ಕಳೆದ ಐದು ವರ್ಷಗಳ ಸಮಸ್ಯೆಗೆ ಮುಕ್ತಿ

 ಮೂಡಬೆಟ್ಟು: ಪ್ರಾ. ಆ. ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಣಿ ನೇಮಕ

Team Udayavani, Apr 5, 2019, 6:30 AM IST

samasyege-mukti

ಕಟಪಾಡಿ: ಆರು ಹಾಸಿಗೆ ಸವಲತ್ತು ಹೊಂದಿರುವ ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಣಿಯಾಗಿ ಡಾ|
ಶೈನಿ ಅವರನ್ನು ಖಾಯಂ ಆಗಿ ನೇಮಕಾತಿಗೊಳಿಸುವ ಮೂಲಕ ಕಳೆದ ಸುಮಾರು 5 ವರ್ಷಗಳಿಗಿಂತಲೂ ಇದ್ದ ಸಮಸ್ಯೆ ನಿವಾರಣೆಯಾದಂತಾಗಿದೆ.

ಸಾರ್ವಜನಿಕರಿಗೆ ಸಮಸ್ಯೆ
ಕಟಪಾಡಿ, ಕೋಟೆ, ಉದ್ಯಾವರ, ಕುರ್ಕಾಲು ಗ್ರಾ.ಪಂ. ವ್ಯಾಪ್ತಿಯಲ್ಲಿರುವ
ಮೂಡಬೆಟ್ಟು, ಕೋಟೆ, ಮಟ್ಟು, ಏಣಗುಡ್ಡೆ, ಬೊಳೆj, ಗುಡ್ಡೆಅಂಗಡಿ, ಪಿತ್ರೋಡಿ, ಕುರ್ಕಾಲು ಸಹಿತ ಒಟ್ಟು 8 ಆರೋಗ್ಯ ಉಪಕೇಂದ್ರ ಒಳಗೊಂಡಿ ರುವ ಈ ಪ್ರಾ. ಆರೋಗ್ಯ ಕೇಂದ್ರದಲ್ಲಿ ಇದ್ದ ಖಾಯಂ ವೈದ್ಯಾಧಿಕಾರಿ ಡೆಪ್ಯುಟೇಷನ್‌ ಮೂಲಕ ಖಾಲಿ ಉಳಿದಿದ್ದ ಅನಂತರದಲ್ಲಿ ಕಳೆದ ಸುಮಾರು
5 ವರ್ಷಗಳಿಂದಲೂ ಪ್ರಭಾರ ವೈದ್ಯಾಧಿಕಾರಿಗಳು ಕರ್ತವ್ಯ ನಿಭಾಯಿಸುತ್ತಿದ್ದರು. ಸಕಾಲದಲ್ಲಿ ವೈದ್ಯಾಧಿಕಾರಿ ಇಲ್ಲಿ ಲಭ್ಯವಾಗದೆ ರೋಗಿಗಳು, ಸರಕಾರಿ ಯೋಜನೆ ಪಡೆಯಲು ಸಾರ್ವ ಜನಿಕರಿಗೆ ಸಮಸ್ಯೆ ತಲೆದೋರಿತ್ತು. ಇದೀಗ ಒಟ್ಟು 36,160 ಜನಸಂಖ್ಯೆ ಹೊಂದಿರುವ ಈ ಆರೋಗ್ಯ ಕೇಂದ್ರಕ್ಕೆ ಪರಿಣಿತ ವೈದ್ಯಾಧಿಕಾರಿಣಿಯೋರ್ವರ ಖಾಯಂ ನೇಮಕಾತಿ ಇವೆಲ್ಲಕ್ಕೂ ಮುಕ್ತಿ ನೀಡಿದೆ.

ಮುನ್ನೆಚ್ಚರಿಕೆ – ಜನಜಾಗೃತಿ
ಇವರು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸುವ ಮೂಲಕ ತನ್ನ ವ್ಯಾಪ್ತಿಯಲ್ಲಿ ಆರೋಗ್ಯ ವಾಗಿರಿಸಲು ಪ್ರಯತ್ನಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಮಳೆಗಾಲಕ್ಕೂ ಮುನ್ನವೇ ಸೂಕ್ತ ಕ್ರಮ
ಕಳೆದ ಬಾರಿ ಉದ್ಯಾವರದ ಪಿತ್ರೋಡಿ ಭಾಗದಲ್ಲಿ ಕಂಡುಬಂದ‌ ಮೆಲಿಯೋಯಿಡೊಸಿಸ್‌, ಕಟಪಾಡಿ ಭಾಗದಲ್ಲಿ ಕಂಡು ಬಂದ ಶಂಕಿತ ಡೆಂಗ್ಯೂ ಜ್ವರ ಮತ್ತೆ ಪುನರಾವರ್ತನೆಯಾಗದಂತೆ ಮಳೆಗಾಲಕ್ಕೂ ಮುನ್ನವೇ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

ಎಂಟು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಓರ್ವ ಕಿರಿಯ ಪುರುಷ ಆರೋಗ್ಯ ಸಹಾಯಕ, ಓರ್ವ ಫಾರ್ಮಾಸಿಸ್ಟ್‌ , ಓರ್ವ ಶುಶ್ರೂಷಕಿ, ಪ್ರ.ದ.ಸಹಾಯಕ, ಓರ್ವ ಕಿ.ವೈ.ಪ್ರ. ಟೆಕ್ನಾಲಜಿಸ್ಟ್‌ ಹಾಗೂ ಗ್ರೂಪ್‌ ಡಿ. ಸಹಾಯಕರ ಮೂಲಕ ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕರ್ತವ್ಯ ನಿಭಾಯಿಸಲು ಸಾಕಷ್ಟು ಅನುಕೂಲವಾಗಲಿದೆ. ಕಿರಿಯ ಪುರುಷ ಆರೋಗ್ಯ ಸಹಾಯಕರ ನಾಲ್ಕು ಹುದ್ದೆ ಸದ್ಯ ಖಾಲಿ ಇದೆ ಎಂದು ಮಾಹಿತಿ ನೀಡಿದರು.

ಕ್ಷಯ ರೋಗ ಪತ್ತೆ ಸಹಾಯ
ಆರು ಬೆಡ್‌ ಸವಲತ್ತು ಹೊಂದಿರುವ ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್‌, ಫಾರ್ಮಸಿ, ಹೊರರೋಗಿ, ಒಳರೋಗಿಗಳ ಸೂಕ್ತ ಆರೈಕೆ, ಇದೀಗ ಕ್ಷಯರೋಗ ಪತ್ತೆ ಕೂಡ ಇಲ್ಲಿಯೇ ಸಾಧ್ಯವಾಗುತ್ತಿದ್ದು, ಸರಕಾರಿ ಯೋಜನೆಗಳಿಗಾಗಿ ಫಲಾನುಭವಿಗಳ ಅಲೆದಾಟಕ್ಕೆ ಮುಕ್ತಿ ದೊರೆತಂತಾಗಿದೆ.

ಆರೋಗ್ಯ ಮಾಹಿತಿ ನೀಡಲು ಯೋಜನೆ
ಆಶಾ ಕಾರ್ಯಕರ್ತೆಯರು, ಸ್ಥಳೀಯ ಗ್ರಾ.ಪಂ., ಆರೋಗ್ಯ ಸಹಾಯಕಿಯರ ಉತ್ತಮ ಸಹಕಾರದಿಂದ ಆರೋಗ್ಯ ಮಾಹಿತಿ ನೀಡಲು ಯೋಜನೆ ರೂಪಿಸ ಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಮಳೆಗಾಲಕ್ಕೂ ಮುನ್ನವೇ ಲಾರ್ವಾ ಸರ್ವೇ, ಜಾಗೃತಿ ಜಾಥಾ, ಕರಪತ್ರ ಹಂಚುವಿಕೆ, ಆರೋಗ್ಯ ಶಿಬಿರ, ಬಿ.ಪಿ.-ಶುಗರ್‌ ತಪಾಸಣೆ ಸಹಿತ ಎನ್‌ಸಿಡಿ ಶಿಬಿರಗಳ ಮೂಲಕ ಆರೋಗ್ಯ ಜಾಗೃತಿಗಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಬೀದಿ ಬದಿ ಆಹಾರ ಬಳಕೆಯ, ಸ್ವತ್ಛತೆಯ ಬಗ್ಗೆ ಗ್ರಾ.ಪಂ. ಸಹಕಾರದೊಂದಿಗೆ ಸೂಕ್ತ ಗಮನಹರಿಸಲಾಗುತ್ತದೆ. ಇರುವ ಎಲ್ಲ ಎಂಟೂ ಆರೋಗ್ಯ ಉಪ ಕೇಂದ್ರಗಳು ಚಟುವಟಿಕೆ ನಿರತವಾಗಿರುವಂತೆ ಕಾಯ್ದುಕೊಳ್ಳಲಾಗುತ್ತದೆ .
-ಡಾ| ಶೈನೀ, ವೈದ್ಯಾಧಿಕಾರಿ, ಮೂಡಬೆಟ್ಟು ಪಾ. ಆರೋಗ್ಯ ಕೇಂದ್ರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.