ನಮ್ಮ ಸಂಸ್ಕೃತಿಯನ್ನು ನಾವೇ ಉಳಿಸಬೇಕು: ಶ್ರೀಕಾಂತ್ ಶೆಟ್ಟಿ ಅಭಿಪ್ರಾಯ


Team Udayavani, Jan 29, 2019, 2:49 AM IST

shreekanth-shetty-29-1.jpg

ಉಡುಪಿ: ನಮ್ಮತನವನ್ನು ಕಳೆದುಕೊಂಡ ಯಾವ ಸಂಸ್ಕೃತಿಯೂ ಉಳಿದಿಲ್ಲ. ನಾವೆಷ್ಟೇ ಆಧುನಿಕತೆಗೆ ತೆರೆದುಕೊಂಡರೂ ನಮ್ಮ ಪರಂಪರೆ, ದೈವ-ದೇವರು ಹಾಗೂ ಸಂಸ್ಕೃತಿಯ ನಂಟನ್ನು ಬಿಡಬಾರದು ಎಂದು ಪತ್ರಕರ್ತ ಹಾಗೂ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿ ಅವರು ಅಭಿಪ್ರಾಯಪಟ್ಟರು. ಅವರು ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್ (ರಿ.) ಹಿರಿಯಡ್ಕ ಇದರ 27ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಕರಾವಳಿಯ ಭವ್ಯ ಸಂಸ್ಕೃತಿ ಇವತ್ತು ಸಂಪೂರ್ಣ ತೋರಿಕೆಯ ಆಚರಣೆಗೆ ಸೀಮಿತಗೊಂಡಿದೆ. ನಮ್ಮ ಮಕ್ಕಳಿಗೆ ಇಲ್ಲಿನ ಶ್ರೀಮಂತ ಆಚರಣೆಗಳನ್ನು ಪರಿಚಯ ಮಾಡಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ದೂರದ ಊರುಗಳಲ್ಲಿ ಉದ್ಯೋಗ, ವ್ಯವಹಾರ ನಡೆಸುತ್ತಿರುವ ಕರಾವಳಿಗರು ವರ್ಷಕ್ಕೊಮ್ಮೆಯೋ, ಎರಡು ವರ್ಷಕ್ಕೊಮ್ಮೆಯೋ ಊರಿಗೆ ಬಂದು ಇಲ್ಲಿ ತಮ್ಮ ಕುಟುಂಬದ ದೈವ ದೇವರ ಕಾರ್ಯಗಳಲ್ಲಿ, ಯಕ್ಷಗಾನ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಸಂತೋಷದ ವಿಚಾರ. ಆದರೆ ಕೆಲವರು ಯಾಂತ್ರಿಕವಾಗಿ ಮಾತ್ರ ತಮ್ಮ ಉಪಸ್ಥಿತಿಯನ್ನು ತೋರ್ಪಡಿಸುತ್ತಾರೆ, ಹೀಗಾದಾಗ ನಮ್ಮ ಭವ್ಯ ಪರಂಪರೆ ಉಳಿದು ಬೆಳೆಯಲು ಹೇಗೆ ಸಾಧ್ಯ ಎಂದು ಶ್ರೀಕಾಂತ್ ಶೆಟ್ಟಿ ಅವರು ಖೇದ ವ್ಯಕ್ತಪಡಿಸಿದರು. ಊರಿನಲ್ಲಿರುವ ಯುವಕ-ಯುವತಿಯರಿಗೂ ನಮ್ಮ ಸಂಸ್ಕೃತಿಯ ಕುರಿತಾಗಿ ಒಲವು ಕಡಿಮೆಯಾಗುತ್ತಿದೆ. ಮೊಬೈಲ್ ಮತ್ತು ಟಿ.ವಿ. ಮಾಧ್ಯಮಗಳ ಪ್ರಭಾವದಿಂದ ನಮ್ಮ ಜಾನಪದ ಆಚರಣೆಗಳು ಮಹತ್ವ ಕಳೆದುಕೊಳ್ಳುತ್ತಿವೆ ಎಂದವರು ಇದೇ ಸಂದರ್ಭದಲ್ಲಿ ಹೆಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಸಾಧನಶೀಲ ಕೃಷಿಕ ಪ್ರಶಸ್ತಿ ಪುರಸ್ಕೃತ ಶ್ರೀ ಕುದಿ ಶ್ರೀನಿವಾಸ ಭಟ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗು ಕೃಷಿಯ ಉಳಿವಿನ ಬಗ್ಗೆ ನೆರೆದವರಲ್ಲಿ ಅರಿವನ್ನು ಮೂಡಿಸುವ ಪ್ರಯತ್ನವನ್ನು ಮಾಡಿದರು. ಈ ಸಂದರ್ಭದಲ್ಲಿ ಭಾರತೀಯ ದಲಿತ ಅಕಾಡೆಮಿಯ 2018ನೇ ಸಾಲಿನ ‘ಭಗವಾನ್ ಬುದ್ಧ ಫೆಲೋಶಿಪ್ ಅವಾರ್ಡ್’ ವಿಜೇತ ಹಿರಿಯಡಕ ತವಿಲ್ ವಿದ್ವಾನ್  ಶ್ರೀ ನಿತ್ಯಾನಂದ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು.

ಕು. ದಿವ್ಯ ಮರಾಠೆ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀ ಸುಜಯ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಪ್ರವೀಣ್ ಮಾಣೈ ವರದಿ ವಾಚಿಸಿ, ದಿವಾಕರ ಹಿರಿಯಡ್ಕ ಸನ್ಮಾನ ಪತ್ರ ವಾಚಿಸಿದರು ಹಾಗು ರಾಮಚಂದ್ರ ನಾಯಕ್ ವಂದಿಸಿ, ಬಾಲಕೃಷ್ಣ ಬಿ ಕೆ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿಶ್ವನಾಥ್ ಶೆಟ್ಟಿ ಹಾಗು ಸತ್ಯ ಪ್ರಸಾದ್ ಮುತ್ತೂರು ಇವರು ಸಹಕರಿಸಿದರು.

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ‘ಕಟೀಲ್ದಪ್ಪೆ ಉಳ್ಳಾಲ್ತಿ’ ಎಂಬ ತುಳು ಪೌರಾಣಿಕ ನಾಟಕವನ್ನು ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.