ಶ್ರೀಪಾದರಿಂದ ಮಠದ ಪೀಠಕ್ಕೆ ಗೌರವ, ಮೌಲ್ಯವರ್ಧನೆ: ಸಂಧ್ಯಾ ಎಸ್‌.ಪೈ


Team Udayavani, Mar 24, 2020, 12:53 AM IST

ಶ್ರೀಪಾದರಿಂದ ಮಠದ ಪೀಠಕ್ಕೆ ಗೌರವ, ಮೌಲ್ಯವರ್ಧನೆ: ಸಂಧ್ಯಾ ಎಸ್‌.ಪೈ

ಉಡುಪಿ: ಮಧ್ವಾಚಾರ್ಯರ ಬಳಿಕ ಗುರುಪರಂಪರೆಯಂತೆ ಸುಬ್ರಹ್ಮಣ್ಯ ಮಠದ ನಲವತ್ತನೇ ಅಧಿಪತಿಯಾಗಿ ಶ್ರೀ ವಿದ್ಯಾಪ್ರಸನ್ನತೀರ್ಥರು ಪೀಠವನ್ನು ಅಲಂಕರಿಸಿದರು. ಶ್ರೀಪಾದರು ಹೆಸ ರಿಗೆ ತಕ್ಕಂತೆ ಹಸನ್ಮುಖೀಯಾಗಿರುವ ಸುಪ್ರಸನ್ನರು. ಅವರು ಮಠದ ಪೀಠಕ್ಕೆ ಗೌರವ, ಮೌಲ್ಯವರ್ಧನೆ ತಂದುಕೊಟ್ಟವರು ಎಂದು “ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಅವರು ಹೇಳಿದರು.

ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ಕುರಿತಾಗಿ “ತರಂಗ’ ಹೊರತಂದ “ಸುಪ್ರಸನ್ನ’ ವಿಶೇಷ ಸಂಚಿಕೆಯನ್ನು ಮಣಿಪಾಲದ ಗೀತಾಮಂದಿರದಲ್ಲಿ ಸೋಮವಾರ ಅನಾವರಣಗೊಳಿಸಿ ಅವರು ಮಾತನಾಡಿದರು. ಶ್ರೀಪಾದರು ಸರಳ ಮತ್ತು ಸುಂದರ ಮಾತುಗಳಿಂದ ದುಶ್ಚಟಗಳ ದಾಸರಾದವರನ್ನು ಸನ್ಮಾರ್ಗಕ್ಕೆ ಕರೆತರುವವರು. ಶಿಕ್ಷಣಕ್ಕೆ ಆದ್ಯತೆ ನೀಡುವುದರ ಜತೆಗೆ ವಿದ್ಯಾರ್ಥಿಗಳಿಗೆ ಪುಸ್ತಕ, ಅನ್ನದಾಸೋಹ, ಸಾರಿಗೆ ವ್ಯವಸ್ಥೆ ಮಾಡಿ ಶಿಕ್ಷಣದ ಬಗ್ಗೆ ತಮಗಿರುವ ಕಳಕಳಿಯನ್ನು ಕಾರ್ಯರೂಪದಲ್ಲಿ ವ್ಯಕ್ತಪಡಿಸಿರುವರು. ಚಿಕಿತ್ಸಾಲಯ, ಸಂಸ್ಕೃತ ಭಾಷಾಭಿವೃದ್ಧಿ, ಯೋಗಾಭ್ಯಾಸ ಪ್ರಚಾರ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ತಪಸ್ಸಿನಂತೆ ನಡೆಸಿಕೊಂಡು ಬಂದಿರುವರು ಎಂದರು.

ಎಂಎಂಎನ್‌ಎಲ್‌ ಸಿಇಒ ವಿನೋದ್‌ಕುಮಾರ್‌, ಫೈನಾನ್ಸ್‌ ಡಿಜಿಎಂ ಸುದರ್ಶನ್‌ ಶೇರಿಗಾರ್‌, ವ್ಯಾಪಾರ ಅಭಿವೃದ್ಧಿ ಡಿಜಿಎಂ ಸತೀಶ್‌ ಶೆಣೈ, ಮಂಗಳೂರು ಮಾರ್ಕೆಟಿಂಗ್‌ ವಿಭಾಗದ ಸೀನಿಯರ್‌ ಮ್ಯಾನೇಜರ್‌ ಸತೀಶ್‌ ಮಂಜೇಶ್ವರ ಉಪಸ್ಥಿತರಿದ್ದರು.

ಈ ವಾರ “ತರಂಗ’ ವಾರಪತ್ರಿಕೆ ಜತೆ ಉಚಿತವಾಗಿ “ಸುಪ್ರಸನ್ನ’ ವಿಶೇಷ ಸಂಚಿಕೆಯು “ತರಂಗ’ ಓದುಗರಿಗೆ ದೊರಕಲಿದೆ.

ಸರಳ ಬಿಡುಗಡೆಯ ಅನಿವಾರ್ಯತೆ
ಸದ್ದುಗದ್ದಲವಿಲ್ಲದೆ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸೇವೆಗಳನ್ನು ನಡೆಸಿಕೊಂಡು ಬರುತ್ತಿರುವ ಶ್ರೀಪಾದರ ಸಿದ್ಧಿಯನ್ನು ಪುಸ್ತಕ ರೂಪದಲ್ಲಿ ಓದುಗರ ಮುಂದಿಡುವ ಸೌಭಾಗ್ಯ ನಮ್ಮದಾಯಿತು. ದೊಡ್ಡ ಮಟ್ಟದಲ್ಲಿ ಈ ಪುಸ್ತಕ ಬಿಡುಗಡೆ ಮಾಡಬೇಕೆಂಬ ಮಹದಾಸೆ ಇತ್ತಾದರೂ, ಜಗತ್ತನ್ನು ಕಾಡುತ್ತಿರುವ ಕೊರೊನಾ ಮಹಾಮಾರಿಯನ್ನು ಹತೋಟಿಗೆ ತರಲು ದೇಶ ಮಾಡುತ್ತಿರುವ ಪ್ರಯತ್ನಕ್ಕೆ ಕೈಜೋಡಿಸುವ ಉದ್ದೇಶದಿಂದ ಸರಳವಾಗಿ ನಡೆಸಬೇಕಾದ ಅನಿವಾರ್ಯತೆ ಎದುರಾಯಿತು. ಜಗತ್ತನ್ನೆ ತಲ್ಲಣಗೊಳಿಸುತ್ತಿರುವ ಕೊರೊನಾ ವೈರಸ್‌ನಿಂದ ಮುಕ್ತಿ ಸಿಗಲಿ ಎನ್ನುವ ಸಾಮೂಹಿಕ ಪ್ರಾರ್ಥನೆಯನ್ನು ಎಲ್ಲರೂ ಕೈಗೊಳ್ಳಬೇಕೆಂಬ ಆಶಯವನ್ನು ಸಂಧ್ಯಾ ಎಸ್‌. ಪೈ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.