‘ನಮ್ಮ ಜೀವಕ್ಕೆ ಬೆಲೆ ಇಲ್ಲವೇ?’ ರಸ್ತೆ ಕಾಮಗಾರಿಗೆ ನಲುಗಿದ ಹಕ್ಕಿಗಳ ಮೂಕ ರೋದನ


Team Udayavani, Nov 5, 2019, 7:39 PM IST

Hakki-730

ಉಡುಪಿ: ವಿದ್ಯಾನಗರಿಯೆಂದೇ ಹೆಸರುವಾಸಿಯಾಗಿರುವ ಮಣಿಪಾಲ ತನ್ನ ಪ್ರಾಕೃತಿಕ ಸೌಂದರ್ಯಕ್ಕೂ ಹೆಸರುವಾಸಿಯಾಗಿದೆ. ಮಣಿಪಾಲ ಆಸುಪಾಸಿನಲ್ಲಿರುವ ಹಲವಾರು ಪ್ರಾಕೃತಿಕ ತಾಣಗಳು ಪ್ರಕೃತಿ ಪ್ರಿಯರನ್ನು ಆಗಾಗ್ಗೆ ತನ್ನತ್ತ ಸೆಳೆಯುತ್ತಿರುತ್ತವೆ. ಇನ್ನು ಮಣಿಪಾಲ ನಗರದ ಹೃದಯ ಭಾಗದಲ್ಲಿರುವ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಲವಾರು ಬೃಹತ್ ಮರಗಳಿದ್ದು ಆ ಮರಗಳ ರೆಂಬೆಗಳು ವಿವಿಧ ಜಾತಿಯ ಪಕ್ಷಿಗಳಿಗೆ ಆಶ್ರಯ ತಾಣವಾಗಿದೆ.

ಆದರೆ ಇದೀಗ ಈ ಭಾಗದಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ ಟೈಗರ್ ಸರ್ಕಲ್ ಬಳಿಯಲ್ಲಿದ್ದ ಬೃಹತ್ ಮರವನ್ನು ಇಂದು ಕಡಿದುರುಳಿಸಲಾಗಿದೆ. ಏಕಾಏಕಿ ತಮ್ಮ ಸೂರನ್ನು ಕಡಿದು ಹಾಕಿದ್ದರಿಂದ ಕಂಗಾಲಾದ ನೂರಾರು ಹಕ್ಕಿಗಳಲ್ಲಿ ಕೆಲವು ಸ್ಥಳದಲ್ಲೇ ಸತ್ತುಬಿದ್ದರೆ ಇನ್ನು ಕೆಲವು ಹಕ್ಕಿಗಳು ಕಡಿದು ಹಾಕಿದ ಮರದ ಆಸುಪಾಸಿನಲ್ಲೇ ದಿನಪೂರ್ತಿ ದಿಕ್ಕುತೋಚದಂತೆ ಕುಳಿತಿದ್ದ ದೃಶ್ಯ ನೋಡುಗರ ಮನಕಲುಕುವಂತಿತ್ತು.

ಪ್ರತೀದಿನ ಬೆಳಿಗ್ಗೆ ಮತ್ತು ಸಾಯಂಕಾಲದ ಸಮಯದಲ್ಲಿ ಈ ಮರಗಳ ತುಂಬೆಲ್ಲಾ ಹಕ್ಕಿಗಳ ಕಲರವವೇ ತುಂಬಿರುತ್ತದೆ. ಮತ್ತು ಇದರ ಅಡಿಯಲ್ಲಿ ಸಾಗುವವರಿಗೆ ಮತ್ತು ನಿಲ್ಲಿಸಿದ ವಾಹನಗಳಿಗೆ ‘ಹಿಕ್ಕೆ ಪ್ರಸಾದ’ವೂ ಸಿಗುತ್ತಿರುತ್ತದೆ! ಆದರೆ ಏನೇ ಆದರೂ ಈ ಹಕ್ಕಿಗಳ ಕಲರವ ಈ ಭಾಗದ ಜನರ ನಿತ್ಯ ಜೀವನದ ಒಂದು ಭಾಗವೇ ಆಗಿ ಹೋಗಿತ್ತು. ಆದರೆ ಇದೀಗ ರಸ್ತೆ ಅಗಲವಾಗುತ್ತಿದೆ, ಆದರೆ ಈ ಮೂಕಜೀವಿಗಳ ವಿಚಾರದಲ್ಲಿ ನಮ್ಮ ಮನಸ್ಸು ಕಿರಿದಾಗುತ್ತಿದೆ, ಇವುಗಳ ಮೂಕವೇದನೆಯನ್ನು ಕಂಡವರ ಹೃದಯ ಭಾರವಾಗುತ್ತಿದೆ. ಇನ್ನು ಇಲ್ಲಿ ಹಕ್ಕಿಗಳ ಕಲರವ ಕೇಳಿಸದು, ‘ಹಿಕ್ಕೆ ಪ್ರಸಾದ’ವೂ ಸಿಗದು.

ಗೂಡಿನಲ್ಲಿರುವ ತನ್ನ ಮರಿಗೆ ಆಹಾರವನ್ನು ಹುಡುಕಿ ಹೊರಟಿದ್ದ ಅದೆಷ್ಟೋ ಹಕ್ಕಿಗಳು ಹಿಂತಿರುಗಿ ಬರುವಷ್ಟರಲ್ಲಿ ಎಷ್ಟೋ ಕಾಲದಿಂದ ಅವುಗಳ ನೆಲೆಯಾಗಿದ್ದ ಮರವೇ ನೆಲಕ್ಕೊರಗಿತ್ತು. ಇನ್ನು ಮರದಲ್ಲಿದ್ದ ಗೂಡುಗಳಲ್ಲಿದ್ದ ಮೊಟ್ಟೆಗಳು ಮತ್ತು ಹಕ್ಕಿಮರಿಗಳು ಮರದ ರೆಂಬೆ ಕೊಂಬೆಗಳೊಂದಿಗೇ ನೆಲಕ್ಕೆ ಬಿದ್ದು ನಾಶವಾಗಿ ಹೋಗಿದ್ದವು.

ಅಭಿವೃದ್ಧಿ ಕಾರ್ಯಗಳನ್ನು ನಡೆಸುವಾಗ ಅಕ್ಕಪಕ್ಕದ ಮರಗಳನ್ನು ಕಡಿಯುವುದು ಅನಿವಾರ್ಯವಾದರೂ ಈ ಸಂದರ್ಭದಲ್ಲಿ ಮರಗಳಲ್ಲಿ ಆಶ್ರಯ ಪಡೆದುಕೊಂಡಿರುವ ಪಕ್ಷಿಗಳಿಗೆ ಬದಲೀ ನೆಲೆ ಒದಗಿಸಿಕೊಡುವ ನಿಟ್ಟಿನಲ್ಲಿ ಪಕ್ಷಿ ಪ್ರಿಯರೊಂದಿಗೆ ಚರ್ಚಿಸಿ ಮುಂದುವರಿಯುತ್ತಿದ್ದರೆ ಮೂಕ ಜೀವಿಗಳು ಈ ರೀತಿ ನರಳಾಡುವುದನ್ನು ತಪ್ಪಿಸಬಹುದಿತ್ತಲ್ಲವೇ? ಮುಂಬರುವ ದಿನಗಳಲ್ಲಾದರೂ ಜಿಲ್ಲಾಡಳಿತ ಮತ್ತು ಕಾಮಗಾರಿಯ ಗುತ್ತಿಗೆದಾರರು ಈ ಕುರಿತಾಗಿ ಗಮನಹರಿಸುವರೇ ಎಂಬ ಪ್ರಶ್ನೆ ಪಕ್ಷಿ ಪ್ರಿಯರದ್ದು ಮತ್ತು ಸ್ಥಳೀಯರದ್ದಾಗಿದೆ.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.