ಸರಕಾರದ ಸುಪರ್ದಿಗೆ ಸೇರಲು ‘ನೇಮಕಾತಿ’ ಅಡಚಣೆ

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ

Team Udayavani, May 24, 2022, 11:53 AM IST

doctor

ಉಡುಪಿ: ವೇತನ ಸಮಸ್ಯೆ ಸಹಿತ ಹಲವಾರು ಕಾರಣಗಳಿಂದ ಟೀಕೆ-ಟಿಪ್ಪಣಿಗಳಿಗೆ ಗುರಿಯಾಗಿದ್ದ ಬಿಆರ್‌ಎಸ್‌ ಆಸ್ಪತ್ರೆಯನ್ನು ಸರಕಾರ ತನ್ನ ಸುರ್ಪದಿಗೆ ಪಡೆದರೂ, ಆಡಳಿತಾತ್ಮಕವಾದ ಸರಕಾರದ ಹಿಡಿತಕ್ಕೆ ಇನ್ನೂ ಬಂದಿಲ್ಲ.

ಈ ಹಿಂದಿನ ಯೋಜನೆಯಂತೆ ಮೇ 16ರಿಂದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಮೂಲಕ ನಡೆಯಲಿದೆ ಎಂದು ತಿಳಿಸಲಾಗಿತ್ತು. ಆದರೆ ಸಿಬಂದಿ ನೇಮಕಾತಿ ಸಮಸ್ಯೆಯಿಂದಾಗಿ ಮತ್ತೆ ಮುಳುವಾಗಿದೆ.

ಸಿಬಂದಿ ವರ್ಗಾವಣೆ

2018ರಲ್ಲಿ ಉದ್ಯಮಿ ಬಿ.ಆರ್. ಶೆಟ್ಟಿ ಅವರು ಈ ಆಸ್ಪತ್ರೆ ತೆಗೆದುಕೊಂಡ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿದ್ದ ಸರಕಾರದ ರೆಗ್ಯೂಲರ್‌ ಹಾಗೂ ಎನ್‌ಎಚ್‌ಎಂ (ರಾಷ್ಟ್ರೀಯ ಆರೋಗ್ಯ ಅಭಿಯಾನ) ಸಿಬಂದಿಯನ್ನು ಕೌನ್ಸೆಲಿಂಗ್‌ ಮಾಡಿ ಬೇರೆ ಬೇರೆ ಕಡೆಗಳಿಗೆ ವರ್ಗಾಯಿಸಲಾಗಿತ್ತು. ಆ ಹುದ್ದೆಗಳೆಲ್ಲ ಈಗ ಖಾಲಿ ಬಿದ್ದಿವೆ. ಎನ್‌ಎಂಎಂ ಸಿಬಂದಿಯನ್ನು ರಿವೀಲ್‌ ಮಾಡದೆ ಜಿಲ್ಲೆಯ ಬೇರೆ ಬೇರೆ ಆಸ್ಪತ್ರೆಗಳಿಗೆ ನೇಮಕ ಮಾಡಲಾಗಿತ್ತು.

ಎನ್‌ಎಚ್‌ಎಂ ಹುದ್ದೆ ಜಿಲ್ಲಾಸ್ಪತ್ರೆಗಷ್ಟೇ ಮೀಸಲು

ಸರಕಾರದ ನಿಯಮಾವಳಿಯಂತೆ ಎನ್‌ಎಚ್‌ಎಂ ಹುದ್ದೆಗಳು ಕೇವಲ ಜಿಲ್ಲಾಸ್ಪತ್ರೆಗಷ್ಟೇ ಮೀಸಲಿಡಬೇಕು. ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಅವರನ್ನು ನೇಮಕ ಮಾಡುವಂತಿಲ್ಲ. ಆದರೆ ಬಿಆರ್‌ ಎಸ್‌ ಆಸ್ಪತ್ರೆ ನಿರ್ಮಾಣ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದಾಗಿ ಬೇರೆಡೆ ನಿಯೋಜನೆ ಮಾಡ ಲಾಗಿತ್ತು. ಪ್ರಸ್ತುತ ಸರಕಾರದ ಸುರ್ಪದಿಗೆ ನೀಡಬೇಕೆಂಬ ಸೂಚನೆಯಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಹಿಂದೆ ಬೇರೆಡೆ ನಿಯೋಜನೆಗೊಂಡ ಸಿಬಂದಿ ಮತ್ತೆ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ನಿಯೋಜನೆಗೊಳ್ಳಬೇಕೆಂದು ಆದೇಶ ಹೊರಡಿಸಿದ್ದರು. ಅದರಂತೆ ಸಿಬಂದಿ ಇಲ್ಲಿಗೆ ಆಗಮಿಸಿದರೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ ಸಿಬಂದಿ ಸಮಸ್ಯೆ ಎದುರಾಯಿತು. ಸ್ಥಳೀಯರು ಪ್ರತಿಭಟನೆಯನ್ನೂ ನಡೆಸಿದರು. ಈ ಕಾರಣಕ್ಕಾಗಿ ಆ ಆದೇಶವನ್ನು ಮತ್ತೆ ಹಿಂಪಡೆದು ಈಗಿರುವಂತೆ ಮುಂದುವರಿಸಲು ಸೂಚಿಸಲಾಗಿದೆ.

ಮೊದಲು 70 ಬೆಡ್‌ಗಳ ಆಸ್ಪತ್ರೆ

ಈ ಹಿಂದಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 70 ಬೆಡ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 58 ಮಂದಿ ರೆಗ್ಯೂಲರ್‌ ಹಾಗೂ 56 ಮಂದಿ ಎನ್‌ಎಚ್‌ಎಂ ಸಿಬಂದಿಗಳಿದ್ದರು. ಬಿಆರ್‌ಎಸ್‌ ಆಸ್ಪತ್ರೆ ಸ್ಥಾಪನೆಯಾದ ಬಳಿಕ 200 ಬೆಡ್‌ಗಳ ಆಸ್ಪತ್ರೆ ಮಾಡಲಾಗಿತ್ತು. ಇದಕ್ಕೆ ಸರಕಾರದಿಂದ ಹೆಚ್ಚುವರಿಯಾಗಿ 42 ಹುದ್ದೆಗಳನ್ನು ಮಂಜೂರು ಮಾಡಲಾಗಿತ್ತು. ಪ್ರಸ್ತುತ ಆಸ್ಪತ್ರೆಗೆ ರೆಗ್ಯುಲರ್‌ ಹಾಗೂ ಹೊಸ ಹುದ್ದೆಗಳಿಗೆ ನೇಮಕವಾದರಷ್ಟೇ ಈ ಎಲ್ಲ ಸಮಸ್ಯೆಗಳು ನಿವಾರಣೆಯಾಗಲು ಸಾಧ್ಯವಿದೆ.

 ಸದ್ಯಕ್ಕೆ ಬಿಆರ್‌ಎಸ್‌ ನಿಂದಲೇ ನಿರ್ವಹಣೆ

ಸರಕಾರದ ಸಿಬಂದಿ ಸಮಸ್ಯೆಯಿಂದಾಗಿ ಮೇ 31ರ ವರೆಗೆ ಬಿಆರ್‌ಎಸ್‌ ಸಂಸ್ಥೆಯವರೇ ನಿರ್ವಹಣೆ ನೋಡಿ ಕೊಳ್ಳಲಿದ್ದಾರೆ. ಸಂಸ್ಥೆಯ 70ರಿಂದ 80ರಷ್ಟು ಮಂದಿ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ತಿಂಗಳು 100ರಷ್ಟು ಗರ್ಭಿಣಿಯರಿಗೆ ಹೆರಿಗೆ ಮಾಡಿಸಲಾಗಿದ್ದು, ಈ ತಿಂಗಳು ಕೂಡ ಹಲವರು ಇಲ್ಲಿನ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.

 ಔಷಧ ಖರೀದಿಗೆ ಶೀಘ್ರ ಟೆಂಡರ್‌

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಎಲ್ಲ ಸೇವೆಗಳೂ ಉಚಿತವಾಗಿ ಸಿಗಬೇಕು. ಆದರೆ ಉಡುಪಿಯಲ್ಲಿ ಮಾತ್ರ ಔಷಧಗಳನ್ನು ಹೊರಗಿನ ಮೆಡಿಕಲ್‌ನಿಂದ ಖರೀದಿಸಿ ತರಬೇಕಾಗಿದೆ. ಈಗಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಬೇಕಿರುವ ಔಷಧಗಳಿಲ್ಲ. ಸರಕಾರದ ಸುಪರ್ದಿಗೆ ಬಂದ ಅನಂತರ ಔಷಧವನ್ನೂ ಉಚಿತವಾಗಿ ನೀಡಬೇಕಾಗಿರುವುದರಿಂದ ಇದಕ್ಕೆ ಟೆಂಡರ್‌ ಕೂಡ ಶೀಘ್ರದಲ್ಲಿ ಮಾಡಬೇಕಾಗುತ್ತದೆ ಎನ್ನುತ್ತಾರೆ ವೈದ್ಯಾಧಿಕಾರಿಗಳು.

ಸರಕಾರಕ್ಕೆ ಪ್ರಸ್ತಾಪನೆ

ರೆಗ್ಯುಲರ್‌ ಹಾಗೂ ಹೊಸ ಹುದ್ದೆಗಳಿಗೆ ಗುತ್ತಿಗೆ, ಹೊರಗುತ್ತಿಗೆ ಮೂಲಕ ಸಿಬಂದಿಯನ್ನು ನೇಮಕ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಈ ಎಲ್ಲ ಪ್ರಕ್ರಿಯೆಗಳನ್ನು ಮೇ ತಿಂಗಳ ಅಂತ್ಯದೊಳಗೆ ಮುಗಿಸುವ ಉದ್ದೇಶ ಹೊಂದಲಾಗಿದೆ. -ಡಾ| ಮಧುಸೂದನ್‌ ನಾಯಕ್‌, ಜಿಲ್ಲಾ ಸರ್ಜನ್‌

ಪುನೀತ್‌ ಸಾಲ್ಯಾನ್

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.