ಕಾಪು ಬಂಟರ ಸಂಘದ ವತಿಯಿಂ1000 ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆಗೆ ಚಾಲನೆ
Team Udayavani, Apr 4, 2020, 4:23 PM IST
ಕಾಪು : ಕೋವಿಡ್ 19 ವೈರಸ್ ಆತಂಕದ ಲಾಕ್ ಡೌನ್ ನಿಂದಾಗಿ ತೊಂದರೆಗೊಳಗಾಗಿರುವ ಕಾಪು ಬಂಟರ ಸಂಘ ವ್ಯಾಪ್ತಿಯ 1000 ಕುಟುಂಬಗಳಿಗೆ ಪ್ರಕಾಶ್ ಶೆಟ್ಟಿ ಬಂಜಾರ ಇವರ ಸಹಕಾರದೊಂದಿಗೆ ಪಡಿತರ ಕಿಟ್ ವಿತರಿಸುವ ಯೋಜನೆಗೆ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಮತ್ತು ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಪು ಬಂಟರ ಸಂಘದ ಅಧ್ಯಕ್ಷ ವಾಸುದೇವ ಶೆಟ್ಟಿ ಮಾತನಾಡಿ, ಎಂ.ಆರ್.ಜಿ ಗ್ರೂಫ್ಸ್ ನ ಪ್ರಕಾಶ್ ಶೆಟ್ಟಿ ಬಂಜಾರ ಅವರು 200 ಕಿಟ್ ಗಳನ್ನು ನೀಡಿದ್ದಾರೆ. ಉಳಿದಂತೆ ಕಾಪು ಬಂಟರ ಸಂಘದ ಮೂಲಕ 12 ಗ್ರಾಮಗಳ ವ್ಯಾಪ್ತಿಗೆ ಬರುವ ಎಲ್ಲಾ ಸಮುದಾಯಗಳ 1000 ಕುಟುಂಬಗಳಿಗೆ ಪಡಿತರ ಸಾಮಾಗ್ರಿಗಳ ಕಿಟ್ ಅನ್ನು ವಿತರಿಸುವುದಾಗಿ ಯೋಜನೆ ರೂಪಿಸಲಾಗಿದೆ ಎಂದರು.
ಕಾಪು ಉಪ ತಹಶೀಲ್ದಾರ್ ಚಂದ್ರಹಾಸ ಬಂಗೇರ, ಕಂದಾಯ ನಿರೀಕ್ಷಕ ಕೆ. ರವಿಶಂಕರ್, ಸಮಾಜರತ್ನ ಕೆ. ಲೀಲಾಧರ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಬಾಲಕೃಷ್ಣ ಶೆಟ್ಟಿ ದೊರಕಳಗುತ್ತು, ರವಿರಾಜ ಶೆಟ್ಟಿ ಪಂಜಿತ್ತೂರುಗುತ್ತು, ನಿರ್ಮಲ್ ಕುಮಾರ್ ಹೆಗ್ಡೆ, ರಘುರಾಮ ಶೆಟ್ಟಿ, ಪುರಸಭೆ ಸದಸ್ಯ ಅನಿಲ್ ಕುಮಾರ್, ರವೀಂದ್ರ ಮಲ್ಲಾರು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ