‘ನಮ್ಮ ಜೀವಕ್ಕೆ ಬೆಲೆ ಇಲ್ಲವೇ?’ ರಸ್ತೆ ಕಾಮಗಾರಿಗೆ ನಲುಗಿದ ಹಕ್ಕಿಗಳ ಮೂಕ ರೋದನ


Team Udayavani, Nov 5, 2019, 7:39 PM IST

Hakki-730

ಉಡುಪಿ: ವಿದ್ಯಾನಗರಿಯೆಂದೇ ಹೆಸರುವಾಸಿಯಾಗಿರುವ ಮಣಿಪಾಲ ತನ್ನ ಪ್ರಾಕೃತಿಕ ಸೌಂದರ್ಯಕ್ಕೂ ಹೆಸರುವಾಸಿಯಾಗಿದೆ. ಮಣಿಪಾಲ ಆಸುಪಾಸಿನಲ್ಲಿರುವ ಹಲವಾರು ಪ್ರಾಕೃತಿಕ ತಾಣಗಳು ಪ್ರಕೃತಿ ಪ್ರಿಯರನ್ನು ಆಗಾಗ್ಗೆ ತನ್ನತ್ತ ಸೆಳೆಯುತ್ತಿರುತ್ತವೆ. ಇನ್ನು ಮಣಿಪಾಲ ನಗರದ ಹೃದಯ ಭಾಗದಲ್ಲಿರುವ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಲವಾರು ಬೃಹತ್ ಮರಗಳಿದ್ದು ಆ ಮರಗಳ ರೆಂಬೆಗಳು ವಿವಿಧ ಜಾತಿಯ ಪಕ್ಷಿಗಳಿಗೆ ಆಶ್ರಯ ತಾಣವಾಗಿದೆ.

ಆದರೆ ಇದೀಗ ಈ ಭಾಗದಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ ಟೈಗರ್ ಸರ್ಕಲ್ ಬಳಿಯಲ್ಲಿದ್ದ ಬೃಹತ್ ಮರವನ್ನು ಇಂದು ಕಡಿದುರುಳಿಸಲಾಗಿದೆ. ಏಕಾಏಕಿ ತಮ್ಮ ಸೂರನ್ನು ಕಡಿದು ಹಾಕಿದ್ದರಿಂದ ಕಂಗಾಲಾದ ನೂರಾರು ಹಕ್ಕಿಗಳಲ್ಲಿ ಕೆಲವು ಸ್ಥಳದಲ್ಲೇ ಸತ್ತುಬಿದ್ದರೆ ಇನ್ನು ಕೆಲವು ಹಕ್ಕಿಗಳು ಕಡಿದು ಹಾಕಿದ ಮರದ ಆಸುಪಾಸಿನಲ್ಲೇ ದಿನಪೂರ್ತಿ ದಿಕ್ಕುತೋಚದಂತೆ ಕುಳಿತಿದ್ದ ದೃಶ್ಯ ನೋಡುಗರ ಮನಕಲುಕುವಂತಿತ್ತು.

ಪ್ರತೀದಿನ ಬೆಳಿಗ್ಗೆ ಮತ್ತು ಸಾಯಂಕಾಲದ ಸಮಯದಲ್ಲಿ ಈ ಮರಗಳ ತುಂಬೆಲ್ಲಾ ಹಕ್ಕಿಗಳ ಕಲರವವೇ ತುಂಬಿರುತ್ತದೆ. ಮತ್ತು ಇದರ ಅಡಿಯಲ್ಲಿ ಸಾಗುವವರಿಗೆ ಮತ್ತು ನಿಲ್ಲಿಸಿದ ವಾಹನಗಳಿಗೆ ‘ಹಿಕ್ಕೆ ಪ್ರಸಾದ’ವೂ ಸಿಗುತ್ತಿರುತ್ತದೆ! ಆದರೆ ಏನೇ ಆದರೂ ಈ ಹಕ್ಕಿಗಳ ಕಲರವ ಈ ಭಾಗದ ಜನರ ನಿತ್ಯ ಜೀವನದ ಒಂದು ಭಾಗವೇ ಆಗಿ ಹೋಗಿತ್ತು. ಆದರೆ ಇದೀಗ ರಸ್ತೆ ಅಗಲವಾಗುತ್ತಿದೆ, ಆದರೆ ಈ ಮೂಕಜೀವಿಗಳ ವಿಚಾರದಲ್ಲಿ ನಮ್ಮ ಮನಸ್ಸು ಕಿರಿದಾಗುತ್ತಿದೆ, ಇವುಗಳ ಮೂಕವೇದನೆಯನ್ನು ಕಂಡವರ ಹೃದಯ ಭಾರವಾಗುತ್ತಿದೆ. ಇನ್ನು ಇಲ್ಲಿ ಹಕ್ಕಿಗಳ ಕಲರವ ಕೇಳಿಸದು, ‘ಹಿಕ್ಕೆ ಪ್ರಸಾದ’ವೂ ಸಿಗದು.

ಗೂಡಿನಲ್ಲಿರುವ ತನ್ನ ಮರಿಗೆ ಆಹಾರವನ್ನು ಹುಡುಕಿ ಹೊರಟಿದ್ದ ಅದೆಷ್ಟೋ ಹಕ್ಕಿಗಳು ಹಿಂತಿರುಗಿ ಬರುವಷ್ಟರಲ್ಲಿ ಎಷ್ಟೋ ಕಾಲದಿಂದ ಅವುಗಳ ನೆಲೆಯಾಗಿದ್ದ ಮರವೇ ನೆಲಕ್ಕೊರಗಿತ್ತು. ಇನ್ನು ಮರದಲ್ಲಿದ್ದ ಗೂಡುಗಳಲ್ಲಿದ್ದ ಮೊಟ್ಟೆಗಳು ಮತ್ತು ಹಕ್ಕಿಮರಿಗಳು ಮರದ ರೆಂಬೆ ಕೊಂಬೆಗಳೊಂದಿಗೇ ನೆಲಕ್ಕೆ ಬಿದ್ದು ನಾಶವಾಗಿ ಹೋಗಿದ್ದವು.

ಅಭಿವೃದ್ಧಿ ಕಾರ್ಯಗಳನ್ನು ನಡೆಸುವಾಗ ಅಕ್ಕಪಕ್ಕದ ಮರಗಳನ್ನು ಕಡಿಯುವುದು ಅನಿವಾರ್ಯವಾದರೂ ಈ ಸಂದರ್ಭದಲ್ಲಿ ಮರಗಳಲ್ಲಿ ಆಶ್ರಯ ಪಡೆದುಕೊಂಡಿರುವ ಪಕ್ಷಿಗಳಿಗೆ ಬದಲೀ ನೆಲೆ ಒದಗಿಸಿಕೊಡುವ ನಿಟ್ಟಿನಲ್ಲಿ ಪಕ್ಷಿ ಪ್ರಿಯರೊಂದಿಗೆ ಚರ್ಚಿಸಿ ಮುಂದುವರಿಯುತ್ತಿದ್ದರೆ ಮೂಕ ಜೀವಿಗಳು ಈ ರೀತಿ ನರಳಾಡುವುದನ್ನು ತಪ್ಪಿಸಬಹುದಿತ್ತಲ್ಲವೇ? ಮುಂಬರುವ ದಿನಗಳಲ್ಲಾದರೂ ಜಿಲ್ಲಾಡಳಿತ ಮತ್ತು ಕಾಮಗಾರಿಯ ಗುತ್ತಿಗೆದಾರರು ಈ ಕುರಿತಾಗಿ ಗಮನಹರಿಸುವರೇ ಎಂಬ ಪ್ರಶ್ನೆ ಪಕ್ಷಿ ಪ್ರಿಯರದ್ದು ಮತ್ತು ಸ್ಥಳೀಯರದ್ದಾಗಿದೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.