ಬಾಕಿ ಇಟ್ಟ ಡೀಸೆಲ್ ಸಬ್ಸಿಡಿ ಬಿಡುಗಡೆಗೊಳಿಸಿ
Team Udayavani, Feb 10, 2017, 3:45 AM IST
ಉಡುಪಿ: ರಾಜ್ಯ ಸರಕಾರ ಕಳೆದ ಸಾಲಿನ ಬಜೆಟ್ನಲ್ಲಿ 105 ಕೋಟಿ ರೂ. ಡೀಸೆಲ್ ಮೇಲೆ ಸಬ್ಸಿಡಿ ಮೀಸಲಿಟ್ಟಿದ್ದರೂ ಕೂಡ ಕಳೆದ 4 ತಿಂಗಳಿಂದ ಮೀನುಗಾರರಿಗೆ ಯಾವುದೇ ಡೀಸೆಲ್ ಸಬ್ಸಿಡಿ ಬಿಡುಗಡೆಯಾಗಿಲ್ಲ.. ಈಗಾಗಲೇ ಬಾಕಿ ಇಟ್ಟಿರುವ ಸಬ್ಸಿಡಿ ಹಣವನ್ನು ತತ್ಕ್ಷಣ ಬಿಡುಗಡೆ ಮಾಡಬೇಕೆಂದು ಉಡುಪಿ ಮತ್ತು ದ.ಕ. ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಠ ಆಗ್ರಹಿಸಿದೆ.
ಕರಾವಳಿ ಭಾಗದಲ್ಲಿ ಸುಮಾರು 5,000 ಯಾಂತ್ರೀಕೃತ ಬೋಟುಗಳು, ಸುಮಾರು 3 ಲಕ್ಷಕ್ಕೂ ಅಧಿಕ ಜನರು ಮೀನುಗಾರಿಕೆಯನ್ನು ಮೂಲ ಉದ್ಯಮವನ್ನಾಗಿಸಿಕೊಂಡಿದ್ದಾರೆ. ಈ ಭಾಗದ ಮೀನುಗಾರರ ಕುಟುಂಬಕ್ಕೆ ಸೇರಿದವರೇ ಸಚಿವರಾಗಿದ್ದರೂ ಕೂಡ ಮೀನುಗಾರರು ಎದುರಿಸುತ್ತಿರುವ ಯಾವುದೇ ಸಮಸ್ಯೆಗೆ ಸ್ಪಂದನೆ ನೀಡದಿರುವುದು ತೀರಾ ಖಂಡನೀಯ.
ಪ್ರಸ್ತುತ ಪರಿಸ್ಥಿತಿಯಲ್ಲಿ ಮೀನುಗಾರಿಕೆ ಸಂಪೂರ್ಣ ಕುಂಠಿತಗೊಂಡಿದ್ದು ಈಗಾಗಲೇ ಹಲವಾರು ಸಮಸ್ಯೆಗಳನ್ನು ಮೀನುಗಾರರು ಎದುರಿಸುತ್ತಿದ್ದಾರೆ. ಮಹಿಳಾ ಮೀನುಗಾರರಿಗೆ ಶೇ. 2ರ ಬಡ್ಡಿ ದರದಲ್ಲಿ ನೀಡಲಾಗಿದ್ದ ಸಾಲದ ವ್ಯತ್ಯಾಸದ ಬಡ್ಡಿ ಮೊತ್ತವನ್ನು ಕೂಡಲೇ ಪಾವತಿಸುವಂತೆ ಒತ್ತಾಯಿಸಿದೆ.
ಬೀಗ ಜಡಿದು ಪ್ರತಿಭಟನೆ
ಮುಂದಿನ 15 ದಿನಗಳಲ್ಲಿ ತಮ್ಮ ಬೇಡಿಕೆ ಈಡೇರದಿದ್ದಲ್ಲಿ ಮೀನುಗಾರಿಕಾ ಕಚೇರಿಗೆ ಬೀಗ ಜಡಿದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಪ್ರಮುಖರಾದ ಸದಾನಂದ ಬಳ್ಕೂರು, ಶೋಭೇಂದ್ರ ಸಸಿಹಿತ್ಲು, ರಾಘವೇಂದ್ರ ಕಾಂಚನ್, ಶಶಿಕಾಂತ್ ಪಡುಬಿದ್ರಿ, ವಿಜಯ ಕುಂದರ್, ವಿಜಯ ಕರ್ಕೇರ, ಸುರೇಂದ್ರ ಖಾರ್ವಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್