ರಿಮೇಕ್‌ಗೆ ಅವಕಾಶ ಕೊಟ್ಟಿರುವುದರಿಂದ  ಡಬ್ಬಿಂಗ್‌ ಬೇಡ


Team Udayavani, Mar 13, 2017, 12:38 PM IST

1203kde15a.jpg

ಕುಂದಾಪುರ: ಪರಭಾಷಾ ಚಿತ್ರಗಳನ್ನು  ರಿಮೇಕ್‌ ಮಾಡಲು ಅವಕಾಶ ನೀಡಿರುವುದರಿಂದ ಡಬ್ಬಿಂಗ್‌ನ ಅಗತ್ಯ ಇಲ್ಲ.   ರಿಮೇಕ್‌ ಮಾಡುವುದರ ಮೂಲಕ ಆ ಚಿತ್ರಗಳಲ್ಲಿ ನಮ್ಮ ಸಂಸ್ಕೃತಿ, ಸಂಪ್ರ ದಾಯಗಳನ್ನು  ಅಳವಡಿಕೊಳ್ಳಬಹುದು ಆದರೆ ಡಬ್ಬಿಂಗ್‌ ಮಾಡುವುದರಿಂದ  ಕನ್ನಡದ ಪ್ರತಿಭೆಗಖಳಿಗೆ ಅವಕಾಶದಿಂದ ವಂಚಿತರಾಗುತ್ತಾರೆ, ತಂತ್ರಜ್ಞರಿಗೆ ಅನ್ಯಾಯವಾಗುತ್ತದೆ ಎಂದು  ಮಾಜಿ ಶಾಸಕ , ಚಿತ್ರ ನಟ ಬಿ.ಸಿ. ಪಾಟೀಲ್‌ ಹೇಳಿದರು.

ಅವರು  ರವಿವಾರ  ಕುಂದಾಪುರದ ವೈದ್ಯ ಡಾ| ಉಮೇಶ್‌ ಭಟ್‌ ಅವರ “ಕಲರ್ಸ್‌ ಆಫ್‌ ದಿ ರೈನ್‌’ ಕಾದಂಬರಿ ಬಿಡುಗಡೆಗೆ ಕುಂದಾಪುರಕ್ಕೆ ಬಂದಾಗ ಆಯೋಜಿಸಲಾದ   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ  ಎರಡು ವರ್ಷಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಯುವ ಕಲಾವಿದರು ಬರುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಹೊಸ ಕಲಾವಿದರ ಆಗಮನದ ಬಳಿಕ ಚಿತ್ರರಂಗದಲ್ಲಿ  ಮತ್ತೂಮ್ಮೆ  ಹೊಸ ಅಲೆ ಎದ್ದಿದೆ. ಇತ್ತೀಚೆಗೆ ಬಿಡುಗಡೆಗೊಂಡ ಕಿರಿಕ್‌ ಪಾರ್ಟಿ ಇದಕ್ಕೆ ಒಂದು ಉದಾಹರಣೆೆ ಎಂದರು.

ಪನ್ನಗ ನಾಗಭರಣ ನಿರ್ದೇಶನದಲ್ಲಿ “ಹ್ಯಾಪಿ ನ್ಯೂ ಇಯರ್‌’ ಚಿತ್ರ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳಲಿದೆ.  ಈ ಚಿತ್ರದಲ್ಲಿ ನಾನು ಸೇರಿದಂತೆ ಸಾಯಿಕುಮಾರ್‌, ದಿಗಂತ್‌, ಧನಂಜಯ್‌, ವಿಜಯ ರಾಘವೇಂದ್ರ, ನನ್ನ ಪುತ್ರಿ ಸೃಷ್ಟಿ ಪಾಟೀಲ್‌ ಅಭಿನಯಿಸಿದ್ದಾರೆ ಎಂದರು.

ಆಡಳಿತ ವಿರೋಧಿ ಅಲೆ  
ಪಂಚರಾಜ್ಯ ಚುನಾವಣೆಯಲ್ಲಿ ಆಡಳಿತ ವಿರೋಧಿ ಮತ ಚಲಾವಣೆಯಾಗಿದೆ.  ಮುಂಬರುವ ಚುನಾವಣೆಯಲ್ಲಿ   ಕಾಂಗ್ರೆಸ್‌ ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡಿ ಹಾವೇರಿ ಜಿಲ್ಲೆಯ ಹಿರೆಕೆರೂರಿಂದ ಚುನಾವಣೆಗೆ ಸ್ಪರ್ಧೆ ನಡೆಸಲಿದ್ದೇನೆ ಎಂದು ಹೇಳಿದ  ಬಿ.ಸಿ. ಪಾಟೀಲ್‌ ಅವರು ಮುಂದಿನ ಉಪ ಚುನಾವಣೆಯಲ್ಲಿ ನಂಜನಗೂಡು ಹಾಗೂ ಗುಂಡ್ಲುಪೇಟೆಯಲ್ಲಿ  ಕಾಂಗ್ರೇಸ್‌ ಜಯಭೇರಿ ಬಾರಿಸಲಿದೆ ಎಂದರು. 
 
ಎಸ್‌.ಎಂ. ಕೃಷ್ಣ ಕಾಂಗ್ರೆಸ್‌ ಪಕ್ಷದಲ್ಲಿದ್ದಾಗ  ಲೇವಡಿ ಮಾಡಿದ್ದ ಬಿಜೆಪಿಯವರು ಮತ್ತೆ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿರುವುದು ನಗೆಪಾಟಲಾಗುತ್ತದೆ. ಕೃಷ್ಣ ಅವರು  ಕಾಂಗ್ರೆಸ್‌ನಲ್ಲಿ  ಅನುಭವಿಸಿದಷ್ಟು  ಅಧಿಕಾರವನ್ನು ಯಾರೂ ಅನುಭವಿಸಿಲ್ಲ. ಅಂಥವರು ಪಕ್ಷ ಬಿಡಬಾರದಿತ್ತು. ಅವರು ಮಾರ್ಗದರ್ಶಕ ರಾಗಬೇಕೇ ಹೊರತು ಮಾರಕವಾಗಬಾರದು ಎಂದು ಪಾಟೀಲ್‌ ಹೇಳಿದ್ದಾರೆ.

ಈ ಸಂದರ್ಭ ಉಪಸ್ಥಿತರಿದ್ದ ಡಾ| ಉಮೇಶ್‌ ಭಟ್‌   ವೈದ್ಯಕೀಯ ಶಿಕ್ಷಣದಲ್ಲಿ ಮುಂದುವರಿಯುತ್ತಿರುವ ವಿದ್ಯಾರ್ಥಿಗಳಿಗೆ ವೈದ್ಯಕೀಯ ವಿಷಯ ಏಕೆ ತೆಗೆದುಕೊಳ್ಳಬೇಕು ಎನ್ನುವುದರ ಬಗ್ಗೆ ನನ್ನ ಕಿರಿಯರಿಗೆ ಮನದಟ್ಟು ಮಾಡುವ ಉದ್ದೇಶದಿಂದ  ಬರೆದಿರುವ ಪುಸ್ತಕದ ಕುರಿತಾಗಿ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ  ಪತ್ರಕರ್ತ  ಯು.ಎಸ್‌. ಶೆಣೈ ಉಪಸ್ಥಿತರಿದ್ದರು.
 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.