ಸಮಸ್ಯಾತ್ಮಕ ಮತಗಟ್ಟೆ ವರದಿ ನೀಡಿ: ಹೆಪ್ಸಿಬಾ
Team Udayavani, Feb 13, 2019, 1:00 AM IST
ಉಡುಪಿ: ಜಿಲ್ಲೆಯಲ್ಲಿನ ಸಮಸ್ಯಾತ್ಮಕ ಮತಗಟ್ಟೆಯ ಸಮಗ್ರ ವರದಿಯನ್ನು ಮುಂದಿನ 4 ದಿನಗಳಲ್ಲಿ ನೀಡುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿ¨ªಾರೆ.
ಮಂಗಳವಾರ ರಜತಾದ್ರಿಯಲ್ಲಿ ನಡೆದ ಜಿಲ್ಲೆಯ ಸೆಕ್ಟರ್ ಅಧಿಕಾರಿಗಳ, ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವರದಿಯಲ್ಲಿ ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅತೀ ಕಡಿಮೆ ಮತದಾನವಾದ, ಮತ ದಾರರಿಗೆ ಬೆದರಿಕೆ ಉಂಟುಮಾಡುವ, ಮತದಾರರು ಬರಲು ಹೆದರಿಕೆಯುಳ್ಳ ಮತಗಟ್ಟೆಗಳ ಬಗ್ಗೆ ಸಂಪೂರ್ಣ ವಿವರವನ್ನು ನೀಡಬೇಕು. ಈ ಬಾರಿಯ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಯಾವುದೇ ಅಡೆತಡೆಗಳಿದ್ದರೆ ಕೂಡಲೇ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ಬಾರಿ ಅತೀ ಕಡಿಮೆ ಮತದಾನವಾದ ಮತ ಗಟ್ಟೆಗೆ ತೆರಳಿ ನೈಜ ಪರಿಸ್ಥಿತಿಯ ವರದಿ ನೀಡಬೇಕು. ಒಂದು ಮತಗಟ್ಟೆಯಲ್ಲಿ ಒಬ್ಬ ಅಭ್ಯರ್ಥಿಗೆ ಶೇ. 75ಕ್ಕಿಂತಲೂ ಹೆಚ್ಚು ಮತದಾನವಾದ ಪ್ರದೇಶದಲ್ಲಿ ಮತದಾರರಿಗೆ ಭಯ, ಆಮಿಷ ನೀಡಿರುವಂತಹ ಘಟನೆಗಳು ನಡೆದಿದ್ದರೆ ನೈಜ ವರದಿ ನೀಡಿ, ಸ್ಥಳೀಯ ಬಿಎಲ…ಒಗಳು, ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ, ಫೆ.16ರ ಒಳಗೆ ವರದಿ ನೀಡಬೇಕು ಎಂದರು.
ಚುನಾವಣೆ ಕರ್ತವ್ಯದಲ್ಲಿ ಪ್ರತಿಯೊಬ್ಬರೂ ಸಂಪೂರ್ಣ ವಾಗಿ ತೊಡಗಿಕೊಳ್ಳಬೇಕು. ಲೋಪಗಳಿಗೆ ಆಸ್ಪದ ನೀಡದೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಲೋಕಸಭಾ ಚುನಾವಣೆಗಾಗಿ 92 ಜನ ಸೆಕ್ಟರ್ ಅಧಿಕಾರಿಗಳು ಮತ್ತು 132 ಪೊಲೀಸ್ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಎಎಸ್ಪಿ ಕುಮಾರ ಚಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ಮಧುಕೇಶ್ವರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್