ಕೊಳವೆಬಾವಿಗಳ ಪುನಃಶ್ಚೇತನ ಕಾರ್ಯ
Team Udayavani, Jun 20, 2019, 5:35 AM IST
ಪಡುಬಿದ್ರಿ: ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಒಡೆತನದ ಯುಪಿಸಿಎಲ್ ಸಂಸ್ಥೆಯು ತನ್ನ ಸಿಎಸ್ಆರ್ ಯೋಜನೆಯಡಿ ಮುದರಂಗಡಿ ಗ್ರಾ. ಪಂ. ವ್ಯಾಪ್ತಿಯಲ್ಲಿನ ಕೊಳವೆ ಬಾವಿಗಳನ್ನು ಪುನಃಶ್ಚೇತನಗೊಳಿಸಲು ಮುಂದಾಗಿದೆ. ಪಂಚಾಯತ್ಗೆ ಈ ಕುರಿತಾದ ದೃಢೀಕರಣ ಪತ್ರವನ್ನು ಜೂ. 17ರಂದು ಹಸ್ತಾಂತರಿಸಿದೆ.
ಮುದರಂಗಡಿ ಪಂಚಾಯತ್ ವಠಾರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿಅದಾನಿ ಸಮೂಹದ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರು ದೃಢೀಕರಣ ಪತ್ರವನ್ನು ಪಂಚಾಯತ್ಅಧ್ಯಕ್ಷ ಡೇವಿಡ್ ಡಿ’ಸೋಜ ಅವರಿಗೆ ಹಸ್ತಾಂತರಿಸಿದರು.
ಜಿಲ್ಲೆಯಲ್ಲಿನ ನೀರಿನ ಅಭಾವವನ್ನು ಪರಿಗಣಿಸಿ, ಮುಂಬರುವ ಮಳೆಗಾಲದಲ್ಲಿ ನೀರನ್ನು ಸಂರಕ್ಷಿಸುವ ಕ್ರಮವನ್ನು ಕೈಗೊಳ್ಳಬೇಕಾಗಿರುವುದರಿಂದ ಕೊಳವೆ ಬಾವಿ ರಿಚಾರ್ಜ್ ಕೆಲಸವನು ್ನಅದಾನಿ ಸಂಸ್ಥೆಯು ಸಿಎಸ್ಆರ್ ಯೋಜನೆಯಡಿಯಲ್ಲಿ ಹಮ್ಮಿಕೊಳ್ಳುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ತಿಳಿಸಿದರು.
ಗ್ರಾ. ಪಂ. ಅಧ್ಯಕ್ಷ ಡೇವಿಡ್ ಡಿ’ಸೋಜ ಮಾತನಾಡಿ ಅದಾನಿ ಯುಪಿಸಿಎಲ್ ಸಂಸ್ಥೆಯು ಕಾಮಗಾರಿಯ ಕುರಿತ ತಮ್ಮ ಮನವಿ ಪರಿಗಣಿಸಿ ಪಂಚಾಯತ್ ವ್ಯಾಪ್ತಿಯ 10 ಬೋರ್ವೆಲ್ಗಳನ್ನು ಪುನಃಶ್ಚೇತನಗೊಳಿಸುತ್ತಿರುವುದಕ್ಕಾಗಿ ಅಭಿನಂದಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್, ಪಂಚಾಯತ್ಉಪಾಧ್ಯಕ್ಷೆ ಜಯಂತಿ ಪೂಜಾರ್ತಿ, ಪಂಚಾಯತ್ ಸದಸ್ಯರಾದ ಶೋಭಾ ಫೆರ್ನಾಂಡಿಸ್, ವಿನೋದಾ ಪೂಜಾರ್ತಿ, ಗ್ಯಾಬ್ರಿಯಲ್ ಮಥಾಯಿಸ್, ಗ್ರಾಮಸ್ಥರಾದ ಜಯಂತ್ ಪೂಜಾರಿ, ಯುಪಿಸಿಎಲ್ ಸಂಸ್ಥೆಯ ಎಜಿಎಂ ಗಿರೀಶ್ ನಾವಡ, ಹಿರಿಯ ವ್ಯವಸ್ಥಾಪಕ ರವಿ ಆರ್. ಜೇರೆ, ಅದಾನಿ ಫೌಂಡೇಶನ್ನ ಸಿಬಂದಿ ವರ್ಗದವರಾದ ವಿನೀತ್ ಅಂಚನ್, ಸುಕೇಶ್ ಸುವರ್ಣ, ಧೀರಜ್ ದೇವಾಡಿಗ, ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ