ವಾಹನಗಳ ಹೊಗೆ ಮಾಲಿನ್ಯ ಹಾವಳಿಗೆ ಬಿಸಿ ಮುಟ್ಟಿಸಿದ ಪರಿಷ್ಕೃತ ದಂಡ!


Team Udayavani, Sep 11, 2019, 5:49 AM IST

emision

ಉಡುಪಿ: ಹೊಗೆ ತಪಾಸಣೆ (ಎಮಿಷನ್‌ ಟೆಸ್ಟ್‌) ಕೇಂದ್ರದಲ್ಲಿ ಭಾರೀ ಸಂಖ್ಯೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯಗಳು ನಗರದಲ್ಲಿ ಸೋಮವಾರ ಕಂಡು ಬಂದಿವೆ.

ಕೇಂದ್ರ ಸರಕಾರ ಮೋಟರ್‌ ವಾಹನ ಕಾಯ್ದೆಗೆ ತಿದ್ದುಪಡಿ ತಂದು ನಿಯಮ ಉಲ್ಲಂಘಿಸಿದವರಿಗೆ ದುಬಾರಿ ದಂಡ ವಿಧಿಸುವ ಮೂಲಕ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಮುಂದಾಗಿದೆ. ವಾಹನ ತಪಾಸಣೆ ಮಾಡುವ ಸಂದರ್ಭ ಗಣಕೀಕೃತ ಹೊಗೆ ತಪಾಸಣೆ ಕೇಂದ್ರದಲ್ಲಿ ಪರೀಕ್ಷೆ ಮಾಡಿ ಮಾಲಿನ್ಯಕಾರವಲ್ಲ ಎನ್ನುವ ಪ್ರಮಾಣ ಪತ್ರ ಹೊಂದಿರದ ವಾಹನ ಮಾಲಕನಿಗೆ ಭಾರೀ ದಂಡ ವಿಧಿಸಲಾಗುತ್ತಿದೆ.

ದಂಡಕ್ಕೆ ಬೆಚ್ಚಿದ ವಾಹನ ಸವಾರರು

ಪ್ರತಿ ಆರು ತಿಂಗಳಿಗೊಮ್ಮೆ ಗಣಕೀ ಕೃತ ಹೊಗೆ ತಪಾಸಣೆ ಕೇಂದ್ರದಿಂದ ವಾಹನಗಳ ಹೊಗೆ ತಪಾಸಣೆಯಾಗಬೇಕು. ಆದರೆ ಹೆಚ್ಚಿನ ವಾಹನಗಳ ಸವಾರರು ಈ ನಿಯಮವನ್ನು ಪಾಲಿಸುತ್ತಿಲ್ಲ. ಇದೀಗ ನಿಯಮ ಪಾಲಿಸಿದವರಿಗೆ 1,000 ರೂ. ದಂಡ ವಿಧಿಸಲಾಗುತ್ತಿದೆ. 50 ರೂ., 100 ರೂ.ನಲ್ಲಿ ಮುಗಿಯುವ ತಪಾಸಣೆಗೆ ಯಾಕೆ ಭಾರೀ ತಂಡ ಕಟ್ಟಬೇಕು ಎನ್ನುವುದನ್ನು ಅರಿತ ವಾಹನ ಸವಾರರು ಎಮಿಷನ್‌ ಟೆಸ್ಟ್‌ ಕೇಂದ್ರಕ್ಕೆ ಲಗ್ಗೆಯಿಟ್ಟಿದ್ದಾರೆ.

ಸರ್ವರ್‌ ಸಮಸ್ಯೆ

ವಾಹನಗಳ ಎಂಜಿನ್‌ ಸರಿಯಿದ್ದರೆ ಮಾಲಿನ್ಯ ಕಾರಕ ಹೊಗೆ ಇರುವುದಿಲ್ಲ. ಆಗ ಹೊಗೆ ಪರೀಕ್ಷೆ ಒಂದು ನಿಮಿಷದಲ್ಲಿ ಮುಗಿಯುತ್ತದೆ. ಮಾಲಿನ್ಯಕಾರಕವಾಗಿದ್ದರೆ ಮಾತ್ರ ಪರೀಕ್ಷೆಗೆ ಎರಡು-ಮೂರು ನಿಮಿಷಗಳು ಬೇಕಾಗುತ್ತದೆ. ಇದು ಆನ್‌ಲೈನ್‌ ಮೂಲಕ ನಡೆಯುವ ಪ್ರಕ್ರಿಯೆ. ದಂಡಕ್ಕೆ ಬೆಚ್ಚಿದ ಸವಾರರು ಎಲ್ಲ ಕಡೆ ಒಮ್ಮೆಲೆ ವಾಹನಗಳು ಹೊಗೆ ಪರೀಕ್ಷೆಗೆ ಬಂದಿರುವುದರಿಂದ ಸರ್ವರ್‌ ಕೊಂಚ ಸಮಸ್ಯೆ ಉಂಟಾಗಿದೆ.

ವಾಹನಗಳ ಸಂಖ್ಯೆ ಹೆಚ್ಚಳ

ವಾಹನಗಳ ಹೊಗೆ ತಪಾಸಣೆಗೆ ಬರುವ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ ಎರಡು ಬಂದರೆ ಅದೇ ಹೆಚ್ಚಿತ್ತು. ಸೆ. 9ರಂದು ಬಂದ ಶೇ. 80ರಷ್ಟು ವಾಹನಗಳ ಹೊಗೆ ತಪಾಸಣೆ ಪ್ರಮಾಣ ಪತ್ರದ ಅವಧಿ ಮುಕ್ತಾಯವಾಗಿ ತಿಂಗಳಾಗಿತ್ತು. -ಸತೀಶ್‌ ಶೆಟ್ಟಿ, ಎಮಿಷನ್‌ ಟೆಸ್ಟ್‌ ಸೆಂಟರ್‌ ಮಾಲಕ
ಮುಂಚಿತವಾಗಿ ಟೆಸ್ಟ್‌

ನನ್ನ ವಾಹನದ ಹೊಗೆ ತಪಾಸಣೆ ಪ್ರಮಾಣಪತ್ರದ ಅವಧಿ ನಾಳೆಗೆ ಮುಕ್ತಾಯವಾಗುತ್ತದೆ. ಕೆಲಸದ ಒತ್ತಡದಲ್ಲಿ ಮರೆತರೆ ಭಾರೀ ದಂಡ ತೆರಬೇಕಾಗುತ್ತದೆ. ಅದಕ್ಕಾಗಿ ಒಂದು ದಿನ ಮುಂಚಿತವಾಗಿ ಎಮಿಷನ್‌ ಟೆಸ್ಟ್‌ ಕೇಂದ್ರಕ್ಕೆ ಬಂದಿದ್ದೇನೆ.
– ರೂಪಾ,ಉಡುಪಿ
ಅಧಿಕ ದಂಡ ವಿಧಿಸಲು ಆರಂಭಿಸಿರುವುದು ವಾಹನ ಚಾಲಕರಲ್ಲಿ ರಸ್ತೆ ನಿಯಮಗಳನ್ನು ಪಾಲಿಸುವಂತೆ ಮಾಡಿದೆ. ಹೊಗೆ ತಪಾಸಣೆ ಮಾಡದೆ ಇರುವ ವಾಹನಗಳು ಎಮಿಷನ್‌ ಟೆಸ್ಟ್‌ ಕೇಂದ್ರಕ್ಕೆ ಲಗ್ಗೆಯಿಟ್ಟಿವೆ. ಪ್ರಮಾಣ ಪತ್ರವಿಲ್ಲದ ವಾಹನಗಳು ರಸ್ತೆಗೆ ಬರಲು ಹಿಂದೇಟು ಹಾಕುತ್ತಿವೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.