ಸರಕಾರಕ್ಕೆ ಪತ್ರ ಬರೆದ ಸಚಿವ ಕೋಟ

ಕುಂದಾಪುರದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ಬೇಡಿಕೆ

Team Udayavani, Jan 31, 2020, 2:21 AM IST

youth-48

ಕುಂದಾಪುರ: ಇಲ್ಲಿನ ಜನರ ಬಹು ವರ್ಷಗಳ ಬೇಡಿಕೆಯಾಗಿದ್ದ ಪ್ರಾದೇಶಿಕ ಸಾರಿಗೆ ಕಚೇರಿ ರಚನೆ ಪ್ರಸ್ತಾವ ಮತ್ತೂಮ್ಮೆ ಮುನ್ನೆಲೆಗೆ ಬಂದಿದೆ. ಮಣಿಪಾಲದ ಬಳಿಕ ಕುಂದಾಪುರದಲ್ಲಿಯೂ ಹೊಸದಾಗಿ ಪ್ರಾದೇಶಿಕ ಸಾರಿಗೆ ಕಚೇರಿಯನ್ನು ಪ್ರಸಕ್ತ ಸಾಲಿನಲ್ಲಿಯೇ ಆರಂಭಿಸಬೇಕು ಎಂದು ಒತ್ತಾಯಿಸಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರೇ ಸ್ವತಃ ಸರಕಾರಕ್ಕೆ ಪತ್ರ ಬರೆದಿದ್ದಾರೆ.

ಕುಂದಾಪುರ, ಬೈಂದೂರು, ಶಿರೂರು, ಕೊಲ್ಲೂರು, ಹೊಸಂಗಡಿ, ಸಿದ್ದಾಪುರ, ಶಂಕರನಾರಾಯಣ, ಹಾಲಾಡಿಯಂತಹ ಗ್ರಾಮಾಂತರ ಭಾಗದ ಜನರು ಚಾಲನ ಪರವಾನಿಗೆ, ವಾಹನ ನೋಂದಣಿ, ನವೀಕರಣ ಮತ್ತಿತರ ಕೆಲಸಕ್ಕಾಗಿ 60-70 ಕಿ.ಮೀ. ದೂರದ ಮಣಿಪಾಲಕ್ಕೆ ತೆರಳಬೇಕಾದ ಅನಿವಾರ್ಯತೆಯಿದೆ. ಈ ಕಾರಣಕ್ಕೆ ಕುಂದಾಪುರದಲ್ಲಿ ಪ್ರಾದೇಶಿಕ ಸಾರಿಗೆ ಆರಂಭಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಕೇಳಿ ಬರುತ್ತಿದೆ.

ಕುಂದಾಪುರದಲ್ಲಿ ಎಲ್ಲ ಅರ್ಹತೆಗಳಿದ್ದರೂ ಹಲವು ವರ್ಷಗಳಿಂದ ಈ ಬಗ್ಗೆ ಬೇಡಿಕೆ ಸಲ್ಲಿಸಿದ್ದರೂ ಸಾರಿಗೆ ಕಚೇರಿ ಆರಂಭಿಸುವ ಕುರಿತಂತೆ ಈವರೆಗೆ ಯಾವುದೇ ಬೆಳವಣಿಗೆಗಳು ಕಂಡುಬಂದಿಲ್ಲ. ಈ ಬಗ್ಗೆ ಇಲ್ಲಿಗೆ ಭೇಟಿ ನೀಡಿದ ಎಲ್ಲ ಸಾರಿಗೆ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೆಲ್ಲರಿಗೂ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ.

ವಿ.ಎಸ್‌. ಆಚಾರ್ಯರಿಂದಲೂ ಪ್ರಸ್ತಾವ
ಕುಂದಾಪುರದಲ್ಲಿ ಸಾರಿಗೆ ಕಚೇರಿ ಆರಂಭಿಸಬೇಕು ಎನ್ನುವುದಾಗಿ ಒತ್ತಾಯಿಸಿ ದಿ| ವಿ.ಎಸ್‌. ಆಚಾರ್ಯ ಕೂಡ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಪತ್ರದಲ್ಲೇನಿದೆ?
ಸಚಿವ ಕೋಟ ಅವರು ಕುಂದಾಪುರದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ಆರಂಭ ಕುರಿತಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪತ್ರ ಬರೆದಿದ್ದಾರೆ. ಕುಂದಾಪುರದಲ್ಲಿ 72 ಸಾವಿರಕ್ಕೂ ಅಧಿಕ ವಾಹನಗಳಿದ್ದು, ವಾರದಲ್ಲಿ ಒಂದು ದಿನದ ಕ್ಯಾಂಪ್‌ ನಡೆಸುವುದರಿಂದ ಸರಾಸರಿ 600ಕ್ಕೂ ಅಧಿಕ ಮಂದಿ ಪ್ರಯೋಜನ ಪಡೆಯುತ್ತಿದ್ದಾರೆ. ತಪ್ಪಿದಲ್ಲಿ ಅವರೆಲ್ಲ 60-70 ಕಿ.ಮೀ. ದೂರದ ಮಣಿಪಾಲಕ್ಕೆ ಹೋಗಬೇಕು. ಆದ್ದರಿಂದ ಹೊಸದಾಗಿ ಪ್ರತ್ಯೇಕ ಪ್ರಾದೇಶಿಕ ಸಾರಿಗೆ ಕಚೇರಿ ಪ್ರಾರಂಭಿಸಬೇಕು ಎನ್ನುವುದು ಕುಂದಾಪುರದ ಜನತೆಯ ಬೇಡಿಕೆಯಾಗಿದ್ದು, ಕುಂದಾಪುರಕ್ಕೆ ಕಚೇರಿ ಮಂಜೂರು ಮಾಡಿ, ಈ ಸಾಲಿನಲ್ಲಿಯೇ ಪ್ರಾರಂಭಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಾನದಂಡಗಳೇನು?
ಸಾರಿಗೆ ಕಚೇರಿ ಆರಂಭಿಸಬೇಕಾದರೆ ಪ್ರಸ್ತಾವಿತ ಜಾಗದಲ್ಲಿ ಈಗಾಗಲೇ ನೋಂದಣಿಯಾದ ಎಲ್ಲ ವಾಹನಗಳಿಂದ ವಾರ್ಷಿಕ ಕನಿಷ್ಠ 20 ಕೋ.ರೂ. ತೆರಿಗೆ (ರಾಜಸ್ವ) ಮೂಲಕ ಆದಾಯ ಬರಬೇಕು.

 ಪ್ರಸ್ತಾವಿತ ಕಚೇರಿ ಜಾಗದಲ್ಲಿ ಕನಿಷ್ಠ 30 ಸಾವಿರ ವಾಹನಗಳ ನೋಂದಣಿಯಾಗಿರಬೇಕು.

ಆ ಭಾಗದಲ್ಲಿ ಕನಿಷ್ಠ 10,000 ಚಾಲನಾ ಪರವಾನಿಗೆ ನೀಡಿರಬೇಕು.

ವಾರ್ಷಿಕ 10,000 ಚಾಲನಾ ಪರವಾನಿಗೆ ನೋಂದಣಿಯಾಗಿರಬೇಕು.

ಪ್ರಸ್ತಾವಿತ ಕಚೇರಿಯು ಮೂಲ ಕಚೇರಿಯಿಂದ ಗ್ರಾಮೀಣ ಭಾಗಗಳಿಂದ 50 ಕಿ.ಮೀ. ಅಂತರವಿರಬೇಕು.

ಅರ್ಹತೆಗಳೇನು?
ಕುಂದಾಪುರ ಭಾಗಗಳಿಂದ ನೋಂದಣಿಯಾದ ವಾಹನಗಳಿಂದ ಪ್ರತಿ ವರ್ಷ 20 ಕೋ.ರೂ.ಗಿಂತ ಅಧಿಕ ತೆರಿಗೆ (ರಾಜಸ್ವ) ಸಂಗ್ರಹವಾಗುತ್ತದೆ.

ಇಲ್ಲಿ ಈವರೆಗೆ 60,710 ವಾಹನ ನೋಂದಣಿಯಾಗಿ ಉಪಯೋಗದಲ್ಲಿದೆ.

ಕುಂದಾಪುರ ಭಾಗದ 27,529 ಮಂದಿಗೆ ಚಾಲನಾ ಪರವಾನಿಗೆ ನೀಡಲಾಗಿದೆ.

ವಾರ್ಷಿಕ 58,382 ವಾರ್ಷಿಕ ನೋಂದಣಿ ನೀಡಲಾಗುತ್ತದೆ.

50 ಕಿ.ಮೀ. ಅಂತರದಲ್ಲಿದೆ.

ಕುಂದಾಪುರದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ಆರಂಭಿಸಬೇಕು ಎನ್ನುವ ಬೇಡಿಕೆ ಬಹು ವರ್ಷಗಳಿಂದ ಇದೆ. ಈ ಬಗ್ಗೆ ಅರ್ಹತೆಗಳೇನು, ಎಷ್ಟೆಲ್ಲ ವಾಹನ ನೋಂದಣಿಯಾಗುತ್ತವೆ, ಆದಾಯ ಎಷ್ಟು ಬರುತ್ತದೆ ಎನ್ನುವ ಕುರಿತಂತೆ 2018ರಲ್ಲಿಯೇ ಬೆಂಗಳೂರಿನ ಪ್ರಧಾನ ಕಚೇರಿಗೆ ವಿವರ ನೀಡಿ, ಪ್ರಸ್ತಾವನೆ ಸಲ್ಲಿಸಲಾಗಿದೆ.
– ರಾಮಕೃಷ್ಣ ರೈ, ಪ್ರಾದೇಶಿಕ ಸಾರಿಗೆ ಆಯುಕ್ತರು, ಉಡುಪಿ

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.