ಟೆಂಟ್ನಲ್ಲಿ ವಾಸವಿದ್ದ ಕುಟುಂಬಗಳ ಸ್ಥಳಾಂತರ
Team Udayavani, Nov 24, 2019, 5:43 AM IST
ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಉಡುಪಿ ಜಿಲ್ಲಾ ನಾಗರಿಕ ಸೇವಾ ಸಮಿತಿ ಟ್ರಸ್ಟ್ ಇವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕರಾವಳಿ ಬೈಪಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಟೆಂಟ್ನಲ್ಲಿ ವಾಸವಿದ್ದ ರಾಜಸ್ಥಾನ ಮೂಲದ 5 ಕುಟುಂಬಗಳ ಒಟ್ಟು 26 ಮಂದಿಯನ್ನು ಸುರಕ್ಷಿತವಾಗಿ ಬೇರೆ ಕಡೆ ಸ್ಥಳಾಂತರಿಸಿದ್ದಾರೆ.
ಮಕ್ಕಳು ರಸ್ತೆ ಬದಿಯಲ್ಲಿ ವಾಸವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಂಚರಿಸುವುದರಿಂದ ಸಂಭವನೀಯ ದುರಂತ ತಪ್ಪಿಸುವ ನಿಟ್ಟಿನಲ್ಲಿ ಇಲಾಖೆ ಕ್ಷಿಪ್ರ ಕಾರ್ಯಾಚರಣೆ ಮೂಲಕ ನವಯುಗ ಕಂಪೆನಿಯ ಸಹಯೋಗದೊಂದಿಗೆ ನಿರಂತರವಾಗಿ ಟೆಂಟ್ ಹಾಕುವ ಪ್ರದೇಶಗಳಲ್ಲಿ ಜೆ.ಸಿ.ಬಿ. ಮೂಲಕ ಅಗೆದು ಮುಂದೆ ಆ ಪ್ರದೇಶಗಳಲ್ಲಿ ವಲಸೆ ಕಾರ್ಮಿಕರು ಟೆಂಟ್ ಅಳವಡಿಸದಂತೆ ಮಾಡಲಾಗಿದೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ, ಕಾನೂನು ಪರೀವಿಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಲೋಚಕಿ ಅಂಬಿಕಾ ಕೆ.ಎಸ್., ಸಮಾಜ ಸೇವಕ ಯೋಗೀಶ್, ಜಿಲ್ಲಾ ನಾಗರಿಕ ಸೇವಾ ಸಮಿತಿ ಟ್ರಸ್ಟ್ನ ನಿತ್ಯಾನಂದ ಒಳಕಾಡು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ