Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Team Udayavani, Mar 29, 2024, 8:33 PM IST
ಪಡುಬಿದ್ರಿ: ಕಾರೊಂದು ಬೈಕ್ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್ಟೆಬಲ್ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು ತೆಂಕ ಗರೋಡಿಯ ಎದುರು ಶುಕ್ರವಾರ ಸಂಭವಿಸಿದೆ.
ಘಟನೆಯಲ್ಲಿ ಕಾಪು ವೃತ್ತ ಕಚೇರಿಯ ಪೊಲೀಸ್ ಕಾನ್ಸ್ಟೆಬಲ್ ಶರಣಪ್ಪ ಮುಳ್ಳಾಲ್ (30) ಅವರ ಕಾಲಿಗೆ ಗಾಯವಾಗಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉದ್ಯಾವರದ ಕಾರು ಚಾಲಕಿಯ ಅನಿಯಂತ್ರಿತ ಚಾಲನೆಯೇ ಈ ಘಟನೆಗೆ ಕಾರಣ ಎನ್ನಲಾಗಿದ್ದು ಆಕೆಯ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.