
ತೆಕ್ಕಟ್ಟೆ: ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಈಚರ್ ವಾಹನ; ತಪ್ಪಿದ ಭಾರೀ ಅನಾಹುತ
Team Udayavani, Nov 28, 2022, 7:12 PM IST

ತೆಕ್ಕಟ್ಟೆ: ತೆಕ್ಕಟ್ಟೆ ರಾ.ಹೆ. 66ರ ಪ್ರಮುಖ ಜಂಕ್ಷನ್ನಲ್ಲಿ ಚಲಿಸುತ್ತಿದ್ದ ಈಚರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ನ. 28ರಂದು ಬೆಳಗ್ಗೆ ಗಂಟೆ 11 ಗಂಟೆಯ ಸುಮಾರಿಗೆ ಸಂಭವಿಸಿದೆ.
ಕುಂದಾಪುರದಿಂದ ಉಡುಪಿ ಕಡೆಗೆ ಮರಳು ಸಾಗಿಸುತ್ತಿದ್ದ ಈಚರ್ ವಾಹನ ಎದುರಿನಲ್ಲಿರುವ ಚಲಿಸುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ಆಯತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಈ ಪ್ರಮುಖ ಜಂಕ್ಷನ್ನಲ್ಲಿ ಸದಾ ಜನದಟ್ಟಣೆಯಿಂದ ಕೂಡಿದ್ದು, ಅದೃಷ್ಟವಶಾತ್ ಸಂಭವನೀಯ ಭಾರೀ ಅವಘಡವೊಂದು ತಪ್ಪಿದಂತಾಗಿದೆ.
ಗೊಂದಲಮಯ ಜಂಕ್ಷನ್
ತೆಕ್ಕಟ್ಟೆಯಲ್ಲಿ ಗ್ರಾಮೀಣ ಸಂಪರ್ಕ ರಸ್ತೆಯಿಂದ ಬರುವ ವಾಹನಗಳು ಏಕಾಏಕಿ ರಾ.ಹೆ. 66 ಅನ್ನು ಪ್ರವೇಶಿಸುತ್ತಿದ್ದು, ರಸ್ತೆಯ ಎರಡು ಕಡೆಗಳಲ್ಲಿ ಸಮೀಪದಲ್ಲಿಯೇ ಬಸ್ ತಂಗುದಾಣದಲ್ಲಿ ಬಸ್ ರಸ್ತೆಯ ಮೇಲೆ ನಿಲ್ಲಿಸುವ ಪರಿಣಾಮ ವಾಹನ ಸವಾರರಿಗೆ ಗೊಂದಲವಾಗುತ್ತಿದೆ. ಇದೇ ಕಾರಣದಿಂದ ಇಲ್ಲಿ ಹಲವು ಅವಘಡಗಳು ಸಂಭವಿಸಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಂದಾಪುರ: ತಾಯಿ ಜೊತೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ

ತೆಕ್ಕಟ್ಟೆ: ಕಾರಿಗೆ ಟ್ಯಾಂಕರ್ ಲಾರಿ ಢಿಕ್ಕಿ ; ನಾಲ್ವರು ವಿದ್ಯಾರ್ಥಿಗಳು ಪಾರು !

ಜ. 29ರಂದು ಕಟಪಾಡಿ ಏಣಗುಡ್ಡೆಯಲ್ಲಿ ‘ಕೌಸ್ತುಭ ರೆಸಿಡೆನ್ಸಿ’ ಹೊಟೇಲ್, ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಿಂಹಸ್ವಪ್ನವಾಗಿದೆ: ಸಿಎಂ ಬೊಮ್ಮಾಯಿ

ಶಾಲೆಗಳಲ್ಲಿ ಬಿಸಿಯೂಟಕ್ಕೆ ಅಕ್ಕಿ ಕೊರತೆ ಸಾಧ್ಯತೆ?
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
