ಅರೆಹೊಳೆ: ಜಲ್ಲಿ ಮಿಶ್ರಣ ಘಟಕದಿಂದ ಪರಿಸರಕ್ಕೆ ಹಾನಿ; ಆಕ್ರೋಶ 


Team Udayavani, Dec 11, 2018, 1:30 AM IST

arehola-10-12.jpg

ಉಪ್ಪುಂದ: ನಾವುಂದ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿಯ ವಿಸ್ತರೀಕರಣಕ್ಕೆ ಜಲ್ಲಿ ಪುಡಿ ಮಿಶ್ರಣ ಮಾಡುವ ಘಟಕದಿಂದಾಗಿ ಸ್ಥಳೀಯ ಪರಿಸರದ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವುಂದ ಅರೆಹೊಳೆ ಪ್ರದೇಶದಲ್ಲಿ ಮಾಡರ್ನ್ ರೋಡ್‌ ಮೇಕರ್ ಕಂಪೆನಿಯವರು ಹಾಟ್‌ ಮಿಕ್ಸ್‌, ವೆಟ್‌ ಮಿಕ್ಸ್‌ ಮತ್ತು ರೆಡಿಮಿಕ್ಸ್‌ ಕಾಂಕ್ರೀಟ್‌ ಪ್ಲಾಂಟ್‌ ನಡೆಸುತ್ತಿದ್ದು ಇದರ ಸುತ್ತಮುತ್ತಲಿನ 80ಕ್ಕೂ ಹೆಚ್ಚು ಮನೆಗಳಿಗೆ ಹಾಗೂ ನೂರಾರು ಎಕ್ರರೆ ಗದ್ದೆ, ಕೃಷಿ ತೋಟಗಳಿಗೆ ಮತ್ತು ಪ್ರಾಣಿಗಳ ಆರೋಗ್ಯದ ಮೇಲೆ ತೀವ್ರವಾದ ತೊಂದರೆ ಆಗುತ್ತಿರುವುದು ಕಂಡುಬಂದಿದೆ.

ಕೃಷಿಗೆ ಹಾನಿ

ಜಲ್ಲಿ ಹಾಗೂ ಕಾಂಕ್ರೀಟ್‌ ಮಿಶ್ರಣ ಘಟಕದಿಂದ ಅತೀಯಾದ ಧೂಳು ಪರಿಸರವೆಲ್ಲ ಆವರಿಸಿಕೊಳ್ಳುತ್ತಿದೆ. ಸ್ಥಳೀಯ ಜನರಲ್ಲಿ ಆರೋಗ್ಯದ ಸಮಸ್ಯೆ ಕಾಡುತ್ತಿದೆ. ಜಲ್ಲಿಯ ಕಣಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿ ಕೃಷಿ ಭೂಮಿಯನ್ನು ತಲುಪಿದ್ದು ಬೆಳಗಳಿಗೆ ಹಾನಿ ಉಂಟಾಗಿದೆ. ಈ ಪ್ಲಾಂಟ್‌ ಸಮೀಪದ ತೆಂಗು, ಅಡಿಕೆ ಮತ್ತು ಕಾಳು ಮೆಣಸಿನ ಬೆಳೆಗಳು ಇದರಿಂದಾಗಿ ನಾಶವಾಗುತ್ತಿವೆೆ. ಕಲುಷಿತ ನೀರು ಜಾನುವಾರುಗಳು ಕುಡಿದ ಪರಿಣಾಮ ಮೂಕಾಂಬು ಅವರ ಮನೆಯ ದನವೊಂದು ಸಾವನ್ನಪ್ಪಿದೆ. ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಪರಿಗಣಿಸದೆ ಮನಸ್ಸಿಗೆ ಬಂದಂತೆ ಕಾರ್ಯನಿರ್ವಹಿಸುತ್ತಿರುವ ಘಟಕದಿಂದಾಗಿ ಸಾರ್ವಜನಿಕರು ಪ್ರತಿದಿನ ಸಮಸ್ಯೆಗಳೊಂದಿಗೆ ಭಯ ಭೀತಿಯಿಂದ ಜೀವನ ಕಳೆಯುವಂತಾಗಿದ್ದು ಈ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಗೋಡೆಗಳಲ್ಲಿ ಬಿರುಕು

ದೊಡ್ಡ ದೊಡ್ಡ ಶಿಲೆಕಲ್ಲುಗಳನ್ನು ತಂದು ಯಂತ್ರದ ಮೂಲಕ ಪುಡಿ ಮಾಡುವುದರಿಂದ ದೊಡ್ಡ ಪ್ರಮಾಣದ ಶಬ್ಧ ಉಂಟಾಗುತ್ತಿದೆ. ಇದರಿಂದಾಗಿ ಪ್ಲಾಂಟ್‌ನ ಹತ್ತಿರದ ಮನೆಗಳ ಗೋಡೆಗಳಲ್ಲಿ ಬಿರುಕು ಮೂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುಗುವ ಸಾಧ್ಯತೆ ಇದ್ದು ಶಿಥಿಲಗೊಂಡಿರುವ ಗೋಡೆಗಳಿಂದ ಅಪಾಯ ಎದುರಾಗಿದೆ. ರಾತ್ರಿ ಸಮಯದಲ್ಲೂ ಕೆಲಸ ಮಾಡುತ್ತಿರುವುದರಿಂದ ನಿದ್ದೆ ಮಾಡಲು ಸಮಸ್ಯೆಯಾಗುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಪರವಾನಿಗೆ ರದ್ದು
ಈ ಜಲ್ಲಿ ಮಿಶ್ರಣ ಘಟಕದಿಂದಾಗಿ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಪಂಚಾಯತ್‌ಗೆ ದೂರು ಸ್ಥಳೀಯ ನಿವಾಸಿಗಳು ದೂರು ನೀಡಿರುವುದರಿಂದ ನಾವುಂದ ಗ್ರಾ.ಪಂ.ನಲ್ಲಿ ನ.28ರಂದು ತುರ್ತು ಸಭೆ ಕರೆದು ಪಂಚಾಯತ್‌ನಿಂದ ನೀಡಲಾಗಿರುವ ಪರವಾನಿಗೆ ಮತ್ತು ನಿರಾಕ್ಷೇಪಣ ಪತ್ರದ ನವೀಕರಣ ಅವಧಿ ಮುಕ್ತಾಯಗೊಂಡಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುವುದು ಕಂಡುಬಂದಿರುವುದರಿಂದ ಪರವಾನಿಗೆಯನ್ನು ರದ್ದುಪಡಿಸಲು ಹಾಗೂ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ತುರ್ತು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿದೆ.
– ಗಣೇಶ, ಪಂ.ಅಭಿವೃದ್ಧಿ ಅಧಿಕಾರಿ ನಾವುಂದ


ಪ್ರತಿಭಟನೆ ನಡೆಸುತ್ತೇವೆ

ಜಲ್ಲಿ ಮಿಶ್ರಿತ ಘಟಕದಿಂದ ಜನರ ಆರೋಗ್ಯದ ಮೇಲೆ ಸಮಸ್ಯೆಯಾಗುತ್ತಿರುವುದನ್ನು ಕಂಪೆನಿಯ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಸಿಗಲಿಲ್ಲ. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದೇ ಕಾನೂನುಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿರುವ ಘಟಕದಿಂದ ನಮ್ಮ ನೆಮ್ಮದಿಯ ಜೀವನಕ್ಕೆ ತೊಂದರೆಯಾಗಿದ್ದು ಈ ಕುರಿತು ಗ್ರಾಮಸ್ಥರು ಪ್ರತಿಭಟನೆ ನಡೆಸಲಿದ್ದೇವೆ.
-ನಾಗೇಂದ್ರ, ಸ್ಥಳೀಯರು

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.