“ತಂತ್ರಜ್ಞಾನವನ್ನು ಸದ್ಬಳಕೆ ಮಾಡಿದಾಗ ಸಂಶೋಧನೆ ಸುಲಭ ಸಾಧ್ಯ’
Team Udayavani, Feb 27, 2020, 5:48 AM IST
ಉಡುಪಿ: ಪ್ರಸಕ್ತ ತಂತ್ರಜ್ಞಾನ ಯುಗವು ಆಡಳಿತ ಶಾಸ್ತ್ರ ಮತ್ತು ನಿರ್ವಹಣೆಯ ಕಲಿಕೆಗೆ ಪೂರಕವಾಗಿದ್ದು, ತಂತ್ರಜ್ಞಾನದ ಸದ್ಬಳಕೆ ಮಾಡಿದಾಗ ಸಂಶೋಧನಾ ಕಾರ್ಯ ಸುಲಭ ಸಾಧ್ಯ. ವಿದ್ಯಾರ್ಥಿಗಳು ಸರಿಯಾದ ಗುರಿ, ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಿದರೆ ಯಶಸ್ಸು ಸಾಧ್ಯ ಎಂದು ಮಾಹೆ ಸಂಶೋಧನಾ ಅಧ್ಯಯನ ವಿಭಾಗದ ನಿರ್ದೇಶಕಿ ಡಾ| ಶ್ಯಾಮಲ ಹಂದೆ ಹೇಳಿದರು.
ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಂಗಣದಲ್ಲಿ ನಡೆದ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ವಾರ್ಷಿಕ ದಿನಾಚರಣೆ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಡಾ| ಸತೀಶ್ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಕೊಡ ಮಾಡಿದ ಸ್ವರ್ಣಪದಕಗಳನ್ನು ವಿದ್ಯಾರ್ಥಿಗಳಾದ ವರುಣ್ ವಿವೇಕ ಶೆಟ್ಟಿ ಮತ್ತು ಅಂಕಿತಾ ಅವರಿಗೆ ನೀಡಲಾಯಿತು.ರಾಷ್ಟ್ರ ಹಾಗೂ ದಕ್ಷಿಣ ವಲಯದ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು.
ಡಾ| ರಾಜಶೇಖರನ್ ಪಿಳ್ಳೆ ಸ್ವಾಗತಿಸಿದರು. ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆಯ ನಿರ್ದೇಶಕ ಡಾ| ರವೀಂದ್ರನಾಥ ನಾಯಕ್ ಸಂಸ್ಥೆಯ ವಾರ್ಷಿಕ ವರದಿಯನ್ನು ಮಂಡಿಸಿದರು.
ಅಂಕಿತಾ ಕಾರ್ಯಕ್ರಮ ನಿರೂಪಿಸಿದರು. ಡಾ| ಪಲ್ಲವಿ ಉಪಾಧ್ಯಾಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ