ಪಡಿತರಕ್ಕಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ
Team Udayavani, Apr 12, 2020, 3:08 PM IST
ಅಜೆಕಾರು: ಎರ್ಲಪಾಡಿಯ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಗ್ರಾಮಸ್ಥರದ್ದಾಗಿದೆ.
ಪ್ರತಿನಿತ್ಯ ಸರತಿ ಸಾಲಿನಲ್ಲಿ ಬಡವರು ಬಂದು ಸರಕಾರ ನೀಡುವ ಪಡಿತರಕ್ಕಾಗಿ ಗಂಟೆಗಟ್ಟಲೆ ಕಾದರೂ ಪಡಿತರ ಸಿಗುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.
ಸರ್ವರ್ ಡೌನ್, ಒಟಿಪಿ ಸಮಸ್ಯೆ ಮೊದಲಾದ ಕಾರಣ ನೀಡಲಾಗುತ್ತಿದೆ. ಎಂದು ಸ್ಥಳೀಯರು ಹೇಳಿದ್ದಾರೆ. ಇತ್ತೀಚೆಗೆ ಬೆಳಗ್ಗೆ 9 ಗಂಟೆಯಿಂದ ಜನ ಸಾಮಾಜಿಕ ಅಂತರವಿಲ್ಲದೆ ಸರತಿಯಲ್ಲಿ ನಿಂತದ್ದನ್ನು ಕಂಡು ಸ್ಥಳೀಯರು ತತ್ಕ್ಷಣ ಪಡಿತರ ನೀಡುವಂತೆ ಆಗ್ರಹಿಸಿದರು.
ಅನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಮೀಳಾ ನಾಯಕ್ ಮತ್ತು ಕಾರ್ಯದರ್ಶಿ ಸುನಂದಾ ಪಡಿತರ ಅಂಗಡಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ ಮಾಲಕರಿಗೆ ಸೂಕ್ತ ಮಾಹಿತಿ ನೀಡಿ ತ್ವರಿತವಾಗಿ ಪಡಿತರ ವಿತರಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ