ಹಲ್ಲೆಗೆ ಐಎಂಎ ವೈದ್ಯರ ಪ್ರತಿಭಟನ ಮನವಿ
Team Udayavani, Jun 15, 2019, 5:09 AM IST
ಉಡುಪಿ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ದೇಶಾದ್ಯಂತ ಭಾರತೀಯ ವೈದ್ಯ ಸಂಘದ (ಐಎಂಎ) ಸದಸ್ಯ ವೈದ್ಯರು ಶುಕ್ರವಾರ ಪ್ರತಿಭಟನೆ ನಡೆಸಿದ್ದು, ಅದರ ಅಂಗವಾಗಿ ಉಡುಪಿ ಸಂಘದ ಸದಸ್ಯರು
ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆಯ ವಿರುದ್ಧ ರಾಷ್ಟ್ರೀಯ ಕಾಯಿದೆ ರೂಪಿಸಿ ಅನುಷ್ಠಾನಿಸಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಯಿತು. ಉಡುಪಿ ಕರಾವಳಿ ಐಎಂಎ ಅಧ್ಯಕ್ಷ ಡಾ|ಗುರುಮೂರ್ತಿ ಭಟ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರ ಮೂಲಕ ಮನವಿ ಪತ್ರ ಕಳುಹಿಸಲಾಯಿತು. ದೇಶಾದ್ಯಂತ ವೈದ್ಯರು ಪ್ರತಿಭಟನೆ ಅಂಗವಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದಂತೆ ಉಡುಪಿಯಲ್ಲಿಯೂ ಸಾಂಕೇತಿಕವಾಗಿ ಕಪ್ಪು ಪಟ್ಟಿ ಧರಿಸಿ ಮನವಿ ಸಲ್ಲಿಸಲಾಯಿತು.
ವೈದ್ಯಕೀಯ ರಂಗದ ಸಿಬಂದಿ ಮೇಲೆ ಹಲ್ಲೆ, ಹಿಂಸೆ ನಡೆಯುವುದನ್ನು ವಿಶ್ವ ವೈದ್ಯಕೀಯ ಸಂಘದವರೂ ಖಂಡಿಸಿದ್ದಾರೆ. ಆಸ್ಪತ್ರೆಯಲ್ಲಿ ನಡೆಯುವ ಹಿಂಸಾಚಾರದ ವಿರುದ್ಧ ರಾಷ್ಟ್ರೀಯ ಕಾನೂನು ರೂಪಿಸಲು ಭಾರತೀಯ ವೈದ್ಯ ಸಂಘ ಒತ್ತಾಯಿಸಿದೆ. ವೈದ್ಯರ ಮೇಲಿನ ಹಲ್ಲೆಯಿಂದ ರೋಗಿಗಳಿಗೆ ಮಾತ್ರ ತೊಂದರೆಯಾಗುವುದಲ್ಲದೆ, ಪರೋಕ್ಷ ದುಷ್ಪರಿಣಾಮಗಳೂ ಇವೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ