ಉಡುಪಿ ಜಿಲ್ಲೆಯಲ್ಲಿ ತಂಗುವ ವಿದೇಶಿಗರ ನೋಂದಣಿ ಕಡ್ಡಾಯ
Team Udayavani, Dec 1, 2022, 7:15 AM IST
ಉಡುಪಿ: ಜಿಲ್ಲೆಯಲ್ಲಿ ವಿದೇಶಿಯರು ತಂಗಿರುವ ಬಗೆಗಿನ ಮಾಹಿತಿಯನ್ನು ಸಂಬಂಧಪಟ್ಟ ಮಾಲಕರು 24 ಗಂಟೆಯೊಳಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಡ್ಡಾಯವಾಗಿ ನೀಡುವಂತೆ ಆದೇಶಿಸಲಾಗಿದೆ.
ವಿದೇಶೀಯರ ಕಾಯ್ದೆ 1946ರ ಕಲಂ 7ರಂತೆ ಯಾವುದೇ ವಿದೇಶಿಯರು ತಂಗುವ ಸ್ಥಳಗಳಾದ ಹೊಟೇಲ್, ಗೆಸ್ಟ್ಹೌಸ್, ಧರ್ಮ ಶಾಲಾ, ಪ್ರತ್ಯೇಕ ಮನೆ, ಯುನಿವರ್ಸಿಟಿ, ವಿದ್ಯಾ ಸಂಸ್ಥೆ ಸಹಿತ ಇತರೆ ಸ್ಥಳಗಳಲ್ಲಿ ವಿದೇಶಿಯರು ತಂಗಿದ ಬಗ್ಗೆ ಮಾಹಿತಿ ಫಾರ್ಮ್ ಸಿಯನ್ನು ಸಂಬಂಧಪಟ್ಟ ಮಾಲಕರು ನೋಂದಣಿ ಅಧಿಕಾರಿಗಳಿಗೆ (ಸಂಬಂಧಪಟ್ಟ ಜಿಲ್ಲೆಯ ಪೊಲೀಸ್ ಅಧೀಕ್ಷಕರು) 24 ಗಂಟೆಯೊಳಗೆ ನೀಡಬೇಕು.
ಈ ನಿಯಮಾವಳಿಯನ್ನು ಉಲ್ಲಂ ಸಿದರೆ ಸಂಬಂಧಪಟ್ಟವರ ವಿರುದ್ದ ಕಲಂ 14 ವಿದೇಶಿಯರ ಕಾಯ್ದೆ 1946 ರಂತೆ ಕ್ರಮ ಜರಗಿಸಬಹುದು. ಈ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆ ಮತ್ತು ದಂಡಕ್ಕೆ ಅರ್ಹರಾಗಿರುತ್ತಾರೆ.
https://indianfrro.gov.in/frro/FormC ಮೂಲಕ ನೋಂದಣಿ ಮಾಡಬಹುದಾಗಿದೆ. ವಿದೇಶಿಯರಿಗೆ ಫಾರ್ಮ್ ಸಿ ಭರ್ತಿ ಗೊಳಿಸುವ ಅವಕಾಶವಿರುವುದಿಲ್ಲ. ಪ್ರತ್ಯೇಕ ಮನೆಯ ಮಾಲಕರಿಗೆ ಒಟಿಪಿ ಮೂಲಕ ಸ್ವಯಂ ನೋಂದ ಣಿಗೆ ಅವಕಾಶವಿದೆ. ಫಾರ್ಮ್ ಸಿ ಆನ್ಲೈನ್ನಲ್ಲಿ ಭರ್ತಿಗೊಳಿಸುವ ಸಂಬಂಧ ತಾಂತ್ರಿಕ ಕಾರಣಗಳಿಗೆ ಮೋಜಿಲ್ಲಾ ಪೈರ್ಫಾಕ್ಸ್ ಉಪ ಯೋಗಿಸಬೇಕು.
ಅನಧಿಕೃತ ಏಜೆಂಟರನ್ನು ಸಂಪರ್ಕಿಸದಿರಿ
ಇತ್ತೀಚಿನ ದಿನಗಳಲ್ಲಿ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಮುಂಗಡವಾಗಿ ಹಣ ಪಡೆದು ವಿದೇಶಕ್ಕೆ ತೆರಳಿದ ಅನಂತರ ಸರಿಯಾದ ಕೆಲಸವಿಲ್ಲದೆ ಹಣ ಹಾಗೂ ಕೆಲಸವನ್ನು ಕಳೆದುಕೊಂಡು ವಂಚನೆಗೊಳಗಾದ ಉದಾಹರಣೆಗಳು ಕಂಡುಬಂದಿರುತ್ತದೆ. ಆದುದರಿಂದ ನಾಗರಿಕರು ಜಾಗರೂಕತೆಯಿಂದ ಅನಧಿಕೃತ ಏಜೆಂಟರನ್ನು ಸಂಪರ್ಕಿಸದೆ ಮಿನಿಸ್ಟ್ರೀ ಆಫ್ ಎಕ್ಸ$rರ್ನಲ್ ಎಫೇರ್ಸ್ ನೊಂದಿಗೆ ನೋಂದಾಯಿತ ಏಜೆಂಟರುಗಳನ್ನು ಸಂಪರ್ಕಿಸಿ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಬಹುದಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಧಿಕೃತವಾಗಿ ನೊಂದಾಯಿತರ ಮಾಹಿತಿಯನ್ನು https://www.emigrants.gov.in ನಿಂದ ಪಡೆದು ಕೊಳ್ಳಬಹುದು.
ಹೊಸ ಅಥವಾ ನವೀಕೃತ ಪಾಸ್ಪೋರ್ಟ್ ಅರ್ಜಿ ಸಲ್ಲಿಸುವ ಬಗ್ಗೆ ಸ್ಥಳೀಯ ಅಧಿಕೃತ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು(ಬ್ರಹ್ಮಾವರ/ಮಂಗಳೂರು) ಸಂಪರ್ಕಿಸಿ ಸರಿಯಾದ ಮಾಹಿತಿಯನ್ನು ಪಡೆಯ ಬಹುದಾಗಿದೆ. ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿಯ ಪ್ರಕಟನೆ ಯಂತೆ ಯಾವುದೇ ಅಧಿಕೃತ ನೋಂದಾಯಿತ ಏಜೆಂಟ್ಗಳು ಇರುವುದಿಲ್ಲ.
ಹೆಚ್ಚಿನ ಮಾಹಿತಿಯನ್ನು https://www.passportindia.gov.in ನಲ್ಲಿ ಪಡೆದು ಕೊಳ್ಳುಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ನಕಲಿ ಪಾಸ್ಪೋರ್ಟ್ ಪಡೆದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇನ್ನು ಮುಂದೆ ನಕಲಿ ಪಾಸ್ಪೋರ್ಟ್ ಪಡೆಯಲು ಸಹಕರಿಸುವ ಏಜೆಂಟ್ ಹಾಗೂ ಅರ್ಜಿದಾರರು ಪತ್ತೆಯಾದಲ್ಲಿ ಅವರ ವಿರುದ್ದ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ