ಕಾರು ಢಿಕ್ಕಿ: ರಸ್ತೆ ದಾಟುತ್ತಿದ್ದ ಟಿಪ್ಪರ್ ಚಾಲಕ ಸಾವು
Team Udayavani, Jan 2, 2020, 6:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಬೈಂದೂರು: ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಡ್ತರೆಯಲ್ಲಿ ಬುಧವಾರ ಸಂಭವಿಸಿದೆ.
ಘಟನೆ ವಿವರ
ಬೈಂದೂರು ಗ್ರಾಮದ ಗಂಗನಾಡಿನ ಕೆ. ವಿ. ಬಾಬು ಅವರು ಅಣ್ಣ ರಾಜು ಅವರ ಜತೆಯಲ್ಲಿ ಬುಧವಾರ ಬೆಳಗ್ಗೆ 4 ಗಂಟೆಗೆ ಪಡುವರಿಯ ಮಂಜುನಾಥ ಶೆಟ್ಟಿ ಎಂಬವರ ಟಿಪ್ಪರ್ನಲ್ಲಿ ಸಾಹೇಬ್ರಕಟ್ಟೆಯ ನಂಚಾರಿನಿಂದ ಜಲ್ಲಿ ಲೋಡ್ ಮಾಡಿಕೊಂಡು ಬರಲು ಹೊರಟಿದ್ದರು.
ಟಿಪ್ಪರ್ನಲ್ಲಿ ರಾಜು ಚಾಲಕರಾಗಿದ್ದರು ಹಾಗೂ ಬಾಬು ಕ್ಲೀನರ್ ಆಗಿದ್ದರು. ಸುಮಾರು 4.30ಕ್ಕೆ ಯಡ್ತರೆ ಗ್ರಾಮದ ಎ.ಕೆ. ರೆಸಿಡೆನ್ಸಿ ಎದುರು ರಾಷ್ಟ್ರೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ರಾಜು ಟಿಪ್ಪರನ್ನು ನಿಲ್ಲಿಸಿ, ತನ್ನ ರೂಮಿಗೆ ಹೋಗಿ ಬರುತ್ತೇನೆಂದು ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದರು.
ಆಗ ಶಿರೂರು ಕಡೆಯಿಂದ ಉಪ್ಪುಂದದ ಕಡೆಗೆ ಬಂದ ಬಿಳಿ ಬಣ್ಣದ ಕಾರು ರಾಜು ಅವರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಅವರು ಸುಮಾರು 20 ಅಡಿಗಳಷ್ಟು ದೂರ ಹೋಗಿ ಬಿದ್ದಿದ್ದು, ಕಾರು ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ರಾಜು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಾಬು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…