ನಗರಸಭೆ ಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಬ್ರಹ್ಮಗಿರಿಗೆ ಸ್ಥಳಾಂತರ


Team Udayavani, Jan 21, 2020, 5:31 AM IST

701UDKC6

ಉಡುಪಿ: ನಗರಸಭೆ ಪಕ್ಕದಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರವು (ಪಿಎಚ್‌ಸಿ) ಪ್ರವಾಸಿ ಬಂಗ್ಲೆ ಎದುರಿನ ಜಿ.ಪಂ. ವಸತಿ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಐದು ತಿಂಗಳಿನಿಂದ ಇಲ್ಲಿ ಕಾರ್ಯಾಚರಣೆ ಮಾಡುತ್ತಿದ್ದು, ಹಲವಾರು ಮಂದಿ ಇದರ ಪ್ರಯೋಜನ ಪಡೆಯುತ್ತಿದ್ದಾರೆ.

ಟಿ.ಬಿ., ಮಲೇರಿಯಾ ತಪಾಸಣೆ, ಚಿಕಿತ್ಸೆ ಸೇರಿದಂತೆ ಬಿ.ಪಿ., ಶುಗರ್‌ನಂತಹ ಸಮಸ್ಯೆಗಳ ತಪಾಸಣೆ, ಡೆಂಗ್ಯೂ ರೋಗದ ಜಾಗೃತಿ, ಸೊಳ್ಳೆ ಪರದೆ ವಿತರಣೆ ಮತ್ತು ಕೇಂದ್ರದ ನೀತಿಗಳ ಪ್ರಕಾರ ಪ್ರತಿ ತಿಂಗಳಿಗೆ ಒಂದರಂತೆ ಆರೋಗ್ಯ ಶಿಬಿರಗಳನ್ನು ನಗರದ ಒಳಪ್ರದೇಶದಲ್ಲಿ ನಡೆಸುವ ಮೂಲಕ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಮಹಿಳೆಯರೇ ಅಧಿಕ
ಅಂಕಿ-ಅಂಶಗಳ ಪ್ರಕಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವವರಲ್ಲಿ ಮಹಿಳೆಯರ ಸಂಖ್ಯೆಯೇ ಅಧಿಕವಾಗಿದೆ. 2018ರಲ್ಲಿ 3033 ಮಂದಿ ಮಹಿಳೆಯರು ಹಾಗೂ 2019ರಲ್ಲಿ 2411 ಮಂದಿ ಮಹಿಳೆಯರು ಭೇಟಿ ನೀಡಿದ್ದಾರೆ.

ಹಲವಾರು ಕಾರ್ಯಕ್ರಮ
ಪ್ರಾಥಮಿಕ ಆರೋಗ್ಯ ಕೇಂದ್ರವು ಸುಸಜ್ಜಿತ ಕಟ್ಟಡವನ್ನು ಒಳಗೊಂಡಿದೆ. ಕೋಣೆಗಳೊಂದಿಗೆ ಸಾರ್ವಜನಿಕರ ಸೇವೆಯಲ್ಲಿ ತೊಡಗಿಕೊಂಡಿರುವ ಜಿಲ್ಲಾ ಪ್ರಾ.ಆರೋಗ್ಯ ಕೇಂದ್ರವು ಪ್ರತೀ ತಿಂಗಳ 9ನೇ ತಾರೀಕಿನಂದು ಗರ್ಭಿಣಿಯರ ತಪಾಸಣೆ, 10ರಂದು ಕೆಎಂಸಿಯ ಎನ್‌ಜಿಒಗಳಿಂದ ಅರ್ಧದಿನ ಕಣ್ಣಿನ ತಪಾಸಣೆ ಹಾಗೂ ಹೊಸ ಲೆನ್ಸ್‌ ಸೇರ್ಪಡೆ ಸಲಹೆ, ಉಚಿತ ಆಪರೇಷನ್‌ ನಡೆಸುತ್ತಿದೆ. ಪ್ರತಿ ಗುರುವಾರ ಮಕ್ಕಳಿಗೆ ಲಸಿಕೆ ಕಾರ್ಯಕ್ರಮ, ಜಂತು ಹುಳು ಮದ್ದು ಸೇವೆಯನ್ನು ಒದಗಿಸುತ್ತಿದೆ.

ಸುಸಜ್ಜಿತ ಕೊಠಡಿಗಳು
ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಗೆ ಅನುಕೂಲಕರವಾಗುವಂತೆ ಆಸನದ ವ್ಯವಸ್ಥೆಯನ್ನು ಒಳಗೊಂಡಿದೆ. ಒಟ್ಟು 6 ಕೋಣೆಗಳಲ್ಲಿ 1 ವೈದ್ಯಾಧಿಕಾರಿಗೆ, 1 ಹಾಲ್‌, 1 ಔಟ್‌ ಟ್ರೀಟ್‌ಮೆಂಟ್‌ ರೂಮ್‌, ಮಾಳಿಗೆಯಲ್ಲಿ ಫಿಲ್ಡ್‌ ಸ್ಟಾಫ್ಗಳಿಗೆ ಒಂದು ಕೊಠಡಿ, ಒಂದು ಲ್ಯಾಬ್‌ ಸೇರಿ ಒಟ್ಟು ಆರು ರೂಮ್‌ಗಳನ್ನು ಹೊಂದಿದೆ.

ಸಿಬಂದಿ1 ವೈದ್ಯಾಧಿಕಾರಿ, 2 ಮಂದಿ ಸ್ಟಾಫ್ ನರ್ಸ್‌, 1 ಔಷಧಿ ವಿತರಕರು 1 ಪ್ರಯೋಗಾಲಯದ ಸಿಬಂದಿ, 8 ಮಂದಿ ಫಿಲ್ಡರೇಟರ್‌ (ಆರೋಗ್ಯ ಕಾರ್ಯಕರ್ತೆಯರು), 1 ಕ್ಲರ್ಕ್‌, 1 ಕೆಲಸದವರು ಸೇರಿ ಒಟ್ಟು 15 ಮಂದಿ ಸಿಬಂದಿ ಶ್ರಮಿಸುತ್ತಿದ್ದಾರೆ.

ಆರೋಗ್ಯ ಕ್ಯಾಂಪ್‌
ಕೇಂದ್ರ ಮತ್ತು ರಾಜ್ಯ ಸರಕಾರದ ಎಲ್ಲ ಕಾರ್ಯಕ್ರಮಗಳು,ಆರೋಗ್ಯ ಸೇವೆಗಳು ಲಭ್ಯವಿದ್ದು, ಹೊಸಹೊಸ ಆರೋಗ್ಯ ಸಂಬಂಧಿ ಮಾಹಿತಿಗಳನ್ನು, ಮಲೇರಿಯಾ ಡೆಂಗ್ಯೂನಂತಹ ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಜತೆಜತೆ ಸೊಳ್ಳೆ ಪರದೆಗಳನ್ನು ನೀಡುವ ಕೆಲಸ ಸಾಗುತ್ತಿದೆ. ತಿಂಗಳಿಗೊಂದು ಆರೋಗ್ಯ ಕ್ಯಾಂಪ್‌ಗ್ಳನ್ನು ಹಮ್ಮಿಕೊಳ್ಳಲಾಗುತ್ತಿದೆ.
-ಡಾ| ಹೇಮಂತ್‌, ವೈದ್ಯಾಧಿಕಾರಿ

ಮನೆಮನೆಗೆ ತೆರಳಿ ಮಾಹಿತಿ
ಕೇಂದ್ರದ ಇಂದ್ರ ಧನುಷ್‌ ಕಾರ್ಯಕ್ರಮದ ಮೂಲಕ ಮಕ್ಕಳ ಲಸಿಕೆ ಕಾರ್ಯಕ್ರಮದಲ್ಲಿ ಬಿಟ್ಟು ಹೋಗಿರುವ ಮಕ್ಕಳನ್ನು ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ. ಡೆಂಗ್ಯೂ ನಿಯಂತ್ರಣದ ಉದ್ದೇಶದಿಂದದಲೂ ಜಾಗೃತಿ ಮತ್ತು ದಾಖಲೆ ನೀಡುವ ಕೆಲಸ ನಡೆಯುತ್ತಿದೆ. ಪರಿಸರ ಮತ್ತು ವೈಯಕ್ತಿಕ ಸ್ವತ್ಛತೆ, ಶುದ್ಧ ಕುಡಿಯುವ ನೀರಿನ ಬಗ್ಗೆ ಜಾಗೃತಿ, ಪೌಷ್ಟಿಕ ಆಹಾರ ಮತ್ತು ಸಣ್ಣ ಪುಟ್ಟ ರೋಗ-ರುಜಿನಗಳಿಗೆ ಚಿಕಿತ್ಸೆಗಳು ಲಭ್ಯವಿವೆ.

– ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.