ಗ್ರಾಮ ಪಂಚಾಯತ್ ಗಳಲ್ಲಿ ಶೀಘ್ರ ಆಧಾರ್‌ ತಿದ್ದುಪಡಿ


Team Udayavani, Oct 29, 2020, 6:00 AM IST

ಗ್ರಾಮ ಪಂಚಾಯತ್ ಗಳಲ್ಲಿ ಶೀಘ್ರ ಆಧಾರ್‌ ತಿದ್ದುಪಡಿ

ಸಾಂದರ್ಭಿಕ ಚಿತ್ರ

ಕುಂದಾಪುರ: ಗ್ರಾಮ ಪಂಚಾಯತ್‌ಗಳಲ್ಲಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಆಧಾರ್‌ ತಿದ್ದುಪಡಿ, ನೋಂದಣಿ ಸೌಲಭ್ಯ ಶೀಘ್ರದಲ್ಲಿ ಪುನರಾರಂಭಗೊಳ್ಳಲಿದೆ. ಈಗಾಗಲೇ ಸೈಬರ್‌ ಸೆಂಟರ್‌, ಝೆರಾಕ್ಸ್‌ ಅಂಗಡಿಗಳ ಸಹಿತ ಅನೇಕ ಕಡೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಬ್ಯಾಂಕ್‌, ಅಂಚೆ ಕಚೇರಿಗಳಲ್ಲೂ ಆಧಾರ್‌ ಸೌಲಭ್ಯ ಇದೆ. ಸೈಬರ್‌ ಸೆಂಟರ್‌ಗಳಲ್ಲಿ ದುರುಪಯೋಗದ ಹಿನ್ನೆಲೆಯಲ್ಲಿ ಸೇವೆಗೆ ಮಿತಿ ಹೇರಲಾಗಿದೆ.

ಆರಂಭ
2018ರ ಸೆ. 7ರಂದು ಗ್ರಾ.ಪಂ.ಗಳಲ್ಲಿ ಆಧಾರ್‌ ಪ್ರಕ್ರಿಯೆ ನಡೆಸಲು ಸರಕಾರ ತೀರ್ಮಾನಿಸಿತ್ತು. ತರಬೇತಿ ನೀಡಿ ಅಗತ್ಯ ವಸ್ತುಗಳನ್ನೂ ವಿತರಿಸಲಾಗಿತ್ತು. ಸಾಫ್ಟ್ವೇರ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಸ್ಥಳೀಯವಾಗಿ ಸಾರ್ವಜನಿಕರ ಕೈಗೆಟಕುವಂತೆ ಗ್ರಾ.ಪಂ.ಗಳಲ್ಲಿ ನಡೆಯುತ್ತಿದ್ದ ಆಧಾರ್‌ ತಿದ್ದುಪಡಿ ಸರ್ವರ್‌ ಸಮಸ್ಯೆ ನೆಪದಲ್ಲಿ ಒಂದೊಂದೇ ಗ್ರಾ.ಪಂ.ಗಳಲ್ಲಿ ಸ್ಥಗಿತಗೊಂಡು ತಾಂತ್ರಿಕ ಕಾರಣದ ಗ್ರಹಣ ಬಡಿದು ಕಳೆದ ವರ್ಷ ಜೂನ್‌ನಿಂದ ಆಧಾರರಹಿತವಾಗಿದೆ. ಈ ವರ್ಷ ಮಾರ್ಚ್‌ ಕೊನೆಯಿಂದ ಕೊರೊನಾ ಕಾರಣದಿಂದ ಒಟ್ಟು ಆಧಾರ್‌ ಪ್ರಕ್ರಿಯೆಯನ್ನೇ ನಿಲ್ಲಿಸಲಾಗಿತ್ತು. ಲಾಕ್‌ಡೌನ್‌ ತೆರವಿನ ಅನ್‌ಲಾಕ್‌-5 ಮಾರ್ಗಸೂಚಿ ಬಳಿಕ ಆಧಾರ್‌ ಪ್ರಕ್ರಿಯೆ ಆರಂಭವಾಗಿದೆ.

ಗೊಂದಲ ಮಾಯ!
ಗೊಂದಲಮಯವಾಗಿದ್ದ ಆಧಾರ್‌ ಈಗ ಗೊಂದಲ ಮಾಯವಾಗಿದೆ. ಅನುಮತಿ ಪಡೆದ ಸೈಬರ್‌ ಸೆಂಟರ್‌ಗಳಲ್ಲೂ ತಿದ್ದುಪಡಿಗೆ ಅವಕಾಶ ಇದ್ದು ವಿಳಾಸ, ಜನ್ಮದಿನಾಂಕ, ಹೆಸರು ಮೊದಲಾದ ತಿದ್ದುಪಡಿ ಮಾಡಬಹುದು. ಇದಕ್ಕಾಗಿ ತಾಲೂಕು ಕಚೇರಿಯ ಆಧಾರ್‌ ಕೇಂದ್ರಕ್ಕೆ ಅಲೆದಾಡಬೇಕಿಲ್ಲ. ಆದರೆ ಹೊಸ ನೋಂದಣಿ, ಬೆರಳಚ್ಚು ಬದಲಾವಣೆ ಸೈಬರ್‌ಗಳಲ್ಲಿ ನಡೆಯುವುದಿಲ್ಲ. ಇವುಗಳಿಗೆ ತಾಲೂಕು ಕಚೇರಿ, ಅಂಚೆ ಇಲಾಖೆ, ಬ್ಯಾಂಕ್‌ಗಳಲ್ಲಿ ಇರುವ ಕೇಂದ್ರಗಳಿಗೇ ಹೋಗಬೇಕು.

ವಿಳಂಬ
ಒಂದು ಕಂಪ್ಯೂಟರ್‌ನಲ್ಲಿ 150 ಆಧಾರ್‌ ಪ್ರಕ್ರಿಯೆ ನಡೆಸಲಷ್ಟೇ ಅವಕಾಶ ಇರುವುದು. ಬಯೋಮೆಟ್ರಿಕ್‌ ಅಪ್‌ಡೇಟ್‌ಗೆ ಹೆಚ್ಚು ಸಮಯ ಬೇಕಾಗುತ್ತದೆ. ಮಕ್ಕಳ ಬೆರಳಚ್ಚು ಪ್ರತಿ ಬೆರಳಿನದ್ದೂ 4 ಬಾರಿ ತೆಗೆದುಕೊಳ್ಳಬೇಕಾಗುತ್ತದೆ. ಸಣ್ಣ ಮಕ್ಕಳಿರುವಾಗ ಬೆರಳಚ್ಚು ನೀಡಿದರೆ ಕೆಲವು ವರ್ಷ ದಾಟಿದ ಬಳಿಕ ನವೀಕರಿಸಬೇಕಾಗುತ್ತದೆ. ಕಾರ್ಮಿಕರು, ಹಿರಿಯರ ಅನೇಕರ ಬೆರಳು ಸವೆದಿರುತ್ತದೆ. ಅರ್ಜಿಯಲ್ಲಿ ಗೊಂದಲ, ಅಸಮರ್ಪಕ ಮಾಹಿತಿ, ಯಂತ್ರ ಬೆರಳು ಗುರುತು ಸ್ವೀಕರಿಸದೇ ಇರುವುದು ಇತ್ಯಾದಿಗಳಿಂದಲೂ ಆಧಾರ್‌ ಪ್ರಕ್ರಿಯೆ ವಿಳಂಬವಾಗುತ್ತದೆ.

ಅಂಚೆ ಇಲಾಖೆ ಸೇವೆ
ಸಾರ್ವಜನಿಕರಿಗೆ ಆಧಾರ್‌ ಸೇವೆಯ ಅಗತ್ಯವನ್ನು ಅರಿತು ದ.ಕ. ಹಾಗೂ ಉಡುಪಿ ಅಂಚೆ ವಿಭಾಗವು ವಿವಿಧಅಂಚೆ ಕಚೇರಿಗಳಲ್ಲಿ ಅ. 6ರಂದು ಆಧಾರ್‌ ಮಹಾ ಅಭಿಯಾನ ಆಯೋಜಿಸಿತ್ತು. ಅವಶ್ಯಬಿದ್ದರೆ ಮತ್ತೆ ಅಭಿಯಾನ ನಡೆಸಲು ಇಲಾಖೆ ಸಿದ್ಧವಿದೆ ಎನ್ನುತ್ತಾರೆ ಕುಂದಾಪುರ ಸಹಾಯಕ ಅಂಚೆ ಅಧೀಕ್ಷಕ ಗಣಪತಿ ಮರ್ಡಿ.

ಶೀಘ್ರ ಅನುಷ್ಠಾನ
ಐದಾರು ಪಂಚಾಯತ್‌ಗಳಲ್ಲಿ ಪ್ರಾಯೋಗಿಕ ಹಂತದಲ್ಲಿ ನಡೆಯಲಿದ್ದು ಅನಂತರ ಎಲ್ಲ ಪಂಚಾಯತ್‌ಗಳಲ್ಲಿ ವ್ಯವಸ್ಥೆ ಜಾರಿಯಾಗಲಿದೆ. ಈ ಕುರಿತು ಸರಕಾರದ ಆದೇಶದ ನಿರೀಕ್ಷೆಯಲ್ಲಿದ್ದೇವೆ ಎನ್ನುತ್ತಾರೆ ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು.

ತಾಲೂಕು ಕಚೇರಿ, ಅಂಚೆ ಕಚೇರಿಗಳಲ್ಲಿ ಹಾಗೂ ಅನುಮತಿ ಪಡೆದ ಸೈಬರ್‌ ಸೆಂಟರ್‌, ಖಾಸಗಿ ಸಂಸ್ಥೆಗಳಲ್ಲಿ ಆಧಾರ್‌ ಪ್ರಕ್ರಿಯೆಗೆ ಅನ್‌ಲಾಕ್‌ -5 ಬಳಿಕ ಅನುಮತಿ ನೀಡಲಾಗಿದ್ದು ಎಲ್ಲ ಕಡೆ ಆಧಾರ್‌ ಪ್ರಕ್ರಿಯೆ ನಡೆಯುತ್ತಿದೆ.
– ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.