ಕರಾವಳಿಗೆ ಕುಚ್ಚಿಗೆ ಅಕ್ಕಿ: ಪಡಿತರದಲ್ಲಿ ವಿತರಿಸಲು ಸರಕಾರದ ಕ್ರಮ; ಸಚಿವ ಕೋಟ
Team Udayavani, Jul 15, 2022, 8:30 AM IST
ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರಿಗೆ ಪಡಿತರ ವ್ಯವಸ್ಥೆಯಲ್ಲಿ ಕುಚ್ಚಿಗೆ ಅಕ್ಕಿ ವಿತರಿಸಲು ರಾಜ್ಯ ಸರಕಾರ ಮುಂದಾಗಿದೆ.
ಈ ಜಿಲ್ಲೆಗಳ ಜನರಿಗೆ ಕುಚ್ಚಿಗೆ ಅಕ್ಕಿ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು, ರಾಜ್ಯ ಸರಕಾರ ಆ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ವಿಧಾನಸೌಧದಲ್ಲಿ ಗುರುವಾರ ಈ ಕುರಿತು ಸಭೆ ನಡೆಸಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ರಾಜ್ಯದ ನಿಯೋಗ ಈಗಾಗಲೇ ಕೇರಳಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ಇದಕ್ಕಾಗಿ ಕರಾವಳಿ ಜಿಲ್ಲೆಗಳಿಗೆ ಪ್ರತೀ ತಿಂಗಳು 1 ಲಕ್ಷ ಕ್ವಿಂಟಾಲ್ ಅಕ್ಕಿ ಅಗತ್ಯವಿದ್ದು, ವರ್ಷಕ್ಕೆ 12 ಲಕ್ಷ ಕ್ವಿಂಟಾಲ್ ಆಗುತ್ತದೆ. ವರ್ಷಕ್ಕೆ ಸುಮಾರು 18 ಲಕ್ಷ ಕ್ವಿಂಟಾಲ್ ಭತ್ತದ ಅಗತ್ಯ ಬೀಳುತ್ತದೆ ಎಂದು ತಿಳಿಸಿದರು.
ಜಯ, ಜ್ಯೋತಿ, ಎಂಎಫ್ 4ರಂತಹ ಭತ್ತದ ತಳಿಗಳಿಂದ ಮಾತ್ರ ಕುಚ್ಚಿಗೆ ಅಕ್ಕಿ ಮಾಡಲು ಸಾಧ್ಯವಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನುಳಿದದ್ದನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಸಲು ಕ್ರಮ ಕೈಗೊಳ್ಳಲಾಗು ವುದು. ಆದರೂ ಇದು ಸಾಲದು ಎಂದರು.
ಹೆಚ್ಚುವರಿ ಅಗತ್ಯವಿರುವ ಭತ್ತವನ್ನು ಕೇರಳ ಮತ್ತು ತೆಲಂಗಾಣ ರಾಜ್ಯಗಳಿಂದ ಪಡೆಯಲು ಯೋಜಿಸ ಲಾಗಿದೆ. ಈ ಸಂಬಂಧ ಈ ವಾರಾಂತ್ಯದಲ್ಲಿ ಮತ್ತೂಂದು ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡಲಿದೆ.
ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಮತ್ತು ಸಂಸದರ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿಯಾಗಿ ಬರುವ ವರ್ಷದಿಂದಲೇ ಕುಚ್ಚಿಗೆ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ