರಿ ನುಣುಚಿಕೊಂಡಿದ್ದಾರೆ. ಇಲಾಖೆಯ ಸಿಸಿ ಕೆಮರಾ, ಖಾಸಗಿ ಕಟ್ಟಡಗಳಲ್ಲಿ ಸಿಸಿ ಕೆಮರಾ ನಗರದೆಲ್ಲೆಡೆ ಕಣ್ಗಾವಲಿಗೆ ಇದ್ದರೂ ವಾರ ಕಳೆದರೂ, ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರಿಂದ ಸಾಧ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ